ಬೈರಸಂದ್ರ ವಾರ್ಡ್ ಕಾರ್ಪೊರೇಟರ್ ನಾಗರಾಜ್ಗೆ ಶೋಕಾಸ್ ನೋಟಿಸ್!
ಬೆಂಗಳೂರು, ಜೂನ್ 14 : ಬೈರಸಂದ್ರ ವಾರ್ಡ್ ಕಾರ್ಪೊರೇಟರ್ ಎನ್.ನಾಗರಾಜ್ಗೆ ಬೆಂಗಳೂರು ಬಿಜೆಪಿ ಘಟಕ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ. ಜಯನಗರ ಚುನಾವಣೆಯಲ್ಲಿ ಪಕ್ಷ ವಿರೋಧಿ ಕೆಲಸ ಮಾಡಲಾಗಿದೆ ಎಂದು ಆರೋಪಿಸಿ ನೋಟಿಸ್ ನೀಡಲಾಗಿದೆ.
ಬೆಂಗಳೂರು ನಗರ ಬಿಜೆಪಿ ಘಟಕದ ಅಧ್ಯಕ್ಷ ಪಿ.ಎನ್.ಸದಾಶಿವ ಶುಕ್ರವಾರ ಕಾರ್ಪೊರೇಟರ್ ಎನ್.ನಾಗರಾಜ್ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. 7 ದಿನದಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಸೇರಿರುವ ಸುದ್ದಿಗಳನ್ನು ತಳ್ಳಿ ಹಾಕಿದ : ಎನ್.ನಾಗರಾಜು
ಜಯನಗರ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಕೈ ಜೋಡಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಲಾಗಿದೆ ಎಂಬ ಆರೋಪಿಸಿ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. ಜೂನ್ 11ರಂದು ನಡೆದ ಜಯನಗರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಗೆಲುವು ಸಾಧಿಸಿದ್ದರು.
ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ : ಜೂನ್ 4ರಂದು ಎನ್.ನಾಗರಾಜು ಮಾಜಿ ಸಚಿವ ಎಚ್.ಎಂ.ರೇವಣ್ಣ, ರಾಮಲಿಂಗಾ ರೆಡ್ಡಿ, ರಾಮಲಿಂಗಾ ರೆಡ್ಡಿ ಪುತ್ರಿ, ಜಯನಗರದ ಹಾಲಿ ಶಾಸಕಿ ಸೌಮ್ಯಾ ರೆಡ್ಡಿ ಜೊತೆಯಾಗಿರುವ ಫೋಟೋವನ್ನು ಫೇಸ್ಬುಕ್ನಲ್ಲಿ ಹಾಕಿದ್ದರು.
ಜಯನಗರದಲ್ಲಿ ಮಳೆಯ ಜೊತೆ ಬಲವಾಗಿ ಬೀಸಿರುವ ಗಾಳಿಸುದ್ದಿ
ಇದರಿಂದಾಗಿ ನಾಗರಾಜು ಕಾಂಗ್ರೆಸ್ ಸೇರಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ನಾಗರಾಜು ಅವರು, 'ಕಾರ್ಯಕ್ರಮವೊಂದರಲ್ಲಿ ಎಲ್ಲರೂ ಭೇಟಿಯಾಗಿದ್ದೆವು. ನಾನು ಕಾಂಗ್ರೆಸ್ ಸೇರಿದ್ದೇನೆ ಎಂಬ ಸುದ್ದಿ ಸುಳ್ಳು' ಎಂದು ಸ್ಪಷ್ಟನೆ ನೀಡಿದ್ದರು.
ಜಯನಗರದಲ್ಲಿ ಬಿಜೆಪಿಯನ್ನು ಸೋಲಿಸಲು ಏದುಸಿರುಬಿಟ್ಟ ಮೈತ್ರಿಕೂಟ
ಜೂನ್ 11ರಂದು ಜಯನಗರ ಕ್ಷೇತ್ರದ ವಿಧಾನಸಭೆ ಚುನಾವಣೆ ನಡೆದಿತ್ತು. ಜೂನ್ 13ರಂದು ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ನ ಸೌಮ್ಯಾ ರೆಡ್ಡಿ ಅವರು 2 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.