ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೀಘ್ರವೇ ಸಿದ್ದರಾಮಯ್ಯನವರ ಸರ್ಕಾರದ ಬಣ್ಣ ಬಯಲು: ಬಿಎಸ್ವೈ

|
Google Oneindia Kannada News

ಬೆಂಗಳೂರು, ಆಗಸ್ಟ್ 29 : ಕರ್ನಾಟಕ ವಿದಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಹಗರಣಗಳನ್ನು ಬಯಲಿಗೆಳೆಯಲು ಬಿಜೆಪಿ ಮುಂದಾಗಿದೆ.

ದಲಿತ ಕುಟುಂಬಗಳಿಗೆ ರೇಷ್ಮೆ ಸೀರೆ,ಪಂಚೆ-ಶರ್ಟ್ ನೀಡಿದ ಬಿಎಸ್ ವೈದಲಿತ ಕುಟುಂಬಗಳಿಗೆ ರೇಷ್ಮೆ ಸೀರೆ,ಪಂಚೆ-ಶರ್ಟ್ ನೀಡಿದ ಬಿಎಸ್ ವೈ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಳೆದ ನಾಲ್ಕೂವರೆ ವರ್ಷಗಳ ಆಡಳಿತಾವಧಿಯಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳ ಆರೋಪಗಳ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡಿ ಸಾರ್ವಜನಿಕರ ಮುಂದೆ ಇಡುವುದಾಗಿಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

BJP will collect information on CM Siddaramaiah's corruptions says Yeddyurappa

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್ ವೈ, "ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆದ ಎಲ್ಲ ಅವ್ಯವಹಾರಗಳ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದ್ದು, ಸಮಗ್ರ ವಿವರ ಒಳಗೊಂಡ ಆರೋಪ ಪಟ್ಟಿಯನ್ನು ಹೊರತಂದು ಅದನ್ನು ರಾಜ್ಯದ ಪ್ರತಿ ಮನೆ-ಮನೆಗೂ ತಲುಪಿಸಿ, ಸರ್ಕಾರದ ಬಂಡವಾಳ ಬಯಲು ಮಾಡುತ್ತೇವೆ' ಎಂದು ಹೇಳಿದರು.

ಅರ್ಕಾವತಿ ಲೇಔಟ್ ಡಿನೋಟಿಫಿಕೇಷನ್, ಎಸಿಬಿ ದುರುಪಯೋಗ, ಎಸಿಬಿಯಲ್ಲಿ ದಾಖಲಾಗಿರುವ ಪ್ರಕರಣಗಳು, ಸಚಿವರು ಹಾಗೂ ಶಾಸಕರ ಮನೆಗಳ ಮೇಲೆ ನಡೆದ ಐಟಿ ದಾಳಿ ಸೇರಿದಂತೆ ಹಲವು ದಾಖಲೆಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದರು.

English summary
BJP will collect information on CM Siddaramaiah's and Congress government corruptions released chargesheet soon, said Karnataka BJP president BS Yeddyurappa on August 29.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X