ಸಿದ್ದರಾಮಯ್ಯ ಸಚಿವ ಸಂಪುಟಕ್ಕೆ 13 ಹೊಸಮುಖಗಳ ಸೇರ್ಪಡೆ
ಬೆಂಗಳೂರು, ಜೂನ್ 19: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದು, 13 ಹೊಸ ಮುಖಗಳನ್ನು ಸೇರಿಸಿಕೊಂಡಿದ್ದಾರೆ. ಭಾನುವಾರ ಸಂಜೆ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.
34 ಜನ ಸದಸ್ಯರ ಸಂಪುಟಕ್ಕೆ ಇನ್ನು ಒಂದು ಸ್ಥಾನ ಮಾತ್ರ ಬಾಕಿ ಉಳಿದಿದೆ. ಪ್ರಮಾಣ ವಚನ ಸ್ವೀಕರಿಸಿದ 13 ಜನ ಶಾಸಕರ ಪೈಕಿ 9 ಜನ ಸಂಪುಟ ದರ್ಜೆ ಸಚಿವರು, 4 ರಾಜ್ಯ ದರ್ಜೆ ಸಚಿವರು ಇದರ ಜೊತೆಗೆ ಹಾಲಿ ಇಬ್ಬರು ಸಚಿವ(ಶರಣ ಪ್ರಕಾಶ್ ಪಾಟೀಲ್ ಹಾಗೂ ಕೃಷ್ಣಭೈರೇಗೌಡ)ರಿಗೆ ಕ್ಯಾಬಿನೆಟ್ ದರ್ಜೆಗೆ ಬಡ್ತಿ ಸಿಗಲಿದೆ.[ಅಂಬರೀಶ್ ಅವನತಿಗೆ ಕಾರಣವಾದ ಹೆಂಗಸಿನ ಬಗ್ಗೆ ಜಗ್ಗೇಶ್ ಟ್ವೀಟ್]
ರಾಯಚೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಯಾದಗಿರಿ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ.
ರಾಜ್ಯ ಸಂಪುಟ ಪುನಾರಚನೆಗೆ ಹಸಿರು ನಿಶಾನೆ ನೀಡಿದ್ದ ಕಾಂಗ್ರೆಸ್ ಹೈಕಮಾಂಡ್ 14 ಹಾಲಿ ಸಚಿವರಿಗೆ ಕೊಕ್ ನೀಡಿ ಹೊಸದಾಗಿ 14 ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ನಿರ್ದೇಶಿಸಿತ್ತು. 14ನೇ ಸ್ಥಾನಕ್ಕೆ ವಿಜಯನಗರದ ಶಾಸಕ ಎಂ ಕೃಷ್ಣಪ್ಪ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಸದ್ಯಕ್ಕೆ ಒಂದು ಸ್ಥಾನವನ್ನು ಖಾಲಿ ಇರಿಸಲಾಗಿದೆ. [ಸಂಪುಟದಿಂದ ಹೊರಹೋಗಲಿರುವ 13 ಸಚಿವರು]

ಕ್ಯಾಬಿನೆಟ್ ದರ್ಜೆ ಸಚಿವರಾಗಿ 9 ಶಾಸಕರಿಂದ ಪ್ರಮಾಣ ವಚನ:
| ಕ್ರಮ ಸಂಖ್ಯೆ | ಕ್ಷೇತ್ರ | ಕ್ಯಾಬಿನೆಟ್ ದರ್ಜೆ ಸಚಿವರು |
| 1 | ಸಾಗರ | ಕಾಗೋಡು ತಿಮ್ಮಪ್ಪ |
| 2 | ಶ್ರೀನಿವಾಸಪುರ | ರಮೇಶ್ ಕುಮಾರ್ |
| 3 | ನರಸಿಂಹರಾಜ ಕ್ಷೇತ್ರ | ತನ್ವೀರ್ ಸೇಠ್ |
| 4 | ಬಾಗಲಕೋಟೆ | ಎಚ್ ವೈ ಮೇಟಿ |
| 5 | ಯಲಬುರ್ಗಾ | ಬಸವರಾಜ ರಾಯರೆಡ್ಡಿ |
| 6 | ದಾವಣಗೆರೆ ಉತ್ತರ | ಎಸ್.ಎಸ್ ಮಲ್ಲಿಕಾರ್ಜುನ್ |
| 7 | ಪರಿಷತ್ ಸದಸ್ಯ | ಎಂ.ಆರ್.ಸೀತಾರಾಂ |
| 8 | ಕಲಘಟಗಿ | ಸಂತೋಷ್ ಲಾಡ್ |
| 9 | ಗೋಕಾಕ | ರಮೇಶ್ ಜಾರಕಿಹೊಳಿ |
| ರಾಜ್ಯಸಚಿವರಾಗಿ ನಾಲ್ವರಿಂದ ಪ್ರಮಾಣ ವಚನ | ||
| 1 | ಚಿತ್ತಾಪುರ | ಪ್ರಿಯಾಂಕ ಖರ್ಗೆ |
| 2 | ಭಾಲ್ಕಿ | ಈಶ್ವರ ಖಂಡ್ರೆ |
| 3 | ಉಡುಪಿ | ಪ್ರಮೋದ್ ಮಧ್ವರಾಜ್ |
| 4 | ಹಾವೇರಿ | ರುದ್ರಪ್ಪ ಲಮಾಣಿ |
(ಒನ್ಇಂಡಿಯಾ ಸುದ್ದಿ)
-
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ











Click it and Unblock the Notifications