ಕೆಂಪೇಗೌಡ ಬಡಾವಣೆ: ತಾತ್ಕಾಲಿಕ ಪಟ್ಟಿ ಪ್ರಕಟಿಸಲು ಬಿಡಿಎ ಸಿದ್ಧತೆ
ಬೆಂಗಳೂರು, ಮೇ 19: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಡಪ್ರಭು ಕೆಂಪೇಗೌಡ ಬಡಾವಣೆಯ ಸೈಟು ಹಂಚಿಕೆ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಇದೀಗ ಪ್ರಕ್ರಿಯೆಗೆ ಮತ್ತೆ ಜೀವ ಬಂದಿದ್ದು,ಎರಡನೇ ಹಂತದಲ್ಲಿ ಐದು ಸಾವಿರ ನಿವೇಶನ ಹಂಚಲು ಈ ತಿಂಗಳೊಳಗೆ ಫಲಾನುಭವಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲು ಬಿಡಿಎ ಸಿದ್ಧತೆ ನಡೆಸಿದೆ.
2017ರ ಮಾರ್ಚ್ನಲ್ಲೇ ತಾತ್ಕಾಲಿಕ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದರೂ, ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪ್ರಕ್ರಿಯೆಯನ್ನು ನಿಲ್ಲಿಸಲಾಗಿತ್ತು. ಈಗ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಪ್ರಾಧಿಕಾರ ತನ್ನ ಪ್ರಕ್ರಿಯೆಗೆ ಮರು ಚಾಲನೆ ನೀಡಿದೆ. ಬಾಕಿ ಉಳಿದಿರುವ ಕೆಲಸವನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ತಿಂಗಳೊಳಗೆ ಅರ್ಹ ಸೈಟ್ ಆಕಾಂಕ್ಷಿಗಳ ಹೆಸರು ಹೊರಬೀಳಲಿದೆ.
ನೀತಿ ಸಂಹಿತೆ ಮುನ್ನ ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿಗಳನ್ನು ನಿವೇಶನದ ಅಳತೆವಾರು ವಿಂಗಡಿಸಲಾಗಿದೆ. ಆಯಾ ವರ್ಗದ ಜನರಿಗೆ ಇಂತಿಷ್ಟು ನಿವೇಶನ ವಿತರಿಸಲು ಮೀಸಲು ನಿಯಮವನ್ನು ಅನುಸರಿಸಲಾಗಿದೆ. ಈ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದ ವೇಳೆ ಸಂಹಿತೆಯ ಬಿಸಿ ತಟ್ಟಿತ್ತು.

ಚುನಾವಣೆಗೆ ನಿಯೋಜನೆಯಾಗಿದ್ದ ಅಧಿಕಾರಿ, ಸಿಬ್ಬಂದಿ ವಾಪಸ್ ತಮ್ಮ ಕಚೇರಿಯಗಳಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಾಕಿ ಉಳಿದಿರುವ ಪ್ರಕ್ರಿಯೆ ಪೂರ್ಣಗೊಳಸಿಲು ಕೆಲ ದಿನಗಳು ಹಿಡಿಯಲಿದೆ.
ಅಂತಿಮ ಒಟ್ಟಿ ಬಳಿಕ ಠೇವಣಿ ವಾಪಸ್: ಅರ್ಜಿ ಸಲ್ಲಿಸಿರುವವರಿಗೆ ನಿವೇಶನ ಹಂಚಿಕೆ ಲಭ್ಯವಾಗದಿದ್ದಲ್ಲಿ ಅಂತವರಿಗೆ ತಾವು ಪಾವತಿಸಿರುವ ಠೇವಣಿ ಹಣವನ್ನು ವಾಪಸ್ ಮಾಡಲಾಗುತ್ತದೆ. ಇದು ಅಂತಿಮ ಪಟ್ಟಿ ಪ್ರಕಟವಾದ ನಂತರವಷ್ಟೇ ಅವರವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.
ಮೊದಲ ಹಂತದ ಸೈಟ್ ಹಂಚಿಕೆ ವೇಳೆ ಠೇವಣಿ ಹಣ ವಾಪಸ್ ತಡವಾಗಿತ್ತು. ಹೆಚ್ಚಿನ ಮಂದಿಯ ಬ್ಯಾಂಕ್ ಖಾತೆಯ ಐಎಫ್ಎಸ್ಸಿ ಸಂಖ್ಯೆ ನಮೂದಿಸದ ಕಾರಣ ಹಣ ಜಮೆಗೆ ಅಡ್ಡಿಯಾಗಿತ್ತು. ಈ ಬಾರಿ ಗೊಂದಲ ಆಗದಿರಲು ಐಎಫ್ಎಸ್ಸಿ ಸಂಖ್ಯೆಯನ್ನು ಕಡ್ಡಾಯವಾಗಿ ಅರ್ಜಿಯಲ್ಲಿ ನಮೂದಿಸಿಕೊಳ್ಳಲಾಗಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications