ಬೆಂಗಳೂರು ನಗರವನ್ನು ಹಾಂಕಾಂಗ್ ನಂತೆ ಮಾಡ್ತೇವೆ: ಜೆಡಿಎಸ್
ಬೆಂಗಳೂರು, ಆಗಸ್ಟ್ 13: ಬೆಂಗಳೂರನ್ನು ಸಿಂಗಪುರದ ಮಾಡುತ್ತೇವೆ ಎಂದು ರಾಜಕಾರಣಿಗಳು ಈ ಮುಂಚೆ ಹೇಳಿದ್ದನ್ನು ಕೇಳಿದ್ದರೆ ಮರೆತು ಬಿಡಿ. ಜೆಡಿಎಸ್ ಪಕ್ಷ ಸಿಲಿಕಾನ್ ಸಿಟಿಯನ್ನು ಹಾಂಕಾಂಗ್ ನಂತೆ ಅಭಿವೃದ್ಧಿ ಪಡಿಸುವ ಭರವಸೆ ನೀಡಿದೆ. ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ತನ್ನ ಪ್ರಣಾಳಿಕೆಯನ್ನು ಗುರುವಾರ ಬಿಡುಗಡೆ ಮಾಡಿದೆ.
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಕಚೇರಿಯಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಮಾಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಪ್ರಣಾಳಿಕೆಯಲ್ಲಿರುವಂತೆ ಬೆಂಗಳೂರಿನ ಇಂದಿನ ದುಃಸ್ಥಿತಿಗೆ ಕಾಂಗ್ರೆಸ್ ಹಾಗೂ ಬಿಜೆಪಿಯೇ ಕಾರಣ ಎಂದರು.
ಪ್ರಣಾಳಿಕೆಗಳು: ಬಿಜೆಪಿ | ವಾಟಾಳ್ ಪಕ್ಷ | ಕಾಂಗ್ರೆಸ್ | ಲೋಕಸತ್ತಾ
ಗಾರ್ಡನ್ ಸಿಟಿ ಹೆಸರನ್ನು ಗಾರ್ಬೇಜ್ ಸಿಟಿಯಾಗಿದೆ. ನಗರದ ಬ್ರಾಂಡ್ ನೇಮ್ ಹಾಳಾಗಿದೆ. ಮೂಲ ಸೌಕರ್ಯ ಅಭಿವೃದ್ಧಿ ಎಲ್ಲೂ ಆಗಿಲ್ಲ. ಈ ಪ್ರಣಾಳಿಕೆಯಲ್ಲಿ ಈ ಹಿಂದೆ ಬೆಂಗಳೂರು ಅಭಿವೃದ್ಧಿಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ನೀಡಿದ ಕೊಡುಗೆ ಹಾಗೂ ಜೆಡಿಎಸ್ ಸರ್ಕಾರ ನೀಡಿದ ಕೊಡುಗೆಗಳನ್ನು ವಿವರಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಜೆಡಿಎಸ್ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು
* ಹಾಂಕಾಂಗ್ ಮಾದರಿಯಲ್ಲಿ ಕಡಿಮೆ ವೆಚ್ಚದಲ್ಲಿ 5 ಲಕ್ಷ ಮನೆ ನಿರ್ಮಾಣ
*
600 ಚ.ಮೀ.ಗಿಂತಾ ಕಡಿಮೆ ವಿಸ್ತೀರ್ಣದ ಮನೆಗಳಿಗೆ ತೆರಿಗೆ ವಿನಾಯಿತಿ
* ಬೆಂಗಳೂರಿನಲ್ಲಿ ಚೆನ್ನೈ ಮಾದರಿಯಲ್ಲಿ ಅನ್ನಪೂರ್ಣ ಕಿಚನ್ ಪ್ರಾರಂಭ
* ಕಡಿಮೆ ಆದಾಯ ವರ್ಗದ ಸುಮಾರು 15 ಲಕ್ಷ ಜನರಿಗೆ ಅನುಕೂಲವಾಗಲು ಅನ್ನಪೂರ್ಣ ಕಿಚ್ ಬಳಕೆ.
