8 ಜನರ ಬದುಕಿಗೆ ಆಶಾಕಿರಣವಾದ ಬೆಂಗಳೂರು ಯುವಕ
ಬೆಂಗಳೂರು,ಮಾರ್ಚ್,10: ರಸ್ತೆ ಅಪಘಾತಕ್ಕೆ ಒಳಗಾಗಿ ಸಾಯುವ ಕೊನೆ ಗಳಿಗೆಯಲ್ಲಿ ನೇತ್ರಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದ ಹರೀಶ್ ನೆನಪು ಜನರಲ್ಲಿ ಹಚ್ಚಹಸಿರಾಗಿಯೇ ಇದೆ. ಇದೀಗ ಈ ನೆನಪಿಗೆ ತನ್ನ ಎಂಟು ಅಂಗಾಂಗಳನ್ನು ದಾನ ಮಾಡಿದ ಅಮೆರಿಕಾದಲ್ಲಿರುವ ಬೆಂಗಳೂರಿನ ಯುವಕನು ಸೇರಿದ್ದು, ಮಹಾದಾನಿ ಎನಿಸಿಕೊಂಡಿದ್ದಾನೆ.
ಬೆಂಗಳೂರಿನ ಬೊಮ್ಮಸಂದ್ರದ ವಿದ್ಯಾನಗರದ ನಿವಾಸಿ ರಾಜೀವ್ ನಾಯ್ಡು ಅವರೇ ಎಂಟು ಅಂಗಾಂಗಳನ್ನು ದಾನ ಮಾಡಿದ ಇವರು ವಾಷಿಂಗ್ಟನ್ ಸ್ಕ್ವೆಯರ್ ಸೌತ್ ನ್ಯೂಯಾರ್ಕ್ ವಿಶ್ವವಿದ್ಯಾಲಯದಲ್ಲಿ ಎಂ.ಟೆಕ್ ಓದುತ್ತಿದ್ದರು.[ದೇಹ ಎರಡು ತುಂಡಾದರೂ ಕಣ್ಣು ದಾನ ಮಾಡಿ ಬೆಳಕಾದರು]

ರಾಜೀವ್ ನಾಯ್ಡು ಅವರು ಫೆಬ್ರವರಿ ತಿಂಗಳಿನಿಂದ ತೀವ್ರ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಈ ಖಾಯಿಲೆ ಮತ್ತಷ್ಟು ಬಿಗಡಾಯಿಸಿದ ಪರಿಣಾಮ ಫೆ.21ರಿಂದ ಅಮೆರಿಕಾದ ಬ್ರೂಕ್ ಲಿನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಕಳೆದ ಮಾರ್ಚ್ 7ರ ಭಾನುವಾರದಂದು ಅವರ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡು ಯಾವುದೇ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಇದನ್ನು ನಾನಾ ಪರೀಕ್ಷೆಗಳ ಮೂಲಕ ಖಾತರಿ ಪಡಿಸಿಕೊಂಡ ವೈದ್ಯರು ಕುಟುಂಬದವರ ಅನುಮತಿ ಮೇರೆಗೆ ಅವರ ಎಂಟು ಅಂಗಾಂಗಳನ್ನು ದಾನ ಮಾಡಿ, ಎಂಟು ಜನರ ಬದುಕಿಗೆ ಆಶಾಕಿರಣವಾದರು.[ಊರಿಗೆ ಊರೇ ಕಣ್ಣು ದಾನ ಮಾಡಲು ಹರೀಶನೇ ಸ್ಫೂರ್ತಿ]
ಯಾವ ಯಾವ ಅಂಗಾಂಗಳನ್ನು ದಾನ ಮಾಡಲಾಗಿದೆ?
ಅಮೆರಿಕಾದಲ್ಲಿದ್ದ ರಾಜೀವ್ ನಾಯ್ಡು ಅವರ ಕಣ್ಣುಗಳು, ಹೃದಯ, ಕಿಡ್ನಿಗಳು, ಯಕೃತ್, ಅನ್ನನಾಳ, ಮೇದೋಜಿರಕಾಂಗ ಗ್ರಂಥಿಯನ್ನು ದಾನ ಮಾಡಿದ್ದಾರೆ.

ರಾಜೀವ್ ನಾಯ್ಡು ಬಗ್ಗೆ ವಿವರ:
ಇವರು 2014ರಲ್ಲಿ ಪಿಇಎಸ್ ಐಟಿ (People's Education Society Instistution of Technology, Bangalore) ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಇನ್ ಫಾರ್ಮೇಶನ್ ಸೈನ್ಸ್ ನಲ್ಲಿ ಎಂಜಿನಿಯರಿಂಗ್ ಮಾಡಿದ್ದರು. ಇವರು ದಿಲೀಪ್ ಮೆಟೀರಿಯಲ್ ಹ್ಯಾಂಡ್ಲಿಂಗ್ ಇಕ್ವಿಪ್ ಮೆಂಟ್ ನಲ್ಲಿ ಕಾರ್ಯನಿರ್ವಹಿಸಿದ್ದರು, ಬಳಿಕ ಅಮೆರಿಕಾಕ್ಕೆ ತೆರಳಿದ್ದರು.[ಫೇಸ್ ಬುಕ್ ಬಳಸಿ ಜೀವಂತ ಅಂಗಾಂಗ ಸಾಗಿಸಿದ ಬೆಂಗಳೂರು ಪೊಲೀಸರು]
ರಾಜೀವ್ ನಾಯ್ಡು ಅವರ ಅಂತ್ಯ ಸಂಸ್ಕಾರ?
ಇವರ ಅಂತ್ಯ ಸಂಸ್ಕಾರವು ಬೆಂಗಳೂರಿನ ಬೊಮ್ಮಸಂದ್ರದ ವಿದ್ಯಾನಗರದಲ್ಲಿ ಶುಕ್ರವಾರ ಜರುಗಲಿದೆ. ಇವರ ಮೃತದೇಹವನ್ನು ತರಲು ರಾಜೀವ್ ಅವರ ಭಾವ ಜಯಂತ್ ಅಮೆರಿಕಾಕ್ಕೆ ತೆರಳಿದ್ದಾರೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ











Click it and Unblock the Notifications