ಒತ್ತುವರಿ ತೆರವು ಕಾರ್ಯಾಚರಣೆ, ಪರಿಹಾರ ಸಿಗುತ್ತಾ?
ಬೆಂಗಳೂರು, ಆಗಸ್ಟ್ 11 : ಬೆಂಗಳೂರು ನಗರದಲ್ಲಿ ಬಿಬಿಎಂಪಿ ಕೈಗೊಂಡಿರುವ ರಾಜ ಕಾಲುವೆ ಒತ್ತುವರಿ ತೆರವು ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ. ಆದರೆ, ಈ ಕಾರ್ಯಾಚರಣೆಯನ್ನು ಪಾಲಿಕೆ ತಕ್ಷಣಕ್ಕೆ ಆರಂಭಿಸಿಲ್ಲ. ಆರು ತಿಂಗಳ ಹಿಂದೆಯೇ ಈ ಕಾರ್ಯಾಚರಣೆಯ ಯೋಜನೆ ಸಿದ್ಧಗೊಂಡಿತ್ತು.
ಕರ್ನಾಟಕ ಸರ್ಕಾರದ ಕಾನೂನು ಸಲಹೆಗಾರ ಬ್ರಿಜೇಶ್ ಕಾಳಪ್ಪ ಅವರು ಈ ಕುರಿತು ಒನ್ ಇಂಡಿಯಾ ಜೊತೆ ಮಾತನಾಡಿದ್ದಾರೆ. 'ಇಂತಹ ಕಾರ್ಯಚರಣೆ ಆರಂಭಿಸಲಾಗುತ್ತದೆ ಎಂದು 6 ತಿಂಗಳ ಹಿಂದೆಯೇ ಸೂಚನೆ ನೀಡಲಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿಲ್ಲ' ಎಂದು ಅವರು ಹೇಳಿದ್ದಾರೆ.[ರಾಜ ಕಾಲುವೆ ಒತ್ತುವರಿ, ಈಗ ಅಧಿಕಾರಿಗಳಿಗೆ ಶಿಕ್ಷೆ]

'ಬೆಂಗಳೂರು ನಗರದಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಾಗವನ್ನು ತೆರವುಗೊಳಿಸಬೇಕು ಎಂದು ಆರು ತಿಂಗಳ ಹಿಂದೆಯೇ ಯೋಜನೆ ರೂಪಿಸಲಾಗಿತ್ತು. ಅದಕ್ಕಾಗಿ ಆಗಲೇ ಆಸ್ತಿಗಳನ್ನು ಗುರುತಿಸಿ, ಮಾರ್ಕ್ ಮಾಡಲಾಗಿತ್ತು' ಎಂದು ಅವರು ಸ್ಪಷ್ಟಪಡಿಸಿದ್ದಾರೆ.[ಮನೆ ಕಳೆದುಕೊಂಡವರಿಂದ ಬಿಬಿಎಂಪಿಗೆ ಪ್ರಶ್ನೆಗಳ ಸುರಿಮಳೆ]
'ಸರ್ಕಾರ ತನ್ನ ಸ್ವತ್ತನ್ನು ವಾಪಸ್ ಪಡೆದುಕೊಳ್ಳುತ್ತಿದೆ. ಪಂಚಾಯತ್ ರಾಜ್ ಕಾಯ್ದೆ ಸೆಕ್ಷನ್ 2281 ಎ ಪ್ರಕಾರ ಸ್ಥಳೀಯ ಪಾಲಿಕೆಯ ಆಯುಕ್ತರು ಇಂತಹ ವಿಚಾರದಲ್ಲಿ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ. ಒತ್ತುವರಿ ತೆರವಿಗೂ ಮನ್ನವೇ ನೋಟಿಸ್ ನೀಡಿರುತ್ತಾರೆ' ಎಂದು ಕಾಳಪ್ಪ ಹೇಳಿದ್ದಾರೆ.[ಒತ್ತುವರಿ ತೆರವಿನಲ್ಲೂ ಪ್ರಭಾವದ ಒಳಸುಳಿ]
ಪರಿಹಾರದ ಕುರಿತು : 'ಸರ್ಕಾರ ಒಪ್ಪಿಗೆ ನೀಡಿದ ಜಾಗದಲ್ಲಿ ಮನೆ, ಕಟ್ಟಡಗಳನ್ನು ಕಟ್ಟಿದ್ದರೆ ಅದನ್ನು ತೆರವುಗೊಳಿಸಿದರೆ ಪರಿಹಾರ ನೀಡಲಾಗುತ್ತದೆ. ಆದರೆ, ಖಾಸಗಿ ನಿರ್ಮಾಣಗೊಂಡ ಲೇಔಟ್ ತೆರವಿಗೆ ಪರಿಹಾರ ನೀಡುವುದಿಲ್ಲ. ಇದು ಸರ್ಕಾರ ತನ್ನ ಜಾಗವನ್ನು ವಾಪಸ್ ಪಡೆಯುವ ಕಾರ್ಯಾಚರಣೆಯನ್ನು ಮಾತ್ರ ನಡೆಸುತ್ತಿದೆ' ಎಂದರು.
ಒಂದು ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಒತ್ತುವರಿ ಮಾಡಿಕೊಂಡಿದ್ದರೆ ಸರ್ಕಾರ ಹಣವನ್ನು ಪಾವತಿ ಮಾಡುತ್ತದೆ. ಏಕೆಂದರೆ ಸರ್ಕಾರ ಖರೀದಿ ಮಾಡುವವರಿಂದ ಹಣ ಪಡೆದಿರುತ್ತದೆ. ಆದರೆ, ಖಾಸಗಿ ಕಟ್ಟಡಗಳ ವಿಚಾರದಲ್ಲಿ ಈ ನಿಯಮ ಅನ್ವಯವಾಗುವುದಿಲ್ಲ.
ಖಡಕ್ ಕ್ರಮ ಅಗತ್ಯ : 'ಒತ್ತುವರಿಗೆ ಸಹಕಾರ ನೀಡಿದ ಅಧಿಕಾರಿಗಳ ವಿರುದ್ಧ ಕಠಣ ಕ್ರಮ ಕೈಗೊಳ್ಳುವುದ ಅಗತ್ಯ. ಯೋಜನೆಯನ್ನು ಮೊದಲು ಪರಿಶೀಲನೆ ನಡೆಸಿ ಒಪ್ಪಿಗೆ ಕೊಟ್ಟಿರುವುದೇ ಅಧಿಕಾರಿಗಳು. ಪಾಲಿಕೆಗಿಂತ ಮೊದಲು ಸ್ಥಳೀಯ ಗ್ರಾಮ ಪಂಚಾಯಿತಿ ಅವರಿಗೆ ಒತ್ತುವರಿ ಬಗ್ಗೆ ತಿಳಿದಿರುತ್ತದೆ' ಎಂದು ಬ್ರಿಜೇಶ್ ಕಾಳಪ್ಪ ಹೇಳಿದ್ದಾರೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications