ಸಿಎಂ ಓಡಾಡುವ ರಸ್ತೆಯಲ್ಲೇ ಗುಂಡಿ, ರಿಪೇರಿ ಮಾಡಿ

ಬೆಂಗಳೂರು, ಆಗಸ್ಟ್ 07: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಅತಿ ದೊಡ್ಡ ಸಮಸ್ಯೆಗಳಲ್ಲಿ ಒಂದೆನಿಸಿರುವ ರಸ್ತೆಗುಂಡಿಗೆ ಪರಿಹಾರ ಕಂಡುಕೊಳ್ಳಲು ಸತತ ಪ್ರಯತ್ನ ಮಾಡಲಾಗುತ್ತಿದೆ. ದೂರು ಸ್ವೀಕಾರ ಹಾಗೂ ಪರಿಹಾರಕ್ಕಾಗಿ ಮೊಬೈಲ್ ಅಪ್ಲಿಕೇಷನ್ ಬಳಕೆಯಲ್ಲಿದೆ. ಆದರೆ, ಎಷ್ಟೋ ಕಡೆಗಳಲ್ಲಿ ಸಮಸ್ಯೆಗಳು ಬಿಬಿಎಂಪಿ ಗಮನಕ್ಕೆ ಬರುವುದಿಲ್ಲ.

ಜೆಪಿ ನಗರದ ನಿವಾಸಿಯಾಗಿರುವ ಮಾನ್ಯ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಜಯನಗರದ ಸೌತ್ ಎಂಡ್ ಸರ್ಕಲ್ ನ ಸಿಗ್ನಲ್ ಬಳಿಯಲ್ಲೇ ರಸ್ತೆ ಗುಂಡಿ ಇನ್ನೂ ದುರಸ್ತಿಯಾಗಿಲ್ಲ. ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದಂತೆ ಬಂದ ಮಳೆಯಿಂದಾಗಿ ಪರಿಸ್ಥಿತಿ ಇನ್ನೂ ಹದಗೆಟ್ಟಿದೆ. ಸೌತ್ ಎಂಡ್ ಸರ್ಕಲ್ ನ ಚಿತ್ರಗಳು ಇಲ್ಲಿವೆ...

BBMP: South End Circle road pothole repair it

ಬಿಬಿಎಂಪಿಯ 20 ಇಲಾಖೆಗಳಿಗೆ ಸಂಬಂಧಿಸಿದ ದೂರುಗಳನ್ನು ಮೊಬೈಲ್ ಮೂಲಕವೇ ನೀಡಬಹುದಾಗಿದೆ.ದೂರಿಗೆ ಸಂಬಂಧಪಟ್ಟಂತೆ ತೆಗೆದುಕೊಂಡ ಕ್ರಮಗಳ ವಿವರ ನಿಮ್ಮ ಮೊಬೈಲ್‌ಗೆ ಸಂದೇಶ ರೂಪದಲ್ಲಿ ಬರುತ್ತದೆ.

BBMP: South End Circle road pothole repair it

ಅಪ್ಲಿಕೇಶನ್ ಮೂಲಕ ಬರುವ ದೂರುಗಳನ್ನು ನಿರ್ವಹಣೆ ಮಾಡಲು 24 ಗಂಟೆಗಳ ಕಾಲವೂ ಕಾರ್ಯನಿರ್ವಹಣೆ ಮಾಡುವ ಸಹಾಯವಾಣಿ ಕಾರ್ಯ ನಿರ್ವಹಿಸುತ್ತಿದೆ.

ಬಿಬಿಎಂಪಿ ಸಹಾಯ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ ಮತ್ತು ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. 080-22660000 ಸಹಾಯವಾಣಿಗೆ ಕರೆ ಮಾಡಿ ಅಥವಾ 9480685700ಗೆ ವಾಟ್ಸಪ್ ಮೂಲಕ ರಸ್ತೆಗುಂಡಿ ಸಮಸ್ಯೆ ಬಗ್ಗೆ ಸಾರ್ವಜನಿಕರು ದೂರು ನೀಡಬಹುದಾಗಿದೆ.

BBMP: South End Circle road pothole repair it

ಇದಲ್ಲದೆ ಆನ್ ಲೈನ್ ಮೂಲಕ ದೂರು ನೀಡಿ, ದೂರಿನ ಪ್ರಗತಿ ಬಗ್ಗೆ ಟ್ರ್ಯಾಕ್ ಮಾಡಬಹುದಾಗಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+