ಹಿರಿಯ ನಾಗರೀಕರ ಸಹಾಯಕ್ಕಾಗಿ ದಿನದ 24 ಗಂಟೆಯೂ ಹೆಲ್ಪ್ ಲೈನ್
ಸಹಾಯ ಬೇಕಾಗಿರುವ ಹಿರಿಯ ನಾಗರೀಕರು ದೂರವಾಣಿ ಸಂಖ್ಯೆ 1090 (ದರ ರಹಿತ) ಹಾಗೂ 080-22943226, 9243737230 ಮುಖಾಂತರ ಸಹಾಯವಾಣಿಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು.
ಬೆಂಗಳೂರು, ಏಪ್ರಿಲ್ 27: ಹಿರಿಯ ನಾಗರೀಕರ ಸಹಾಯಕ್ಕಾಗಿ ದಿನದ 24 ಗಂಟೆಯೂ ಕಾರ್ಯಚರಿಸುವ ಸಹಾಯವಾಣಿಯನ್ನು ಆರಂಭಿಸಲಾಗಿದೆ.
2002ರಿಂದಲೇ ಬೆಂಗಳೂರು ನಗರ ಪೋಲೀಸ್ ಹಾಗೂ ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಜಂಟಿಯಾಗಿ ತೊಂದರೆಯಲ್ಲಿರುವ ಹಿರಿಯರಿಗೆ ಸಹಾಯವಾಣಿ ಆರಂಭಿಸಿತ್ತು. ಪ್ರತಿದಿನ 12 ಗಂಟೆಗಳ ಕಾಲ ಅಂದರೆ ಬೆಳಿಗ್ಗೆ 8 ರಿಂದ ಸಾಯಂಕಾಲ 8 ರವರೆಗೆ ಇದು ಕಾರ್ಯ ನಿರ್ವಹಿಸುತ್ತಿತ್ತು.[ಕೆಎಸ್ಆರ್ಟಿಸಿ ಟಿಕೆಟ್ ದರದಲ್ಲಿ ಹಿರಿಯ ನಾಗರಿಕರಿಗೆ 25% 'ಸುಲಭ' ರಿಯಾಯಿತಿ]

ಇದನ್ನೀಗ ಹಿರಿಯರ ಬೇಡಿಕೆ ಹಾಗೂ ಅವಶ್ಯಕತೆಗನುಗುಣವಾಗಿ ದಿನದ 24 ಗಂಟೆಗೆ ವಿಸ್ತರಿಸಲಾಗಿದೆ. ಬುಧವಾರದಿಂದ ಹಿರಿಯರಿಗಾಗಿ ಈ ಹೆಲ್ಪ್ ಲೈನ್ ಸೇವೆ ದಿನದ 24 ಗಂಟೆಯೂ ಲಭ್ಯವಿದೆ.
ಪ್ರಸ್ತುತ ಬೆಂಗಳೂರು ನಗರದಲ್ಲಿ ಸುಮಾರು 10 ಲಕ್ಷ ಹಿರಿಯ ನಾಗರೀಕರಿದ್ದಾರೆ. ಇವರಲ್ಲಿ ಸುಮಾರು 3 ಲಕ್ಷ ಜನರು ಒಂದಲ್ಲ ಒಂದು ರೀತಿಯಲ್ಲಿ ದೈಹಿಕವಾಗಿ, ಮಾನಸಿಕವಾಗಿ ಮತ್ತು ಆರ್ಥಿಕವಾಗಿ ತೊಂದರೆಗಳನ್ನು ಅನುಭವಿಸುತ್ತಲೇ ಇದ್ದಾರೆ.
ಹಿರಿಯ ನಾಗರೀಕರ ಮೇಲಾಗುತ್ತಿರುವ ಅಪರಾಧಗಳ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಈ ಸಹಾಯವಾಣಿ ಸಹಾಯಕ್ಕೆ ಬರಲಿದೆ. 24 ಗಂಟೆ ಕಾರ್ಯಚರಿಸುವ ಸಹಾಯವಾಣಿಗೆ ಕರೆ ಮಾಡಿ ಹಿರಿಯ ನಾಗರೀಕರು ಇದರ ಲಾಭವನ್ನು ಪಡೆಯಬಹುದು.
ಹಾಗೆ ನೋಡಿದರೆ ಹಿರಿಯ ನಾಗರೀಕರ ಸಹಾಯವಾಣಿ ದೇಶದಲ್ಲಿಯೇ ಪ್ರಪ್ರಥಮವಾಗಿ ಬೆಂಗಳೂರು ನಗರದಲ್ಲಿ ಪ್ರಾರಂಭವಾಗಿದ್ದು, ಕಳೆದ 15 ವರ್ಷಗಳಲ್ಲಿ ಸರಿ ಸುಮಾರು 1.6 ಲಕ್ಷ ಕರೆಗಳನ್ನು ಸ್ವೀಕರಿಸಿವೆ. ಇದರಲ್ಲಿ 8662 ಗಂಭೀರವಾದ ಪ್ರಕರಣಗಳು ದಾಖಲಾಗಿದ್ದು ಯಶಸ್ವಿಯಾಗಿ ಇತ್ಯರ್ಥ ಗೊಳಿಸಲಾಗಿದೆ.
ಹಿರಿಯ ನಾಗರೀಕರ ಸಹಾಯವಾಣಿಯಲ್ಲಿ ನೀಡಲಾಗುವ ಎಲ್ಲಾ ಸೇವೆಗಳು ಉಚಿತವಾಗಿರುತ್ತವೆ. ಸಹಾಯ ಬೇಕಾಗಿರುವ ಹಿರಿಯ ನಾಗರೀಕರು ದೂರವಾಣಿ ಸಂಖ್ಯೆ 1090 (ದರ ರಹಿತ) ಹಾಗೂ 080-22943226, 9243737230 ಮುಖಾಂತರ ಸಹಾಯವಾಣಿಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications