ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಟಲ್ ಬಿಹಾರಿ ವಾಜಪೇಯಿ ಅಸ್ಥಿ ಕಳಶ ಇಂದು ಬೆಂಗಳೂರಿಗೆ

|
Google Oneindia Kannada News

ಬೆಂಗಳೂರು, ಆಗಸ್ಟ್ 22: ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ಥಿ ಕಳಶವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ದೆಹಲಿಯಿಂದ ಬೆಂಗಳೂರಿಗೆ ತರಲಿದ್ದಾರೆ.

ಅಸ್ಥಿ ಕಲಶದೊಂದಿಗೆ ಆಗಮಿಸಲಿರುವ ಯಡಿಯೂರಪ್ಪ ಅವರನ್ನು ಆರ್.ಅಶೋಕ್ ಸೇರಿದಂತೆ ಬಿಜೆಪಿ ಗಣ್ಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳುವರು.

ಉತ್ತರ ಪ್ರದೇಶದ ಎಲ್ಲಾ ನದಿಗಳಲ್ಲೂ ವಾಜಪೇಯಿ ಚಿತಾಭಸ್ಮ ವಿಸರ್ಜನೆಉತ್ತರ ಪ್ರದೇಶದ ಎಲ್ಲಾ ನದಿಗಳಲ್ಲೂ ವಾಜಪೇಯಿ ಚಿತಾಭಸ್ಮ ವಿಸರ್ಜನೆ

ವಿಮಾನ ನಿಲ್ದಾಣ ರಸ್ತೆಯ ಟೋಲ್ ಗೇಟ್ ಬಳಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಸಂಜೆ 4 ಗಂಟೆಗೆ ಅಸ್ಥಿಕಲಶವನ್ನು ಸ್ವಾಗತಿಸಲಿದ್ದಾರೆ.

BS Yeddyurappa to bring Atal Bihari Vajpayees ashes today to Bengaluru

ಸಂಜೆ 5 ಗಂಟೆಗೆ ರಾಜ್ಯ ಬಿಜೆಪಿ ಕಾರ್ಯಾಲಯಕ್ಕೆ ಅಸ್ಥಿ ಕಲಶ ತಲುಪಲಿದ್ದು ಗಣ್ಯರಿಂದ ಅಟಲ್ ಜೀ ಅವರಿಗೆ ಗೌರವಾರ್ಪಣೆ ನಡೆಯಲಿದೆ.

ಭಾರತ ರಾಜಕೀಯದ ಮಿನುಗುತಾರೆ ಅಟಲ್ ಬಿಹಾರಿ ವಾಜಪೇಯಿಭಾರತ ರಾಜಕೀಯದ ಮಿನುಗುತಾರೆ ಅಟಲ್ ಬಿಹಾರಿ ವಾಜಪೇಯಿ

ಬಹುಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆಗಸ್ಟ್ 16 ರಂದು ಸಂಜೆ 5.05 ಕ್ಕೆ ದೆಹಲಿಯ ಆಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

English summary
BJP state president to bring former prime minister Atal Bihari Vajpayee's ashes from New Delhi to Bengaluru today. Thousands of BJP workers and leaders will pay their respect to former PM in the evening in BJP state office, Bengaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X