ಗೋಮಾಂಸ ಸೇವನೆ ಬಗ್ಗೆ ಬಿಜೆಪಿ ವಕ್ತಾರ ವಾಮನ್ ನೀಡಿದ ವಿವಾದಿತ ಹೇಳಿಕೆ
ಗೋ ಮಾಂಸ ಸೇವನೆ ಕುರಿತಂತೆ ಸುದ್ದಿವಾಹಿನಿಯ ಚರ್ಚಾಕೂಟದಲ್ಲಿ ಬಿಜೆಪಿ ವಕ್ತಾರ ವಾಮನಾಚಾರ್ಯ ನೀಡಿದ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಪ್ರಾಚೀನ ಕಾಲದಲ್ಲಿ ಬ್ರಾಹ್ಮಣರೂ ಸೇರಿದಂತೆ ಎಲ್ಲರೂ ಗೋ ಮಾಂಸ ಸೇವನೆ ಮಾಡುತ್ತಿದ್ದರು ಎಂದಿದ್ದರು.
ಬೆಂಗಳೂರು, ಜೂನ್ 05:ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಬಳಿಕ ಡಾ. ವಾಮನ್ ಆಚಾರ್ಯ ಅವರು ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ಘನ ತ್ಯಾಜ್ಯ ವಿಂಗಡಣೆ, ಕಸ ನಿರ್ವಹಣೆಗೆ ತಂತ್ರಜ್ಞಾನ ಬಳಕೆ , ಜೈವಿಕ ಗೊಬ್ಬರ ಬಳಕೆಗೆ ಪ್ರೋತ್ಸಾಹ ಹೀಗೆ ಅನೇಕ ಕ್ರಮಗಳನ್ನು ಜಾರಿಗೆ ತಂದು ತಮ್ಮನ್ನು ತಾವು ಗಾರ್ಬೆಜ್ ಮ್ಯಾನ್ ಎಂದು ಕರೆದುಕೊಳ್ಳುತ್ತಿದ್ದ ಡಾ. ವಾಮನ್ ಆಚಾರ್ಯ ಅವರು ಪ್ರಸ್ತುತ ಬಿಜೆಪಿ ವಕ್ತಾರರಾಗಿ ಕಾಯನಿರ್ವಹಿಸುತ್ತಿದ್ದಾರೆ.['ಬಿಲೀಫ್ ಫೆಸ್ಟ್' ಆಚರಿಸುವಂತೆ ಯುವ ಬ್ರಿಗೇಡ್ ಕರೆ, ಏನಿದು ಬಿಲೀಫ್ ಫೆಸ್ಟ್!]

ಸುವರ್ಣ ಸುದ್ದಿವಾಹಿನಿಯಲ್ಲಿ ನಡೆದ ಚರ್ಚಾಕೂಟದಲ್ಲಿ ಭಾಗವಹಿಸಿದ್ದ ಬಿಜೆಪಿ ವಕ್ತಾರ ಡಾ. ವಾಮನಾಚಾರ್ಯ ಅವರು, 'ಗೋವನ್ನು ಮಾತೇ ಎಂದು ಒಪ್ಪಲು ಸಾಧ್ಯವಿಲ್ಲ, ಭಾರತ ಕೃಷಿ ಪ್ರಧಾನ ರಾಷ್ಟ್ರವಾಗುವ ಮುನ್ನ ಬ್ರಾಹ್ಮಣರೂ ಸೇರಿದಂತೆ ಎಲ್ಲರೂ ಗೋ ಮಾಂಸ ಸೇವನೆ ಮಾಡುತ್ತಿದ್ದರು' ಎಂದು ಹೇಳಿದ್ದರು.[ ಏನು ತಿನ್ನಬೇಕು ಎಂಬ ಪಾಠ ದೆಹಲಿಯಿಂದ ಕಲಿಯಬೇಕಿಲ್ಲ: ವಿಜಯನ್]
ಆದರೆ, ಬಿಜೆಪಿ ವಕ್ತಾರ ವಾಮನಾಚಾರ್ಯ ನೀಡಿರುವ ಹೇಳಿಕೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಗೋ ಮಾಂಸ ಸೇವನೆ ಬಗ್ಗೆ ಅವರು ನೀಡಿದ ಹೇಳಿಕೆ, ಪಕ್ಷದ ಹೇಳಿಕೆಯಲ್ಲ. ಅದು ಅವರ ವೈಯಕ್ತಿ ಹೇಳಿಕೆಯಾಗಿದೆ. ಸಂಪೂರ್ಣ ಗೋಹತ್ಯ ನಿಷೇಧವಾಗಬೇಕು ಎನ್ನುವುದೇ ಬಿಜೆಪಿಯ ನಿಲುವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸ್ಪಷ್ಟಪಡಿಸಿದ್ದಾರೆ.[ಗೋವಿನ ಬಗ್ಗೆ ನಿಮಗೆ ತಿಳಿಯದ ರೋಚಕ ಸಂಗತಿಗಳು]
ಪಕ್ಷದ ನಿಲುವು ಮಾತ್ರ ಸಂಪೂರ್ಣ ಗೋಹತ್ಯೆ ನಿಷೇಧ ಜಾರಿಯಾಗಬೇಕು ಎನ್ನುವುದರ ಪರವಾಗಿಯೇ ಇದೆ. ಒಂದು ವೇಳೆ ಅವರು ಗೋ ಹತ್ಯೆ ನಿಷೇಧ ಕಾನೂನು ಜಾರಿ ವಿರುದ್ಧವಾಗಿ ಹೇಳಿಕೆ ನೀಡಿದ್ದರೆ ಅದನ್ನು ಅವರು ಸರಿಪಡಿಸಿಕೊಳ್ಳಬೇಕು ಎಂದು ಸಿಟಿ ರವಿ ಹೇಳಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications