ಎಬಿವಿಪಿ ವಿರುದ್ಧ ಅಪ್ರಾಪ್ತರ ಅಪಹರಣ ಪ್ರಕರಣ ದಾಖಲು
ಬೆಂಗಳೂರು, ಆಗಸ್ಟ್ 20: ಗಲಭೆಗಾಗಿ ಅಪ್ರಾಪ್ತರ ಅಪಹರಣ ಸೇರಿದಂತೆ ಹಲವು ಪ್ರಕರಣಗಳನ್ನು ಎಬಿವಿಪಿ ವಿರುದ್ಧ ಬೆಂಗಳೂರು ಪೊಲೀಸರು ದಾಖಲಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲರೊಬ್ಬರು ಎಬಿವಿಪಿ ವಿರುದ್ಧ ದೂರು ನೀಡಿದ್ದಾರೆ.
ರಾಜದ್ರೋಹದ ಪ್ರಕರಣ ದಾಖಲಾಗಿರುವ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಎಬಿವಿಪಿ ಒತ್ತಾಯಿಸಿತ್ತು. ಕಳೆದ ವಾರ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಲಾಗಿತ್ತು. ಆ ನಂತರ ಸಂಸ್ಥೆ ವಿರುದ್ಧ ರಾಜದ್ರೋಹದ ಪ್ರಕರಣ ದಾಖಲಾಗಿತ್ತು.[ಕನ್ನಡ ಮಾತನಾಡದ ಟೆಕ್ಕಿ ಮೇಲೆ ಬೆಂಗಳೂರು ಪೊಲೀಸರ ಹಲ್ಲೆ?]

ಬೆಂಗಳೂರು ಪೊಲೀಸರು ಎಬಿವಿಪಿ ವಿರುದ್ಧ ಗಲಭೆ, ಅಪಹರಣದ ಪ್ರಕರಣಗಳನ್ನು ದಾಖಲಿಸಿದ್ದಾರೆ. ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಗೆ ಬಲವಂತವಾಗಿ ಅಪ್ರಾಪ್ತರನ್ನು ಕರೆದೊಯ್ದರು ಎಂದು ಕಾಲೇಜು ಪ್ರಾಂಶುಪಾಲರು ದೂರು ನೀಡಿರುವುದರಿಂದ ಐಪಿಸಿ 363ರ ಅಡಿ ಅಪಹರಣ ಪ್ರಕರಣ ದಾಖಲಾಗಿದೆ.
ರಾಜಾಜಿ ನಗರದಲ್ಲಿರುವ ಕಾಲೇಜಿಗೆ ನುಗ್ಗಿದ ಎಬಿವಿಪಿ ಕಾರ್ಯಕರ್ತರು, ಪಿಯು ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಬಲವಂತವಾಗಿ ಕರೆದೊಯ್ದರು ಎಂದು ಆರೋಪಿಸಲಾಗಿದೆ. ಆ ವಿದ್ಯಾರ್ಥಿಗಳು ಅಪ್ರಾಪ್ತರು, ಅವರನ್ನು ಕರೆದೊಯ್ಯಬೇಡಿ ಎಂದು ಕೇಳಿಕೊಂಡರೂ ಯಾರೂ ಮಾತು ಕೇಳಿಸಿಕೊಳ್ಳಲಿಲ್ಲ ಎಂದು ಆರೋಪಿಸಿ ಪ್ರಾಂಶುಪಾಲರು ಹೇಳಿಕೆ ನೀಡಿದ್ದಾರೆ.[ರಾಜದ್ರೋಹದ ಆರೋಪ : ಸಿದ್ದರಾಮಯ್ಯಗೆ ವರದಿ ಸಲ್ಲಿಕೆ]
ಇದರ ಜೊತೆಗೆ ಬೆಂಗಳೂರಿನ ಜೆ.ಸಿ.ನಗರ ಪೊಲೀಸರು 22 ಮಂದಿ ವಿರುದ್ಧ ಗಲಭೆ ಪ್ರಕರಣ ದಾಖಲಿಸಿದ್ದಾರೆ. ಶುಕ್ರವಾರ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಕಚೇರಿ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಪ್ರತಿಭಟನೆ ಹಿಂಸಾ ಸ್ವರೂಪ ಪಡೆದಿದ್ದರಿಂದ ಲಾಠಿ ಚಾರ್ಜ್ ಮಾಡಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರವೂ ಎಬಿವಿಪಿ ಪ್ರತಿಭಟನೆ ಮುಂದುವರಿದಿದೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications