ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೇಯರ್ ಚುನಾವಣೆ : ಅಶೋಕ ಸಮರ್ಥಿಸಿಕೊಂಡ ಯಡಿಯೂರಪ್ಪ

|
Google Oneindia Kannada News

Recommended Video

ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಸೋತಿದ್ರೂ ಆರ್ ಅಶೋಕ್ ರನ್ನ ಸಪೋರ್ಟ್ ಮಾಡಿದ ಯಡಿಯೂರಪ್ಪ

ಬೆಂಗಳೂರು, ಸೆಪ್ಟೆಂಬರ್ 30 : ಬಿಬಿಎಂಪಿಯ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಸೋತರೂ ಪಕ್ಷದ ಮುಂದಾಳತ್ವ ವಹಿಸಿಕೊಂಡಿದ್ದ ಆರ್.ಅಶೋಕ್ ಅವರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡರು.

ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಯಡಿಯೂರಪ್ಪ, 'ಎಲ್ಲಾ ಕಡೆ ಬಿಜೆಪಿ ದೊಡ್ಡ ಪಕ್ಷವಾಗಿ ಬರುತ್ತದೆ. ಆದರೆ, ದೇವರ ಇಚ್ಛೆ ಇಲ್ಲದ ಕಾರಣ ಅಧಿಕಾರ ಸಿಕ್ಕಿಲ್ಲ' ಎಂದರು.

ಬಿಬಿಎಂಪಿ ನೂತನ ಮೇಯರ್ ಗಂಗಾಂಬಿಕೆ ಸಂಕ್ಷಿಪ್ತ ವ್ಯಕ್ತಿ ಚಿತ್ರಣಬಿಬಿಎಂಪಿ ನೂತನ ಮೇಯರ್ ಗಂಗಾಂಬಿಕೆ ಸಂಕ್ಷಿಪ್ತ ವ್ಯಕ್ತಿ ಚಿತ್ರಣ

'ಪ್ರಜಾಪ್ರಭುತ್ವದಲ್ಲಿ 49 ಅಂದರೆ ಸೊನ್ನೆಗೆ ಸಮ. 51 ಬಂದರೆ ನೂರಕ್ಕೆ ಸಮ. ಅಧಿಕಾರ ಸಿಗದೆ ಇರೋದು ನಮ್ಮ ವೈಫಲ್ಯ. ಇದಕ್ಕಾಗಿ ಯಾರನ್ನು ದೂರುವ ಅಗತ್ಯವಿಲ್ಲ' ಎಂದು ಹೇಳಿದರು.

ಬಿಬಿಎಂಪಿ ಮೇಯರ್ ಚುನಾವಣೆ, ಬಿಜೆಪಿಗೆ ಹಿನ್ನಡೆ ಆಗಿದ್ದೇಕೆ?ಬಿಬಿಎಂಪಿ ಮೇಯರ್ ಚುನಾವಣೆ, ಬಿಜೆಪಿಗೆ ಹಿನ್ನಡೆ ಆಗಿದ್ದೇಕೆ?

BBMP mayor election : Yeddyurappa defends R Ashok

'ಆರ್.ಅಶೋಕ್ ಅವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಆದರೆ, ಕೊನೆ ಘಳಿಗೆಯಲ್ಲಿ ಅನಂತ್ ಕುಮಾರ್ ಮತ್ತು ನಿರ್ಮಲಾ ಸೀತಾರಾಮನ್ ಅವರು ಅನಿವಾರ್ಯ ಕಾರಣದಿಂದ ಬರುವುದಕ್ಕೆ ಆಗಲಿಲ್ಲ. ಅದು ನಮ್ಮ ಸೋಲಿಗೆ ಕಾರಣವಾಯಿತು' ಎಂದರು.

ಕಾಂಗ್ರೆಸ್ ಗೂಂಡಾಗಿರಿ ಮೂಲಕ ಮೇಯರ್ ಸ್ಥಾನ ಹಿಡಿದಿದೆ: ಆರ್.ಅಶೋಕ್ಕಾಂಗ್ರೆಸ್ ಗೂಂಡಾಗಿರಿ ಮೂಲಕ ಮೇಯರ್ ಸ್ಥಾನ ಹಿಡಿದಿದೆ: ಆರ್.ಅಶೋಕ್

ಸೆ.28ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಜಯ ಸಿಕ್ಕಿತ್ತು. ಗಂಗಾಬಿಕೆ ಅವರು ಮೇಯರ್ ಆಗಿ, ರಮೀಳಾ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದರು.

English summary
Karnataka BJP president B.S.Yeddyurappa defended R.Ashok. In Bengaluru he said, Former Deputy Chief Minister R.Ashok made effort to won in BBMP mayor election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X