ಗುಜರಾತಿನಲ್ಲಿ ಗೆಲುವು ಸಾಧಿಸಲು ಹೊಸ ರಣತಂತ್ರ ː ದಿನೇಶ್
ಬೆಂಗಳೂರು, ಜುಲೈ 13: ಗುಜರಾತ್ ಹಾಗೂ ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಎರಡೂ ಪಕ್ಷಗಳು ತಮ್ಮ ಕಾರ್ಯತಂತ್ರಗಳನ್ನು ರೂಪಿಸುವಲ್ಲಿ ಹಗಲು ರಾತ್ರಿ ನಿರತವಾಗಿವೆ. ಈ ಸಂದರ್ಭದಲ್ಲಿ ಎಐಸಿಸಿ ವಕ್ತಾರ, ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರೊಂದಿಗೆ ಒನ್ಇಂಡಿಯಾ ಪ್ರತಿನಿಧಿ ನಡೆಸಿದ ಸಂದರ್ಶನದ ಸಾರಾಂಶ ಇಲ್ಲಿದೆ.
* ಕರ್ನಾಟಕದಲ್ಲಿ ಉತ್ತರಪ್ರದೇಶದಂತೆ ಮ್ಯಾಜಿಕ್ ನಡೆಯಸಲು ಸಾಧ್ಯವೇ?
ಖಂಡಿತ ಸಾಧ್ಯವಿಲ್ಲ. ಉತ್ತರಪ್ರದೇಶದಲ್ಲಿ ಬಂದ ಫಲಿತಾಂಶ ಇಲ್ಲಿ ಕಾಣಲು ಬಿಜೆಪಿಗೆ ಸಾಧ್ಯವೇ ಇಲ್ಲ. ದಕ್ಷಿಣ ಭಾರತದ ರಾಜಕೀಯ ಪರಿಸ್ಥಿತಿಯೇ ಬೇರೆ. ಅಲ್ಲಿ ಎಲ್ಲಾ ಪಕ್ಷಗಳ ಮೇಲೆ ಜನರಿಗೆ ನಂಬಿಕೆ ಹೋಗಿತ್ತು. 15 ವರ್ಷಗಳ ನಂತರ ಬದಲಾವಣೆಗಾಗಿ ಜನ ವಿಧಿ ಇಲ್ಲದೆ ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ.

ಆದರೆ, ಇಲ್ಲಿ ನಮಗೆ ಆತ್ಮವಿಶ್ವಾಸ, ಶಕ್ತಿ ಹಾಗೂ ಜನರ ಬಲವಿದೆ. ಜನರ ನೆರವಿಗೆ ಸರ್ಕಾರದ ವಿವಿಧ ಯೋಜನೆಗಳಿವೆ.ಹೀಗಾಗಿ ಜನರಿಗೆ ಬೇಸರವಾಗುವಂಥ, ಬದಲಾವಣೆ ಬೇಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ.
ಕೋಮುವಾದ ರಾಜಕೀಯ ಇಲ್ಲಿ ನಡೆಯಲ್ಲ: ಉತ್ತರಪ್ರದೇಶದಂಥ ಪರಿಸ್ಥಿತಿ ಎಂದಿಗೂ ನಿರ್ಮಾಣವಾಗಲು ಬಿಡುವುದಿಲ್ಲ. ಸಿದ್ದರಾಮಯ್ಯ ಅವರು ಸಮಾಜವಾದದ ನೆಲೆಯಿಂದ ಬಂದವರು, ಎಲ್ಲರಿಗೂ ಸಮಾನ ಅವಕಾಶ ನೀಡಿದ್ದಾರೆ. ಕೋಮು ಗಲಭೆಗಳಂಥ ಘಟನೆಗಳಿಗೆ ಬಿಜೆಪಿಯೇ ನೇರ ಹೊಣೆಯಾಗಲಿದೆ.
ಯಡಿಯೂರಪ್ಪ ಅವರ ಶಕ್ತಿ ಕುಂದಿದೆ: ರಾಜಕೀಯವಾಗಿ ಯಡಿಯೂರಪ್ಪ ಅವರ ಶಕ್ತಿ ಕುಂದಿದೆ. ಹೀಗಾಗಿ ಕರ್ನಾಟಕ ಬಿಜೆಪಿಯಲ್ಲಿ ಈಗ ಸಮರ್ಥ ನಾಯಕರೇ ಇಲ್ಲ. ಮೋದಿ ಹಾಗೂ ಅಮಿತ್ ಶಾ ನೆರಳಿನಲ್ಲಿ ಜನರ ಮುಂದೆ ನಿಲ್ಲುತ್ತಿದ್ದಾರೆ.
ಕಾಂಗ್ರೆಸ್ ನಾಯಕರ ನಡುವೆ ಮನಸ್ತಾಪ, ಭಿನ್ನಮತ ಉಂಟಾಗುವಂತೆ ಬಿಜೆಪಿ ಯತ್ನಿಸಿದ್ದನ್ನು ಮರೆಯುವಂತಿಲ್ಲ. ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಎಲ್ಲರಿಗೂ ನಂಬಿಕೆಯಿದೆ ಹಾಗೂ ಮುಂದಿನ ಚುನಾವಣೆಯನ್ನು ಸಮರ್ಥವಾಗಿ ಎದುರಿಸುತ್ತೇವೆ.
ಗುಜರಾತಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಸಾಧ್ಯತೆ ಇದೆಯೆ?
ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ತವರು ರಾಜ್ಯದಲ್ಲಿ ಚುನಾವಣೆ ಎದುರಿಸಿ ಗೆಲ್ಲುವುದು ಕಷ್ಟದ ಕೆಲಸ. ಕರ್ನಾಟಕದಂತೆ ಅಲ್ಲಿ ರಣತಂತ್ರ ರೂಪಿಸಲು ಸಾಧ್ಯವಿಲ್ಲ. ಆದರೆ, ಗುಜರಾತ್ ಜನರು ಬದಲಾವಣೆ ಬಯಸಿದರೆ ಕಾಂಗ್ರೆಸ್ ಅವರ ನೆರವಿಗೆ ನಿಲ್ಲಲಿದೆ. ದಲಿತರು, ಶೋಷಿತರು, ಪಾಟಿದಾರ್ ಸಮುದಾಯಕ್ಕೆ ನ್ಯಾಯ ಸಿಗಬೇಕಿದೆ. ಅಪನಗದೀಕರಣ, ಜಿಎಸ್ ಟಿ ಯಿಂದ ಅಲ್ಲಿನ ಸಣ್ಣ ವ್ಯಾಪಾರಿಗಳು ಸಂಕಷ್ಟ ಅನುಭವಿಸಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ನಾವು ಹೋರಾಟಕ್ಕೆ ಸಿದ್ಧರಾಗುತ್ತಿದ್ದೇವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications