ಆಕ್ರೋಶ್ ದಿವಸ್: ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
ಭಾರಿ ಮೌಲ್ಯದ ನೋಟು ನಿಷೇಧದ ವಿರುದ್ಧ ಕಾಂಗ್ರೆಸ್ ಹಾಗೂ ಎಡಪಕ್ಷಗಳು ನಡೆಸಲು ಉದ್ದೇಶಿಸಿರುವ ಆಕ್ರೋಶ್ ದಿವಸ್ ಆಚರಣೆ ಹಿನ್ನಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬೆಂಗಳೂರು, ನವೆಂಬರ್ 27: ಭಾರಿ ಮೌಲ್ಯದ ನೋಟು ನಿಷೇಧದ ವಿರುದ್ಧ ಕಾಂಗ್ರೆಸ್ ಹಾಗೂ ಎಡಪಕ್ಷಗಳು ನಡೆಸಲು ಉದ್ದೇಶಿಸಿರುವ ಆಕ್ರೋಶ್ ದಿವಸ್ ಆಚರಣೆ ಹಿನ್ನಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯ ಈ ಬಗ್ಗೆ ಪ್ರಕಟಣೆ ಹೊರಡಿಸಿ ನವೆಂಬರ್ 28ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಡಿಸೆಂಬರ್ 8ರಂದು ನಡೆಸಲಾಗುವುದು ಎಂದು ಹೇಳಿದೆ.[ಆಕ್ರೋಶ್ ದಿವಸ್: ಕರ್ನಾಟಕದಲ್ಲಿ ಬಸ್ ಮೆಟ್ರೋ ಸಂಚಾರ ಸ್ಥಗಿತ]
ಅಪನಗದೀಕರಣ (demonetisation) ವಿರುದ್ಧದ ಆಕ್ರೋಶ್ ದಿವಸಕ್ಕೆ ಕರ್ನಾಟಕ ಸರ್ಕಾರ ಕೂಡಾ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ಬೆಂಗಳೂರು ವಿಶ್ವವಿದ್ಯಾಲಯ ತನ್ನ ಸೆಮಿಸ್ಟರ್ ಪರೀಕ್ಷೆಗಳನ್ನು ಅನಿವಾರ್ಯವಾಗಿ ಮುಂದೂಡಿದೆ.

ಸೋಮವಾರ(ನವೆಂಬರ್ 28)ರಂದು ಮೂರನೇ ಹಾಗೂ ಐದನೇ ಸೆಮಿಸ್ಟರ್ ಬಿಎ/ಬಿಕಾಂ/ಬಿಬಿಎಂ/ಬಿಎಚ್ಎಂ ಪರೀಕ್ಷೆ ನಿಗದಿಯಾಗಿತ್ತು. ಸೋಮವಾರದಂದು ಎಲ್ಲಾ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಸಿದ್ದರಾಮಯ್ಯ ಸರ್ಕಾರ ಸುತ್ತೋಲೆ ಹೊರೆಡಿಸಿರುವ ಬೆನ್ನಲ್ಲೇ ಬೆಂಗಳೂರು ವಿವಿ ಈ ನಿರ್ಧಾರ ಕೈಗೊಂಡಿದೆ.
ಅಗತ್ಯ ಸೇವೆಗಳನ್ನು ಹೊರತುಪಡಿಸಿ ಸರ್ಕಾರಿ ಸಾರಿಗೆ ವ್ಯವಸ್ಥೆ ವ್ಯತ್ಯಯವಾಗುವ ಸಾಧ್ಯತೆ ಕಂಡು ಬಂದಿದೆ. ತುಮಕೂರು ವಿವಿ ಈಗಾಗಲೇ ಪರೀಕ್ಷೆಗಳನ್ನು ಮುಂದೂಡಿರುವುದನ್ನು ಇಲ್ಲಿ ಸ್ಮರಿಸಬಹುದು. (ಒನ್ಇಂಡಿಯಾ ಸುದ್ದಿ)
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications