ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ನಟ ಸುದೀಪ್ ರನ್ನು ಭೇಟಿಯಾದ ಶ್ರೀರಾಮುಲು

|
Google Oneindia Kannada News

ಬೆಂಗಳೂರು, ಜುಲೈ 23: ಬಿಜೆಪಿಯ 'ಸಮರ್ಥನೆಗಾಗಿ ಸಂಪರ್ಕ' ಅಭಿಯಾನದಡಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀರಾಮುಲು ಅವರು ಖ್ಯಾತ ನಟ ಸುದೀಪ್ ಅವರನ್ನು ಇಂದು ಭೇಟಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಾಲ್ಕು ವರ್ಷಗಳ ಸಾಧನೆಗಳನ್ನೊಳಗೊಂಡ 'ಸಮರ್ಥನೆಗಾಗಿ ಸಂಪರ್ಕ' ಪುಸ್ತಕವನ್ನು ಸುದೀಪ್ ಅವರಿಗೆ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ನೀಡಿದರು.

ವಿಡಿಯೋ: ಸುದೀಪ್ ನಿರ್ಧಾರಕ್ಕೆ ಅಭಿಮಾನಿಗಳಿಂದ ಸಿಕ್ತು ಬೆಂಬಲ ವಿಡಿಯೋ: ಸುದೀಪ್ ನಿರ್ಧಾರಕ್ಕೆ ಅಭಿಮಾನಿಗಳಿಂದ ಸಿಕ್ತು ಬೆಂಬಲ

ನರೇಂದ್ರ ಮೋದಿ ಸರ್ಕಾರದ ಕಳೆದ ಮೇ ತಿಂಗಳಿಗೆ ನಾಲ್ಕು ವರ್ಷ ಪೂರೈಸಿದ ನಿಮಿತ್ತ, ನಾಲ್ಕು ವರ್ಷಗಳ ಸರ್ಕಾರದ ಸಾಧನೆಗಳನ್ನು ಒಳಗೊಂಡ ಪುಸ್ತಕವನ್ನು ದೇಶದ ಪ್ರಮುಖ ಸೆಲೆಬ್ರಿಟಿಗಳಿಗೆ ನೀಡುವುದು ಈ ಅಭಿಯಾನದ ಉದ್ದೇಶವಾಗಿದೆ.

BJPs Sampark Samarthan: Sriramulu meets Sudeep

ಇದು ಬಿಜೆಪಿಯ 2019 ರ ಲೋಕಸಭಾ ಚುನಾವಣೆಯ ಪ್ರಚಾರದ ಭಾಗವೂ ಹೌದು.

ಉ.ಕರ್ನಾಟಕ ಪ್ರತ್ಯೇಕ ರಾಜ್ಯ: ಯಡಿಯೂರಪ್ಪ ವಿರೋಧ, ಶ್ರೀರಾಮುಲು ಬೆಂಬಲ? ಉ.ಕರ್ನಾಟಕ ಪ್ರತ್ಯೇಕ ರಾಜ್ಯ: ಯಡಿಯೂರಪ್ಪ ವಿರೋಧ, ಶ್ರೀರಾಮುಲು ಬೆಂಬಲ?

ಶ್ರೀರಾಮುಲು ಮತ್ತು ಸುದೀಪ್ ಇಬ್ಬರೂ ಬಹುಕಾಲದ ಸ್ನೇಹಿತರಾಗಿದ್ದು, ಕಳೆದ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಶ್ರೀರಾಮುಲು ಅವರ ಪರವಾಗಿ ಸುದೀಪ್ ಪ್ರಚಾರ ನಡೆಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

BJPs Sampark Samarthan: Sriramulu meets Sudeep

'ನಾನು ಯಾವುದೇ ಪಕ್ಷದ ಪರವಲ್ಲ. ನಾನು ನನ್ನ ಸ್ನೇಹಿತರಿಗಾಗಿ ಪ್ರಚಾರ ನಡೆಸುತ್ತೇನೆ' ಎಂದು ಸುದೀಪ್ ಚುನಾವಣೆಯ ಸಮಯದಲ್ಲೇ ಹೇಳಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಮುಖಂಡರಾದ ಸೋಮಶೇಖರ ರೆಡ್ಡಿ, ಸಣ್ಣ ಪಕೀರಪ್ಪ ಅವರ ಪರವಾಗಿಯೂ ಸುದೀಪ್ ಪ್ರಚಾರ ನಡೆಸಿದ್ದರು.

English summary
As part of Sampark Samarthan campaign, BJP's Molakalmuru MLA Sriramulu met Kannada actor sudeep in Bengaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X