ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್

|
Google Oneindia Kannada News

ಬೆಂಗಳೂರು, ನವೆಂಬರ್ 21: ಜಿಮ್ ಟ್ರೈನರ್ ಹಾಗೂ ಬಾಡಿ ಬಿಲ್ಡರ್ ಸೈಯದ್ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ, ರಕ್ತದ ಮಡುವಿನಲ್ಲಿದ್ದರೂ ನನ್ನನ್ನು ಬದುಕಿಸು ಎಂದು ಹೆಂಡತಿಗೆ ಕರೆ ಮಾಡಿ ಅಂಗಲಾಚಿದ್ದ.

ಅಕ್ರಮ ಸಂಬಂಧದಿಂದ ಹುಟ್ಟಿದ ನವಜಾತ ಶಿಶುವನ್ನು ಕೊಂದ ಪಾಪಿ ಅಪ್ಪನ ಬಂಧನ ಅಕ್ರಮ ಸಂಬಂಧದಿಂದ ಹುಟ್ಟಿದ ನವಜಾತ ಶಿಶುವನ್ನು ಕೊಂದ ಪಾಪಿ ಅಪ್ಪನ ಬಂಧನ

ಶಿವಾಜಿನಗರದ ಸಿಸಿ ರಸ್ತೆ ನಿವಾಸಿ ಸೈಯದ್ ಇರ್ಫಾನ್ ಪತ್ನಿ ಸಹಾಯದಿಂದ ಆಸ್ಪತ್ರೆಗೆ ದಾಖಲಾದರೂ , ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಮನೆಯಿಂದ ಅಂಗಡಿಯೊಂದಕ್ಕೆ ತಂಪು ಪಾನೀಯ ತರಲಂದು ಹೋಗುತ್ತಿದ್ದಾಗ ಬೈಕ್‌ಗಳಲ್ಲಿ ಬಂದ ಮೂವರು ಹೆಲ್ಮೆಟ್ ಧಾರಿಗಳು ಆತನನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು.

ಪತ್ರಕರ್ತನ ನಿಗೂಢ ನಾಪತ್ತೆ, ರಾಯಭಾರ ಕಚೇರಿಯಲ್ಲೊಂದು ಥ್ರಿಲ್ಲರ್ ಘಟನೆ! ಪತ್ರಕರ್ತನ ನಿಗೂಢ ನಾಪತ್ತೆ, ರಾಯಭಾರ ಕಚೇರಿಯಲ್ಲೊಂದು ಥ್ರಿಲ್ಲರ್ ಘಟನೆ!

ಗಂಭೀರವಾಗಿ ಗಾಯಗೊಂಡಿದ್ದ ಇರ್ಫಾನ್ ತನ್ನ ಪತ್ನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ, ಆತಂಕಗೊಂಡ ಪತ್ನಿ ಸ್ಥಳೀಯರ ಸಹಾಯದೊಂದಿಗೆ ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Bodybuilder murdered in Bengaluru

ಕೊಲೆಗೆ ಕಾರಣ: ಕೃತ್ಯಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಆದರೆ ಪ್ರಾಥಮಿಕ ತನಿಖೆಯಲ್ಲಿ ಹಣಕಾಸು, ಯುವತಿ ವಿಚಾರಕ್ಕೆ ಕೊಲೆಯಾಗಿರುವ ಸಾಧ್ಯತೆ ಇದೆ ಇದೆ ತಿಳಿದುಬಂದಿದೆ.

English summary
A 30-year-old gym trainer and bodybuilder was murdered by the three unknown killers in shivajinagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X