ಬಿಬಿಎಂಪಿ ಮೇಯರ್ ಆಯ್ಕೆಗೆ ಸೆ.11ಕ್ಕೆ ಚುನಾವಣೆ
ಬೆಂಗಳೂರು, ಸೆ. 02 : ಭಾರೀ ಕುತೂಹಲ ಕೆರಳಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಸೆ.11ರಂದು ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದ್ದು, 260 ಸದಸ್ಯರು ಮತದಾನ ಮಾಡಲಿದ್ದಾರೆ.
ಬುಧವಾರ ನಗರಾಭಿವೃದ್ಧಿ ಇಲಾಖೆ ಪ್ರಾದೇಶಿಕ ಆಯುಕ್ತರು ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ. ಸೆ.11ರ ಶುಕ್ರವಾರ ಬೆಳಗ್ಗೆ 11.30ಕ್ಕೆ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. 260 ಸದಸ್ಯರು ಮೇಯರ್ ಮತ್ತು ಉಪ ಮೇಯರ್ ಆಯ್ಕೆ ಮಾಡಲಿದ್ದಾರೆ. [ಮೇಯರ್ ಚುನಾವಣೆ ಮ್ಯಾಜಿಕ್ ನಂ 131]

ಮೈತ್ರಿ ಕಸರತ್ತು : ಮೇಯರ್ ಮತ್ತು ಉಪ ಮೇಯರ್ ಗದ್ದುಗೆ ಏರಲು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದು, ಸರಣಿ ಸಭೆ ಮತ್ತು ಮಾತುಕತೆಗಳು ನಡೆಯುತ್ತಿವೆ. ಇನ್ನೂ ಮೈತ್ರಿಕೂಟದ ಬಗ್ಗೆ ಸ್ಪಷ್ಟವಾದ ಚಿತ್ರಣಗಳು ಲಭ್ಯವಾಗಿಲ್ಲ. [ದೇವೇಗೌಡ-ಪರಮೇಶ್ವರ ಭೇಟಿ]
ಬಿಬಿಎಂಪಿ ಚುನಾವಣೆಯಲ್ಲಿ 100 ಸ್ಥಾನಗಳನ್ನುಗಳಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಮೇಯರ್ ಪಟ್ಟದ ಮೇಲೆ ಕಣ್ಣಿಟ್ಟಿದೆ. ಬಿಜೆಪಿಯವರೇ ಮೇಯರ್ ಕಾದು ನೋಡಿ ಎಂದು ನಾಯಕರು ಈಗಾಗಲೇ ಹೇಳಿದ್ದಾರೆ. ಮೇಯರ್ ಪಟ್ಟ ಗಿಟ್ಟಿಸಲು ಬಿಜೆಪಿ ಯಾವ ಕಾರ್ಯತಂತ್ರ ರೂಪಿಸಿದೆ ಎನ್ನುವುದು ಇನ್ನೂ ನಿಗೂಢ.
ಬಿಜೆಪಿ ಬಲಾಬಲ : ಬಿಜೆಪಿ ಶಾಸಕರು, ಸಂಸದರು, ಪರಿಷತ್ ಸದಸ್ಯರು ಸೇರಿ 125 ಸದಸ್ಯ ಬಲ ಹೊಂದಿದೆ. ಹಲಸೂರು ವಾರ್ಡ್ನ ಪಕ್ಷೇತರ ಸದಸ್ಯೆ ಮಮತಾ ಶರವಣ ಅವರು ಬಿಜೆಪಿ ಸೇರಿದ್ದಾರೆ. ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಬಿಜೆಪಿಗೆ ಬೆಂಬಲ ನೀಡಿದರೆ ಬಿಜೆಪಿ ಬಲ 127 ಆಗುತ್ತದೆ.
ಮೈತ್ರಿಕೂಟದ ಬಲ : ಕಾಂಗ್ರೆಸ್ 100 ಸ್ಥಾನಗಳನ್ನು ಹೊಂದಿದ್ದು (ಶಾಸಕರು, ಸಂಸದರು, ಪರಿಷತ್ ಸದಸ್ಯರು ಸೇರಿ), ಜೆಡಿಎಸ್ 22 ಸ್ಥಾನಗಳನ್ನು ಹೊಂದಿದೆ. 7 ಪಕ್ಷೇತರ ಬಿಬಿಎಂಪಿ ಸದಸ್ಯರು, 2 ಪಕ್ಷೇತರ ವಿಧಾನಪರಿಷತ್ ಸದಸ್ಯರು, ಒಬ್ಬರು ರಾಜ್ಯಸಭಾ ಸದಸ್ಯರು ಸೇರಿದರೆ 132 ಸದಸ್ಯ ಬಲವಾಗುತ್ತದೆ. ಮೇಯರ್ ಆಯ್ಕೆಗೆ 131 ಮತಗಳು ಸಾಕು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications