ಹಂಗೇರಿ ಕೈಯಲ್ಲಿ ಬೆಂಗಳೂರನ್ನು ರಕ್ಷಿಸಲು ಸಾಧ್ಯವೇ?
ನವದೆಹಲಿ, ಡಿಸೆಂಬರ್. 01: ಹಂಗೇರಿ ಕೈಯಲ್ಲಿ ಬೆಂಗಳೂರನ್ನು ರಕ್ಷಿಸಲು ಸಾಧ್ಯವೇ? ಹೌದು ಇಂಥದ್ದೊಂದು ಪ್ರಶ್ನೆ ಕೇಳುವ ಸಂದರ್ಭ ಬಂದಿದೆ. ರಾಸಾಯನಿಕ ತುಂಬಿರುವ ಬೆಳ್ಳಂದೂರು ಮತ್ತು ವರ್ತೂರು ಕೆರೆಯನ್ನು ಸ್ವಚ್ಛಮಾಡಲು ರಾಜ್ಯ ಸರ್ಕಾರ ಹಂಗೇರಿಯ ತಂತ್ರಜ್ಞರೊಂದಿಗೆ ಮಾತುಕತೆ ನಡೆಸಿದೆ.
ಹಂಗೇರಿಯ ತಂತ್ರಜ್ಞರ ಜತೆ ಕರ್ನಾಟಕದ ಹಿರಿಯ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಬೆಂಗಳೂರು ಅಭಿವೃದ್ಧಿ ಸಚಿವ ಕೆ ಜೆ ಜಾರ್ಜ್ ಹಂಗೇರಿಯ ತಂತ್ರಜ್ಞರಿಗೆ ಮಾಲಿನ್ಯ ಮತ್ತು ಅದರಿಂದಾಗುತ್ತಿರುವ ಸಮಸ್ಯೆ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದಾರೆ.[ಒಡಲಲಿ ವಿಷ ತುಂಬಿಕೊಂಡ ಬೆಳ್ಳಂದೂರು ಕೆರೆಯ ಕಥೆ ವ್ಯಥೆ]

ಹಂಗೇರಿ ತಂಡ ಭೇಟಿ ನೀಡಲಿದೆ
ಹಂಗೇರಿಯ ತಂಡ ಬೆಳ್ಳಂದೂರು ಮತ್ತು ವರ್ತೂರು ಕೆರೆಗೆ ಭೇಟಿ ನೀಡಲಿದೆ. ಅಲ್ಲದೇ ಈ ಸಮಸ್ಯೆ ಹೇಗೆ ಬಗೆಹರಿಸಬೇಕು ಎಂಬ ಸಲಹೆಗಳನ್ನೊಳಗೊಂಡ ಪ್ರಸ್ತಾವೆಯೊಂದು ರಾಜ್ಯ ಸರ್ಕಾರದ ಮುಂದೆ ಇಡಲಿದೆ.[ಗೂಗಲ್ ಮ್ಯಾಪ್ ನಲ್ಲಿ 'ಬೆಳ್ಳಂದೂರು ಲೇಕ್' ಹುಡುಕಬೇಡಿ!]
ರಾಜ್ಯ ಸರ್ಕಾರ 'ಪುರೆಕೋ' ಲಿಮಿಟೆಡ್ ಕಂಪನಿಯೊಂದಿಗೆ ಮಾತುಕತೆ ಮಾಡಿದೆ. ಇಂಥ ಸಮಸ್ಯೆಗಳನ್ನು ಬಗೆಹರಿಸಿದ ಇತಿಹಾಸ ಕಂಪನಿಯ ಹಿಂದಿದೆ. ರಾಸಾಯನಿಕ ನೊರೆ ಸಮಸ್ಯೆ ದಿನೇ ದಿನೇ ಉಲ್ಬಣಗೊಳ್ಳುತ್ತಿದ್ದು ಸ್ಥಳೀಯರು ನಡೆಸಿದ ಹೋರಾಟಕ್ಕೆ ಫಲ ಸಿಕ್ಕಿಲ್ಲ. ಅಲ್ಲದೇ ರಾಜ್ಯ ಸರ್ಕಾರ ಸಹ ಶಾಶ್ವತ ಪರಿಹಾರಕ್ಕಾಗಿ ಪರ್ಯಾಯ ಯೋಜನೆಗಳತ್ತ ಗಮನ ಹರಿಸುತ್ತಿದೆ ಎಂಬುದಕ್ಕೆ ಈ ಮಾತುಕತೆಯೇ ಸಾಕ್ಷಿಯಾಗಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ











Click it and Unblock the Notifications