ಬುರ್ಖಾ ಧರಿಸಿ ಬಂದವಳು ಗಂಡು ಮಗು ಹೊತ್ತೊಯ್ದಳು!
ಬೆಂಗಳೂರು, ಅಕ್ಟೋಬರ್. 05: ಮಕ್ಕಳ ಕಳ್ಳರು ಪ್ರತಿ ದಿನ ಹೊಸ ಹೊಸ ತಂತ್ರ ಸಂಶೋಧನೆ ಮಾಡುತ್ತಿದ್ದಾರೆ. ಆಸ್ಪತ್ರೆಗೆ ತೆರಳಿ ಪರಿಚಯಸ್ಥರಂತೆ ವರ್ತಿಸಿ ಸಮಯ ಸಿಕ್ಕಾಗ ಮಗುವಿನೊಂದಿಗೆ ನಾಪತ್ತೆಯೂ ಆಗುತ್ತಾರೆ.
ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಎರಡು ದಿನದ ನವಜಾತ ಗಂಡು ಮಗುವನ್ನು ಬೌರಿಂಗ್ ಆಸ್ಪತ್ರೆಯಿಂದ ಹೊತ್ತೊಯ್ದಿದ್ದಾಳೆ. ಮಹಿಳೆ ಮಗುವನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರ ಹೋಗುತ್ತಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.[ಕಳ್ಳತನ ಬಯಲು ಮಾಡಿದ ಕಳ್ಳಿಯ ಸೆಲ್ಫಿ ಹುಚ್ಚು]

ಬೌರಿಂಗ್ ಆಸ್ಪತ್ರೆಯಲ್ಲಿ ನಡೆದ ಪ್ರಕರಣ ಭಾನುವಾರ ಬೆಳಕಿಗೆ ಬಂದಿದೆ. ಸೈಯದ್ ಹಬೀಬ್ ಮತ್ತು ಫರೀದಾ ದಂಪತಿಗಳ ಮಗುವನ್ನು ಮಹಿಳೆ ಹೊತ್ತೊಯ್ದಿದ್ದಾಳೆ. ಅಕ್ಟೋಬರ್ 2 ರಂದು ಫರೀದಾ ಅವರಿಗೆ ಹೆರಿಗೆಯಾಗಿತ್ತು.
ಮಗು ಅಪಹರಣವಾಗಿದ್ದು ಹೇಗೆ?
ನವಜಾತ ಶಿಶುವನ್ನು ತುರ್ತು ಘಟಕದಲ್ಲಿಯೇ ಇರಿಸಲಾಗಿತ್ತು. ಎದೆ ಹಾಲು ನೀಡಲು ಎರಡು ಗಂಟೆಗೊಮ್ಮೆ ಮಗುವನ್ನು ಕರೆದುಕೊಂಡು ತಾಯಿಯ ಬಳಿ ಬರಲಾಗುತ್ತಿತ್ತು.[ಬುರ್ಖಾ ಹೇಳಿಕೆ ನೀಡಿ ಟ್ವಿಟ್ಟರ್ ನಲ್ಲಿ ಡಿಗ್ಗಿ ಬೆತ್ತಲು!]
ಭಾನುವಾರ ಅದರಂತೆ ಮಗು ತಾಯಿಯ ಬಳಿಯೇ ಇತ್ತು. ಈ ವೇಳೆ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಆಗಮಿಸಿದ್ದಾಳೆ. ತನ್ನ ಸಂಬಂಧಿಕರೊಬ್ಬರನ್ನು ನೋಡಲು ಆಸ್ಪತ್ರೆಗೆ ಬಂದಿದ್ದೇನೆ ಎಂದು ಹೇಳಿ ಫರೀದಾ ಬಳಿ ಮಾತನಾಡುತ್ತ ಕುಳಿತಿದ್ದಾಳೆ.
ಬುರ್ಖಾ ಧರಿಸಿದ್ದ ಮಹಿಳೆಗೆ ನೀಡಿದ ತಾಯಿ ಶೌಚಾಲಯಕ್ಕೆ ತೆರಳಿದ್ದಾಳೆ. ಆದರೆ ಶೌಚಾಲಯದಿಂದ ಹಿಂದಿರುಗಿದಾಗ ಮಹಿಳೆ ಮಗುವಿನೊಂದಿಗೆ ನಾಪತ್ತೆಯಾಗಿದ್ದಾಳೆ.
ಇದಾದ ನಂತರ ತಾಯಿ ತಕ್ಷಣ ಆಸ್ಪತ್ರೆ ಸಿಬ್ಬಂದಿಗೆ ಮಗು ಅಪಹರಣವಾಗಿರುವ ಬಗ್ಗೆ ತಿಳಿಸಿದ್ದಾಳೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಬುರ್ಖಾ ಧರಿಸಿದ್ದ ಮಹಿಳೆ ಪತ್ತೆಗೆ ಜಾಲ ಬೀಸಲಾಗಿದೆ.
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್












Click it and Unblock the Notifications