ಬೆಂಗಳೂರಲ್ಲಿರುವ ಬಿಹಾರಿಗಳಿಗೆ ಗಾಳ ಹಾಕಿದ ಬಿಜೆಪಿ
ಬೆಂಗಳೂರು, ಅಕ್ಟೋಬರ್ 05 : ಬಿಹಾರದಲ್ಲಿ ಅಧಿಕಾರದ ಗದ್ದುಗೆ ಏರಲೇಬೇಕು ಎಂದು ಕಾರ್ಯತಂತ್ರ ರೂಪಿಸಿರುವ ಬಿಜೆಪಿ, ಬೆಂಗಳೂರು ನಗರದಲ್ಲಿರುವ ಬಿಹಾರಿಗಳ ಮನವೊಲಿಸಲು ಮುಂದಾಗಿದೆ. ಇದಕ್ಕಾಗಿ ಎರಡು ಸಹಾಯವಾಣಿಯನ್ನು ಆರಂಭಿಸಿದೆ. ಸುಮಾರು 1.25 ಲಕ್ಷ ಬಿಹಾರಿಗಳು ಬೆಂಗಳೂರಿನಲ್ಲಿದ್ದಾರೆ ಎಂದು ಅಂದಾಜಿಸಲಾಗಿದೆ.
ಪ್ರತಿ ಸಹಾಯವಾಣಿ ಜೊತೆಗೆ 15 ಕಾರ್ಯಕರ್ತರಿದ್ದು ಇವರು ಬಿಹಾರದಿಂದ ವಲಸೆ ಬಂದವರ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುತ್ತಾರೆ. ಮತದಾನ ಮಾಡಲು ಬಿಹಾರಕ್ಕೆ ತೆರಳಿ ಬಿಜೆಪಿಗೆ ಮತ ಹಾಕುವಂತೆ ಈ ಕಾರ್ಯಕರ್ತರು ಅವರ ಮನವೊಲಿಸಲಿದ್ದಾರೆ. [ಬಿಹಾರ ಚುನಾವಣಾ ವೇಳಾಪಟ್ಟಿ]

ಮೋದಿ ಬಿಹಾರದ ಅಭಿವೃದ್ಧಿ ಮಾಡುತ್ತಾರೆ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಹಾರವನ್ನು ಅಭಿವೃದ್ಧಿ ಮಾಡಲಿದ್ದಾರೆ ಎಂಬ ಭರವಸೆಯನ್ನು ಬಿಜೆಪಿ ನಗರದಲ್ಲಿ ಪ್ರಚಾರ ಮಾಡುವ ಸಂದರ್ಭದಲ್ಲಿ ನೀಡುತ್ತಿದೆ. ಬೆಂಗಳೂರಿನಲ್ಲಿ ಉತ್ತಮ ಅವಕಾಶವಿರುವುದಕ್ಕೆ ವಲಸೆ ಬಂದಿದ್ದೀರಿ. ಬಿಹಾರವನ್ನು ಹೀಗೆ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಬಿಜೆಪಿ ಭರವಸೆ ನೀಡುತ್ತಿದೆ. ['ನಾವು ಮತ ಮಾಡಲು ಬಿಹಾರಕ್ಕೆ ಹೋಗಲ್ಲ']
ಬಿಹಾರದಿಂದ ವಲಸೆ ಬಂದವರ ಜೊತೆ ಮಾತನಾಡಿರುವ ಬೆಂಗಳೂರು ದಕ್ಷಿಣದ ಸಂಸದ ಮತ್ತು ಬಿಹಾರದ ಚುನಾವಣಾ ಉಸ್ತುವಾರಿ ಅನಂತ್ ಕುಮಾರ್ ಅವರು ನರೇಂದ್ರ ಮೋದಿ ಅವರು ಬಿಹಾರಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಬಿಜೆಪಿಗೆ ಮತ ನೀಡಿದರೆ, ರಾಜ್ಯ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದ್ದಾರೆ. [ಬಿಹಾರದಲ್ಲಿ ಮೋದಿ ಸೂಟ್-ಬೂಟ್ ಬಗ್ಗೆ ರಾಹುಲ್ ಮಾತು]
ಈ ಪ್ರಚಾರ ಸಭೆಯ ಹೊರತಾಗಿ ಬಿಜೆಪಿ ಎಸ್ಎಂಎಸ್ ಮೂಲಕವೂ ಪ್ರಚಾರ ನಡೆಸಲು ಉದ್ದೇಶಿಸಿದೆ. ಬಿಹಾರಿಗಳ ಮನವೊಲಿಸಲು ಕರೆಗಳನ್ನು ಮಾಡಲು ಪಕ್ಷ ನಿರ್ಧರಿಸಿದೆ. ಮೊದಲ ಹಂತದ ಚುನಾವಣೆ ವೇಳೆಗೆ ಸುಮಾರು 50 ಸಾವಿರ ಬಿಹಾರಿಗಳ ಮನವೊಲಿಸಲು ಪಕ್ಷ ಕಾರ್ಯತಂತ್ರ ಹಾಕಿಕೊಂಡಿದೆ.
ಅಂದಹಾಗೆ ಬಿಹಾರ ವಿಧಾನಸಭೆಯ ಅಧಿಕಾರಾವಧಿ ನವೆಂಬರ್ 29ಕ್ಕೆ ಮುಕ್ತಾಯವಾಗಲಿದ್ದು, ಅದಕ್ಕೆ ಮುನ್ನ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಸೆ.15ರ ಮಂಗಳವಾರ ಚುನಾವಣಾ ಅಧಿಸೂಚನೆ ಪ್ರಕಟಗೊಂಡಿದ್ದು, ಒಟ್ಟು 5 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 8ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications