ನೀರಿಗೆ ಬರ, ಬೆಂಗಳೂರಿಗೆ ವಾರಕ್ಕೊಮ್ಮೆ ನೀರು
ಬೆಂಗಳೂರು, ಮಾರ್ಚ್ 22 : ರಾಜ್ಯದಲ್ಲಿನ ಭೀಕರ ಬರಗಾಲದ ಪರಿಸ್ಥಿತಿ ಉದ್ಯಾನ ನಗರಿ ಬೆಂಗಳೂರಿಗೂ ತಟ್ಟಲಿದೆ. ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕುಸಿಯುತ್ತಿದ್ದು, ವಾರಕ್ಕೊಮ್ಮೆ ನಗರಕ್ಕೆ ನೀರು ಪೂರೈಕೆ ಮಾಡಲು ಜಲಮಂಡಳಿ ನಿರ್ಧರಿಸಿದೆ.
ಬೆಂಗಳೂರಿಗೆ ನೀರು ಪೂರೈಕೆ ಮಾಡಲು ಹಲವು ಮೂಲಗಳಿವೆ. ಇವುಗಳಲ್ಲಿ ಶೇ 80ರಷ್ಟು ನೀರು ಕಾವೇರಿ ನದಿಯಿಂದ ಬರುತ್ತದೆ. ಅರ್ಕಾವತಿ ನದಿ ಮೂಲಕ ಶೇ 20ರಷ್ಟು ನೀರನ್ನು ಪಡೆದುಕೊಳ್ಳಲಾಗುತ್ತಿದೆ. ಆದರೆ, ಮುಂಗಾರು ಕೈಕೊಟ್ಟು ಬರ ಪರಿಸ್ಥಿತಿ ಎದುರಾದ ಕಾರಣ. ಜಲಾಶಯದಲ್ಲಿನ ನೀರಿನ ಮಟ್ಟ ಕುಸಿದಿದೆ. [KRS ನಲ್ಲಿ ಎಷ್ಟು ನೀರಿದೆ ಗೊತ್ತಾ?]
ಬೆಂಗಳೂರು ಜಲಮಂಡಳಿ ಪ್ರಸ್ತುತ ನಗರಕ್ಕೆ 900 ಮಿಲಿಯನ್ ಲೀಟರ್ (238 ಮಿಲಿಯನ್ ಗ್ಯಾಲನ್) ನೀರನ್ನು ಪೂರೈಕೆ ಮಾಡುತ್ತಿದೆ. ನಗರದ ಪ್ರತಿದಿನ ಬೇಡಿಕೆ 1.3 ಬಿಲಿಯನ್ ಲೀಟರ್. ಸದ್ಯ, ವಾರದಲ್ಲಿ ಮೂರು ದಿನ ನಗರಕ್ಕೆ ನೀರು ಪೂರೈಸಲಾಗುತ್ತಿದೆ.

ಸೋಮವಾರ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 84.22 ಅಡಿಗೆ ಕುಸಿದಿದೆ. ಜಲಾಶಯದ ನೀರಿನ ಮಟ್ಟ 74.6 ಅಡಿ ತಲುಪುವವರೆಗೆ ನಾಲೆಗಳಿಗೆ ನೀರು ಹರಿಸಬಹುದಾಗಿದೆ. 74.6 ಅಡಿಯಿಂದ 60 ಅಡಿ ಮಟ್ಟದವರೆಗಿನ ನೀರನ್ನು ಕುಡಿಯುವ ನೀರಿಗಾಗಿ ಮೀಸಲಾಗಿಡಬೇಕು. ಜಲಾಶಯದ ನೀರಿನಮಟ್ಟ 60 ಅಡಿಗೆ ಕುಸಿದರೆ ಡೆಡ್ ಸ್ಟೋರೇಜ್ ತಲುಪುತ್ತದೆ. ಆ ನೀರನ್ನು ಯಾವ ಉದ್ದೇಶಕ್ಕೂ ಬಳಕೆ ಮಾಡಲು ಸಾಧ್ಯವಿಲ್ಲ. [ಕರ್ನಾಟಕದಲ್ಲಿ ಭೀಕರ ಬರಗಾಲ, ಹೇಳುವವರಿಲ್ಲ ಕೇಳುವವರಿಲ್ಲ]
ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕುಸಿಯುತ್ತಿರುವುದರಿಂದ ವಾರಕ್ಕೊಮ್ಮೆ ನಗರಕ್ಕೆ ನೀರು ಪೂರೈಕೆ ಮಾಡಲು ಜಲಮಂಡಳಿ ನಿರ್ಧರಿಸಿದೆ. ಮುಂಗಾರು ಬರುವ ತನಕ ವಾರಕ್ಕೊಮ್ಮೆ ನಗರಕ್ಕೆ ನೀರು ಪೂರೈಕೆ ಮಾಡಲಾಗುತ್ತದೆ ಎಂದು ಜಲಮಂಡಳಿ ಅಧಿಕಾರಿಗಳು ಹೇಳಿದ್ದಾರೆ.
ಪರಿಹಾರವೇನು?: ಮೇ ಅಂತ್ಯಕ್ಕೆ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆ ಇದೆ. ಅವಧಿಗೆ ಮುನ್ನವೇ ಮಳೆ ಬರಲಿ ಎಂದು ಪ್ರಾರ್ಥಿಸುವುದೊಂದೇ ನಮ್ಮ ಮುಂದಿರುವ ಪರಿಹಾರ. ಜಲಮಂಡಳಿ ಬೆಂಗಳೂರಿನ ನೀರಿನ ಪರಿಸ್ಥಿತಿ ಕುರಿತು ಸೂಕ್ಷವಾಗಿ ಅವಲೋಕನ ನಡೆಸುತ್ತಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications