'ಹುಸಿ' ಬೆದರಿಕೆ ಕರೆ ಮಾಡಿದ್ದವ ಹೇಳಿದ ಕೊಲೆ 'ಸತ್ಯ' ಕಥೆ
ಬೆಂಗಳೂರು, ಸೆ. 07: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ಪ್ರಮುಖ ವಿಮಾನ ನಿಲ್ದಾಣಗಳಿಗೆ ಬೆದರಿಕೆ ಕರೆ ಮಾಡಿ ಬೆಚ್ಚು ಬೀಳಿಸಿದ ಪ್ರಕರಣ ಕುತೂಹಲಕಾರಿಯಾಗುತ್ತಿದೆ. ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿಯ ವಿಚಾರಣೆಗೊಳಪಡಿಸಿದ ಪೊಲೀಸರಿಗೆ ಕೊಲೆ ಪ್ರಕರಣವೊಂದರ ಮಾಹಿತಿ ಸಿಕ್ಕಿದೆ. ಬೆಂಗಳೂರಿನ ಟೆಕ್ಕಿ ಎಂ. ಜಿ. ಗೋಕುಲ್ ತನ್ನ ಪತ್ನಿ ಕೊಂದಿದ್ದನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಹುಸಿ ಬಾಂಬ್ ಬದರಿಕೆ ಕರೆ ಪ್ರಕರಣದ ಪ್ರಮುಖ ಅರೋಪಿ ಬೆಂಗಳೂರಿನ ಟೆಕ್ಕಿ ಎಂ. ಜಿ. ಗೋಕುಲ್ ಅವರು ಪೊಲೀಸ್ ವಿಚಾರಣೆ ವೇಳೆ ಪತ್ನಿಯನ್ನು ಕೊಂದಿದ್ದೇನೆ ಎಂದು ಬಾಯ್ಬಿಟ್ಟಿದ್ದಾರೆ. [ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬೆದರಿಕೆ ಕರೆ]
ಶನಿವಾರದಂದು ವಿಮಾನ ನಿಲ್ದಾಣಕ್ಕೆ ಕರೆ ಮಾಡಿದ್ದಲ್ಲದೆ, ವಾಟ್ಸಪ್ ಮೂಲಕ ಬೆದರಿಕೆ ಸಂದೇಶ ಕಳಿಸಿದ್ದ ಗೋಕಲ್, ಏರ್ ಅರೇಬಿಯಾ ವಿಮಾನದಲ್ಲಿ ಬಾಂಬ್ ಇರುವುದಾಗಿ ಬೆದರಕೆ ಹಾಕಿದ್ದರು.

ಸತ್ಯ ಹೇಳಿದ ಸಿಮ್: ಫೋನ್ ಕರೆ ಮೂಲ ಹುಡುಕಿದ ಪೊಲೀಸರಿಗೆ ಸಿಮ್ ಯಾರ ಹೆಸರಿನಲ್ಲಿದೆ ಎಂಬುದು ತಿಳಿದು ಬಂದಿದೆ. ಹುಡುಕಿಕೊಂಡು ಬಂದರೆ ಗೋಕುಲ್ ಪಕ್ಕದ ಮನೆ ನಿವಾಸಿಯ ಹೆಸರಿನಲ್ಲಿ ಸಿಮ್ ಖರೀದಿಸಲಾಗಿದೆ. ಪಕ್ಕದ ಮನೆಯವರ ಪತ್ನಿ ಮೇಲೆ ಕಣ್ಣು ಹಾಕಿದ್ದ ಸಾಫ್ಟ್ ವೇರ್ ಸಂಸ್ಥೆ ಉದ್ಯೋಗಿ ಗೋಕುಲ್ ಈ ಕುತಂತ್ರ ಹೆಣೆದಿದ್ದಾರೆ.
ನೆರಮನೆಯಾತನ ಸಿಮ್ ಬಳಸಿಕೊಂಡು ಬೆದರಿಕೆ ಕರೆ ಮಾಡುವುದು, ಪೊಲೀಸರು ಆತನನ್ನು ಬಂಧಿಸಿ ಕರೆದೊಯ್ದ ಮೇಲೆ ಆತನ ಪತ್ನಿ ಜೊತೆ ಸುಖವಾಗಿರುವುದು ಗೋಕುಲ್ ಉದ್ದೇಶವಾಗಿತ್ತು.
ಮುಚ್ಚಿ ಹೋಗಿದ್ದ ಪತ್ನಿ ಕೊಲೆ ಕೇಸ್: ಸುಮಾರು 7 ವರ್ಷಗಳ ಹಿಂದೆ ಪಶ್ಚಿಮ ಬಂಗಾಲದ ಯುವತಿಯನ್ನು ಮದುವೆಯಾಗಿದ್ದ. ದಿನನಿತ್ಯ ಜಗಳದಿಂದ ಬೇಸತ್ತ ಗೋಕುಲ್ ಜುಲೈ 28ರಂದು ಆಕೆಯನ್ನು ಉಸಿರುಗಟ್ಟಿಸಿ ಸಾಯಿಸಿದ್ದ. ಆದರೆ, ಅತ್ಮಹತ್ಯೆ ಎಂದು ಕಥೆ ಕಟ್ಟಿದ್ದ. ಯಾರು ದೂರು ನೀಡದ ಹಿನ್ನೆಲೆಯಲ್ಲಿ ಪೊಲೀಸರು ಕೂಡಾ ಹೆಚ್ಚಿನ ತನಿಖೆ ಮುಂದುವರೆಸಿರಲಿಲ್ಲ. ಈಗ ಮಡಿವಾಳ ಪೊಲೀಸರು ಈಗ ಕೊಲೆ ಕೇಸಾಗಿರುವ ಈ ಪ್ರಕರಣದ ಮುಂದಿನ ತನಿಖೆಯನ್ನು ಸೆಂಟ್ರಲ್ ಕ್ರೈಂ ಬ್ರ್ಯಾಂಚಿಗೆ ಒಪ್ಪಿಸಿದ್ದಾರೆ. ತನಿಖೆ ಮುಂದುವರೆದಿದೆ. (ಒನ್ ಇಂಡಿಯಾ ಸುದ್ದಿ)
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
New Airports: ಬಳ್ಳಾರಿ, ವಿಜಯನಗರ, ಕೊಪ್ಪಳದ ಜನರಿಗಾಗಿ ಹೊಸ ವಿಮಾನ ನಿಲ್ದಾಣ; ಎಂಬಿ ಪಾಟೀಲ್ ಬಿಗ್ ಅಪ್ಡೇಟ್ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications