ಉಕ್ಕಿನ ಸೇತುವೆ ನಿರ್ಮಾಣ ಸದ್ಯಕ್ಕಿಲ್ಲ: ಕರ್ನಾಟಕ ಸರ್ಕಾರ
ಕರ್ನಾಟಕ ಸರ್ಕಾರದ ಉದ್ದೇಶಿತ ಬಹುಕೋಟಿ ಉಕ್ಕಿನ ಸೇತುವೆ(Steel Flyover) ನಿರ್ಮಾಣ ಸದ್ಯಕ್ಕೆ ಕೈಗೆತ್ತಿಕೊಳ್ಳುತ್ತಿಲ್ಲ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ವಕೀಲರು ಗುರುವಾರ ಬೆಳಗ್ಗೆ ಹೈಕೋರ್ಟಿನಲ್ಲಿ ಹೇಳಿದ್ದಾರೆ.
ಬೆಂಗಳೂರು, ನವೆಂಬರ್ 03: ಕರ್ನಾಟಕ ಸರ್ಕಾರದ ಉದ್ದೇಶಿತ ಬಹುಕೋಟಿ ಉಕ್ಕಿನ ಸೇತುವೆ(Steel Flyover) ನಿರ್ಮಾಣ ಸದ್ಯಕ್ಕೆ ಕೈಗೆತ್ತಿಕೊಳ್ಳುತ್ತಿಲ್ಲ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ವಕೀಲರು ಗುರುವಾರ ಬೆಳಗ್ಗೆ ಹೈಕೋರ್ಟಿನಲ್ಲಿ ಹೇಳಿದ್ದಾರೆ.
ಬಸವೇಶ್ವರ ವೃತ್ತದಿಂದ ಹೆಬ್ಬಾಳದ ಎಸ್ಟೀಮ್ ಮಾಲ್ ವರೆಗಿನ ಉದ್ದೇಶಿತ ಉಕ್ಕಿನ ಮೇಲ್ಸೇತುವೆ ನಿರ್ಮಾಣ ಸಾಧ್ಯತೆ ಬಾಧ್ಯತೆ, ಕಾನೂನಿನ ತೊಡಕು, ಸಂವಿಧಾನಿಕ ವಿಷಯಗಳನ್ನು ಪರಿಗಣಿಸಿ ಈ ಬಗ್ಗೆ ತೀರ್ಪು ನೀಡುವುದಾಗಿ ಹೈಕೋರ್ಟ್ ಹೇಳಿದೆ.
ರಾಷ್ಟ್ರೀಯ ಹಸಿರು ಪ್ರಾಧಿಕಾರ (ಎನ್ ಜಿಟಿ) ದ ಆದೇಶ(injunction order) ವನ್ನು ಪರಿಗಣಿಸಿರುವ ಹೈಕೋರ್ಟ್, ಉಕ್ಕಿನ ಸೇತುವೆ ನಿರ್ಮಾಣಕ್ಕೆ ತಡೆ ಕೋರಿ ಸಲ್ಲಿಸಲವಿಚಾರಣೆಯನ್ನು ಮುಂದೂಡಿದೆ.

ಸುಮಾರು 6.7 ಕಿಲೋ ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ1,761 ಕೋಟಿ ರು ಎಂದು ಅಂದಾಜು ವೆಚ್ಚ ನಿಗದಿ ಮಾಡಲಾಗಿದೆ.ಸ್ಟೀಲ್ ಫ್ಲೈಓವರ್ ಬೇಕು ಹಾಗೂ ಬೇಡ ಎಂದು ನಾಗರಿಕರು ನಡೆಸಿದ ಪ್ರತಿಭಟನೆಗಳು, ಅಹವಾಲುಗಳು, ತಜ್ಞರ ವರದಿಗಳನ್ನು ಕೂಡಾ ಹೈಕೋರ್ಟ್ ಪರಿಶೀಲಿಸಲಿದೆ.
ಉಕ್ಕಿನ ಸೇತುವೆ ನಿರ್ಮಾಣಕ್ಕೆ ರಾಷ್ಟ್ರೀಯ ಹಸಿರು ಪ್ರಾಧಿಕಾರ ಈಗಾಗಲೇ ನಾಲ್ಕುವಾರಗಳ ತಡೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು. ಎನ್ ಜಿಟಿ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವಂತೆ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಜಸ್ಟೀಸ್ ಎನ್ ಎಸ್ ನಂಬಿಯಾರ್ ಅವರಿದ್ದ ಪ್ರಾಧಿಕಾರ ಮೇಲ್ಕಂಡ ಅದೇಶ ನೀಡಿತ್ತು.
ಈ ನಡುವೆ ಸ್ಟೀಲ್ ಫ್ಲೈಓವರ್ ಬೇಡ, ಟೆಂಡರ್ ಕ್ಯಾನ್ಸಲ್ ಮಾಡಿ ಎನ್ನುವ ನಾಗರಿಕ ಸಮಿತಿ(ಸಿಟಿಜನ್ ಫಾರ್ ಬೆಂಗಳೂರು) ಅವರು ನವೆಂಬರ್ 6ರ ಭಾನುವಾರದಂದು ಸತ್ಯಾಗ್ರಹ ನಡೆಸಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications