ಸಿದ್ದರಾಮಯ್ಯ ಸಚಿವ ಸಂಪುಟಕ್ಕೆ 13 ಹೊಸಮುಖಗಳ ಸೇರ್ಪಡೆ
ಬೆಂಗಳೂರು, ಜೂನ್ 19: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದು, 13 ಹೊಸ ಮುಖಗಳನ್ನು ಸೇರಿಸಿಕೊಂಡಿದ್ದಾರೆ. ಭಾನುವಾರ ಸಂಜೆ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.
34 ಜನ ಸದಸ್ಯರ ಸಂಪುಟಕ್ಕೆ ಇನ್ನು ಒಂದು ಸ್ಥಾನ ಮಾತ್ರ ಬಾಕಿ ಉಳಿದಿದೆ. ಪ್ರಮಾಣ ವಚನ ಸ್ವೀಕರಿಸಿದ 13 ಜನ ಶಾಸಕರ ಪೈಕಿ 9 ಜನ ಸಂಪುಟ ದರ್ಜೆ ಸಚಿವರು, 4 ರಾಜ್ಯ ದರ್ಜೆ ಸಚಿವರು ಇದರ ಜೊತೆಗೆ ಹಾಲಿ ಇಬ್ಬರು ಸಚಿವ(ಶರಣ ಪ್ರಕಾಶ್ ಪಾಟೀಲ್ ಹಾಗೂ ಕೃಷ್ಣಭೈರೇಗೌಡ)ರಿಗೆ ಕ್ಯಾಬಿನೆಟ್ ದರ್ಜೆಗೆ ಬಡ್ತಿ ಸಿಗಲಿದೆ.[ಅಂಬರೀಶ್ ಅವನತಿಗೆ ಕಾರಣವಾದ ಹೆಂಗಸಿನ ಬಗ್ಗೆ ಜಗ್ಗೇಶ್ ಟ್ವೀಟ್]
ರಾಯಚೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಯಾದಗಿರಿ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ.
ರಾಜ್ಯ ಸಂಪುಟ ಪುನಾರಚನೆಗೆ ಹಸಿರು ನಿಶಾನೆ ನೀಡಿದ್ದ ಕಾಂಗ್ರೆಸ್ ಹೈಕಮಾಂಡ್ 14 ಹಾಲಿ ಸಚಿವರಿಗೆ ಕೊಕ್ ನೀಡಿ ಹೊಸದಾಗಿ 14 ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ನಿರ್ದೇಶಿಸಿತ್ತು. 14ನೇ ಸ್ಥಾನಕ್ಕೆ ವಿಜಯನಗರದ ಶಾಸಕ ಎಂ ಕೃಷ್ಣಪ್ಪ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಸದ್ಯಕ್ಕೆ ಒಂದು ಸ್ಥಾನವನ್ನು ಖಾಲಿ ಇರಿಸಲಾಗಿದೆ. [ಸಂಪುಟದಿಂದ ಹೊರಹೋಗಲಿರುವ 13 ಸಚಿವರು]

ಕ್ಯಾಬಿನೆಟ್ ದರ್ಜೆ ಸಚಿವರಾಗಿ 9 ಶಾಸಕರಿಂದ ಪ್ರಮಾಣ ವಚನ:
| ಕ್ರಮ ಸಂಖ್ಯೆ | ಕ್ಷೇತ್ರ | ಕ್ಯಾಬಿನೆಟ್ ದರ್ಜೆ ಸಚಿವರು |
| 1 | ಸಾಗರ | ಕಾಗೋಡು ತಿಮ್ಮಪ್ಪ |
| 2 | ಶ್ರೀನಿವಾಸಪುರ | ರಮೇಶ್ ಕುಮಾರ್ |
| 3 | ನರಸಿಂಹರಾಜ ಕ್ಷೇತ್ರ | ತನ್ವೀರ್ ಸೇಠ್ |
| 4 | ಬಾಗಲಕೋಟೆ | ಎಚ್ ವೈ ಮೇಟಿ |
| 5 | ಯಲಬುರ್ಗಾ | ಬಸವರಾಜ ರಾಯರೆಡ್ಡಿ |
| 6 | ದಾವಣಗೆರೆ ಉತ್ತರ | ಎಸ್.ಎಸ್ ಮಲ್ಲಿಕಾರ್ಜುನ್ |
| 7 | ಪರಿಷತ್ ಸದಸ್ಯ | ಎಂ.ಆರ್.ಸೀತಾರಾಂ |
| 8 | ಕಲಘಟಗಿ | ಸಂತೋಷ್ ಲಾಡ್ |
| 9 | ಗೋಕಾಕ | ರಮೇಶ್ ಜಾರಕಿಹೊಳಿ |
| ರಾಜ್ಯಸಚಿವರಾಗಿ ನಾಲ್ವರಿಂದ ಪ್ರಮಾಣ ವಚನ | ||
| 1 | ಚಿತ್ತಾಪುರ | ಪ್ರಿಯಾಂಕ ಖರ್ಗೆ |
| 2 | ಭಾಲ್ಕಿ | ಈಶ್ವರ ಖಂಡ್ರೆ |
| 3 | ಉಡುಪಿ | ಪ್ರಮೋದ್ ಮಧ್ವರಾಜ್ |
| 4 | ಹಾವೇರಿ | ರುದ್ರಪ್ಪ ಲಮಾಣಿ |
(ಒನ್ಇಂಡಿಯಾ ಸುದ್ದಿ)
-
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ












Click it and Unblock the Notifications