ಕರೆದರೂ ಸಾಲಮನ್ನಾ ಕುರಿತ ಸಭೆಗೆ ಹೋಗಲಿಲ್ಲ ಯಡಿಯೂರಪ್ಪ
Recommended Video
ಬೆಂಗಳೂರು, ಮೇ 30: ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಾಲಮನ್ನಾ ಕುರಿತ ಮಹತ್ವದ ಸಭೆಗೆ ವಿರೋಧಪಕ್ಷ ನಾಯಕ ಯಡಿಯೂರಪ್ಪ ಅವರಿಗೆ ಆಹ್ವಾನ ಇದ್ದರೂ ಸಹಿತ ಅವರು ಗೈರಾದರು.
ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಮಂಗಳೂರು ಪ್ರವಾಸಕ್ಕೆ ತೆರಳುತ್ತಿರುವ ಕಾರಣ ಬಿಜೆಪಿಯ ಹಿರಿಯ ನಾಯಕ ಗೋವಿಂದ ಕಾರಜೋಳ ಅವರನ್ನು ಸಭೆಗೆ ಕಳುಹಿಸಲಾಗಿತ್ತು ಆದರೆ ಯಡಿಯೂರಪ್ಪ ಅವರು ಮಧ್ಯಾಹ್ನ 3 ಗಂಟೆ ವರೆಗೂ ಬೆಂಗಳೂರಲ್ಲೇ ಇದ್ದರು.
ರೈತರ ಸಾಲಮನ್ನಾ : 2 ಸೂತ್ರ ಮುಂದಿಟ್ಟ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರಿನಲ್ಲೇ ಇದ್ದರೂ ಸಹಿತ ಯಡಿಯೂರಪ್ಪ ಅವರು ರೈತ ಸಾಲಮನ್ನಾದ ಕುರಿತ ಅತ್ಯಂತ ಮಹತ್ವದ ಸಭೆಗೆ ಗೈರಾಗಿರುವುದು ಅವರ ಬದ್ಧತೆಯ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿದೆ.
ಸಾಲಮನ್ನಾ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದ ಯಡಿಯೂರಪ್ಪ ಅವರೇ ಈಗ ಸರ್ಕಾರ ಕರೆದರೂ ಸಭೆಯಲ್ಲಿ ಭಾಗವಹಿಸದೇ ಇರುವುದು ಹೋರಾಟದ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ.
ಸಾಲಮನ್ನಾಕ್ಕೆ 15 ದಿನದ ಕಾಲಾವಕಾಶ ಕೋರಿದ ಕುಮಾರಸ್ವಾಮಿ
ಈ ಬಗ್ಗೆ ಕುಮಾರಸ್ವಾಮಿ ಅವರು ಕೂಡ ಪ್ರತಿಕ್ರಿಯಿಸಿದ್ದು, ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಸಭೆಗೆ ಬರುತ್ತಿದ್ದರು, ಅವರ ಬದಲು ಗೋವಿಂದ ಕಾರಜೋಳ ಅವರನ್ನು ಕಳಿಹಿಸುತ್ತಿರಲಿಲ್ಲ ಎಂದಿದ್ದಾರೆ.