* ನಗರದ ನಿರಾಶ್ರಿತರಿಗೆ ಆಶ್ರಯ ತಾಣ ನಿರ್ಮಾಣ

ತ್ಯಾಜ್ಯ ವಿಲೇವಾರಿ ಬಗ್ಗೆ
* ತ್ಯಾಜ್ಯ ವಿಲೇವಾರಿ ಬಗ್ಗೆ ಶಾಲೆಗಳಲ್ಲಿ ಪಠ್ಯ ರಚನೆ
* ತ್ಯಾಜ್ಯ ವಿಲೇವಾರಿ ಬಗ್ಗೆ ಶಾಲೆಗಳಲ್ಲಿ ಪಠ್ಯ ಕ್ರಮ ಅಳವಡಿಕೆ
* ಜಾಹೀರಾತು ಮೂಲಕ ರೆವಿನ್ಯೂ ಸಂಗ್ರಹ
* ಒತ್ತುವರಿ ತೆರವುಗೊಳಿಸಿ ಕೆರೆಗಳ ರಕ್ಷಣೆ
* ಕಸ ವಿಲೇವಾರಿಗೆ ಅತ್ಯಾಧುನಿಕ ಕ್ರಮ
* ಇದಕ್ಕಾಗಿಯೇ ಬೆಂಗಳೂರು ತ್ಯಾಜ್ಯ ಸಂಗ್ರಹಣಾ ಪ್ರಾಧಿಕಾರ ರಚನೆ

24 ಗಂಟೆ ತೆರೆದಿರುವ ಔಷಧಿ ಮಳಿಗೆಗಳ ಸ್ಥಾಪನೆ
* ಸರ್ವರಿಗೂ ಚಿಕಿತ್ಸಾ ಸೌಲಭ್ಯ ದೊರೆಯುವಂತ ವ್ಯವಸ್ಥೆ, 24 ಗಂಟೆ ತೆರೆದಿರುವ ಔಷಧಿ ಮಳಿಗೆಗಳ ಸ್ಥಾಪನೆ
* ಬೆಂಗಳೂರಿನಲ್ಲಿ ಸಾರ್ವಜನಿಕ ಆರೋಗ್ಯ ಪ್ರಾಧಿಕಾರ ರಚನೆ.
* ಪ್ರಾಥಮಿಕ ಆರೋಗ್ಯ ಪ್ಯಾಕೇಜ್ ಮೂಲಕ ಎಲ್ಲರಿಗೂ ಚಿಕಿತ್ಸಾ ಸೌಲಭ್ಯವನ್ನು ನೀಡುವುದು. ಇದಕ್ಕೆ ಇಂಗ್ಲೆಂಡಿನ ಎನ್ ಎಚ್ ಎಸ್ ಮಾದರಿ.* ನಗರದಲ್ಲಿ ಆಗುವ ಶೇ 40 ರಷ್ಟು ಹೆರಿಗೆಗಳು ಬಿಬಿಎಂಪಿ ಆಸ್ಪತ್ರೆಗಳಲ್ಲಿ ಆಗುವಂತೆ ವ್ಯವಸ್ಥೆ ಮಾಡಲಾಗುವುದು.
ಸಾಂಸ್ಕೃತಿಕ ಹೆಗ್ಗುರುತು, ವೈಜ್ಞಾನಿಕ ಮಹತ್ವ
ಬೆಂಗಳೂರು ಕರಗಕ್ಕೆ ಹೆಚ್ಚಿನ ಮಾನ್ಯತೆ, ಹ್ಯಾಮ್ ರೇಡಿಯೋ ಕೇಂದ್ರ, ಕೆಂಪೇಗೌಡರ ಜಯಂತಿಯನ್ನು 9 ದಿನ ಆಚರಿಸುವುದು, ಚಿತ್ರಸಂತೆ, ಸಿಡ್ನಿ ಒಪೇರಾ ಮದರಿ ಮಲ್ಟಿಪ್ಲೆಕ್ಸ್ ಕಲಾಮಂದಿರ ನಿರ್ಮಾಣ, ಬೆಂಗಳೂರು ಹಬ್ಬವನ್ನು ಆಚಣೆಗೆ ಒತ್ತು, ಮಾಹಿತಿ ತಂತ್ರಜ್ಞಾನ ಎಂಪೋರಿಯಂ ಆರಂಭಿಸಿ ಹೊಸ ಆವಿಷ್ಕಾರಗಳಿಗೆ ಅವಕಾಶ ನೀಡಲಾಗುವುದು, ಏರೋಸ್ಪೇಸ್ ಮ್ಯೂಸಿಯಂ ಸ್ಥಾಪನೆ
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications