ಬಿಬಿಎಂಪಿ ಚುನಾವಣೆ ಮಕ್ಕಳಾಟವಲ್ಲ: ದೇವೇಗೌಡ
ಬೆಂಗಳೂರು, ಜು. 17: ಬಿಬಿಎಂಪಿ ಚುನಾವಣೆಯನ್ನು ರಾಜ್ಯ ಸರ್ಕಾರ ಮಕ್ಕಳಾಟ ಎಂದು ಅಂದುಕೊಂಡಿದೆ. ನಗರ ಪ್ರದಕ್ಷಿಣೆ ಮಾಡಿ, ಬಿಬಿಎಂಪಿಗೆ ಬೇಕಾದವರನ್ನು ನೇಮಿಸಿಕೊಂಡ ಮೇಲೂ ರಾಜ್ಯ ಸರ್ಕಾರ ಬಿಬಿಎಂಪಿ ಚುನಾವಣೆಗೆ ಯಾಕೆ ಹಿಂದೇಟು ಹಾಕುತ್ತಿದೆ? ಎಂದು ಮಾಜಿ ಪ್ರಧಾನಿ ಎಚ್ ಡಿ. ದೇವೇಗೌಡ ಪ್ರಶ್ನೆ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ, ಸುಪ್ರೀಂ ಕೋರ್ಟ್ ಗೆ ಹೋಗುವುದು ಅವರಿಗೆ ಸಾಮಾನ್ಯವಾಗಿ ಬಿಟ್ಟಿದೆ. ಮೂರು ಬಾರಿ ಸುಪ್ರೀಂ ಕೋರ್ಟ್ ಗೆ ಹೋದರೂ ರಾಜ್ಯ ಸರ್ಕಾರಕ್ಕೆ ಬುದ್ಧಿ ಬಂದಿಲ್ಲ. ಚುನಾವಣೆ ಮುಂದಕ್ಕೆ ಹಾಕುವ ತಂತ್ರಕ್ಕೆ ಅರ್ಥವೇ ಇಲ್ಲ ಎಂದು ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಮೇಲೆ ವಾಗ್ದಾಳಿ ಮಾಡಿದರು.[ಬಿಬಿಎಂಪಿ ಚುನಾವಣೆ ವೇಳಾಪಟ್ಟಿ ನೋಡಿ]

ಇಂಥ ಕೆಳಮಟ್ಟದ ವ್ಯವಸ್ಥೆಯನ್ನು ನಾನು ಇಲ್ಲಿವರೆಗೂ ಕಂಡಿಲ್ಲ. ಚುನಾವಣಾ ಆಯೋಗವನ್ನು ಸರ್ಕಾರ ಆಟ ಆಡಿಸುತ್ತಿದೆ. ಆಯೋಗ ಸಂವಿಧಾನ ಬದ್ಧ ಸಂಸ್ಥೆಯಾಗಿದ್ದು ಅದಕ್ಕೆ ಸ್ವತಂತ್ರ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯವಿದೆ ಎಂದು ಹೇಳಿದರು.[ನವೀಕರಣಗೊಂಡ ಟೌನ್ ಹಾಲ್ ಬಾಡಿಗೆ ದುಬಾರಿ?]
ನರೇಂದ್ರ ಮೋದಿಯವರ ಸಿಲ್ಕ್ ಇಂಡಿಯಾ, ಸಿದ್ದರಾಮಯ್ಯನವರ ಅಹಿಂದದಿಂದ ರೈತರ ಉದ್ಧಾರ ಸಾಧ್ಯವಿಲ್ಲ. ಇಲ್ಲಿಯವರೆಗೆ ಯಾರಾದರೂ ರೈತ ಪರವಾಗಿ ಮಾತನಾಡಿದ್ದನ್ನು ನೋಡಿದ್ದೆವೆಯೇ? ಮೊಸಳೆ ಕಣ್ಣಿರು ಹಾಕುವುದರಿಂದ ಯಾವ ಪ್ರಯೋಜನವಿಲ್ಲ ಎಂದು ದೂರಿದರು.
ಮುಖ್ಯಮಂತ್ರಿ ಸ್ಥಾನದಲ್ಲಿ ಇದ್ದಷ್ಟು ದಿನ ಒಳ್ಳೆ ಕೆಲಸ ಮಾಡಬೇಕು. ಹುದ್ದೆ ಬರುತ್ತದೆ ಹೋಗುತ್ತದೆ. ಇದನ್ನು ಎಲ್ಲ ಪಕ್ಷದ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications