ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 12 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಾವೇರಿ ಹೋರಾಟದ ