ಬೆಂಗಳೂರಿಗರೇ ಗಮನಿಸಿ, ಮುಂದಿನ ವಾರ ಪೆಟ್ರೋಲ್ ಸಿಗಲ್ಲ
ಬೆಂಗಳೂರು, ಜೂನ್ 03 : ಮೂಲಸೌಕರ್ಯಕ್ಕೆ ಒತ್ತಾಯಿಸಿ ತೈಲ ಸಾಗಣೆ ಟ್ಯಾಂಕರ್ ಚಾಲಕರು ಮತ್ತು ಕ್ಲೀನರ್ಗಳು ಜೂನ್ 6 ರಂದ ಮೂರು ದಿನ ಕಾಲ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಒಂದು ವೇಳೆ ಪ್ರತಿಭಟನೆ ಆರಂಭವಾದರೆ ಮಹಾನಗರದಲ್ಲಿ ಪೆಟ್ರೋಲ್ ಗೆ ಹಾಹಾಕಾರ ಉಂಟಾಗಲಿದೆ. ಬೆಂಗಳೂರಿಗೆ ದಿನವೊಂದಕ್ಕೆ 700 ಟ್ಯಾಂಕರ್ ತೈಲ ಬೇಕಾಗುತ್ತದೆ.[ಸಿದ್ದರಾಮಯ್ಯ ಅವ್ರೇ, ಪೆಟ್ರೋಲ್ ಮೇಲೆ ವ್ಯಾಟ್ ಇಳಿಕೆ ಮಾಡ್ರಿ]
ದೇವನಗುಂದಿಯಿಂದ ಇಂಧನ ಸಾಗಾಣಿಕಾ ಕೇಂದ್ರದಲ್ಲಿನ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬೆಂಗಳೂರು ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ (ಬಿಪಿಡಿಎ) ಜೂನ್ 6ರಿಂದ ಮುಷ್ಕರ ನಡೆಸಲು ನಿರ್ಧರಿಸಿದೆ.[ಲೀಟರ್ ಪೆಟ್ರೋಲ್ಗೆ ಎಷ್ಟು ಕೊಡ್ತಾ ಇದೀರಿ? ಈ ಲೆಕ್ಕ ನೋಡಿ]
ಟ್ಯಾಂಕರ್ ಚಾಲಕರು ತಮ್ಮ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟಿದ್ದಾರೆ. ಪೆಟ್ರೋಲಿಯಂ ಕಂಪನಿಗಳು ಪ್ರತಿ ಕಿಲೋಮೀಟರ್ ಟ್ಯಾಂಕರ್ ಬಾಡಿಗೆ ದರವನ್ನು ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ. ಈ ಹಿಂದೆ ಮೂರು ಸಾರಿ ಚಾಲಕರು ಪ್ರತಿಭಟನೆ ನಡೆಸಿ ಭರವಸೆ ಹಿನ್ನೆಲೆಯಲ್ಲಿ ಹಿಂದಕ್ಕೆ ಪಡೆದುಕೊಂಡಿದ್ದರು.[ಇರಾನ್ ಜತೆ ಮೋದಿ ಕರಾರು, ಈಗ ಪಾಕ್ ಮಾಡಲಿ ತಕರಾರು?]
ದೇವನಗುಂದಿಯಿಂದಲೇ ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಪೆಟ್ರೋಲ್-ಡೀಸೆಲ್ ಪೂರೈಕೆಯಾಗುತ್ತಿದೆ. ಹೊಸಕೋಟೆಯಿಂದ ದೇವನಗುಂದಿಗೆ ಸಾಗುವ ರಸ್ತೆಗಳು ಚೆನ್ನಾಗಿಲ್ಲ. ಹೊಸ ರಸ್ತೆ ನಿರ್ಮಿಸಿದರೂ ಕಿತ್ತು ಹೋಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಬೇಕು. ರಾಜ್ಯ ಸರ್ಕಾರ ಅನುದಾನ ನೀಡದಿದ್ದರೆ ಕಂಪನಿಗಳೇ ನಿರ್ಮಿಸಬೇಕು ಎಂಬ ಬೇಡಿಕೆಯನ್ನು ಮುಂದೆ ಇಟ್ಟಿದ್ದಾರೆ.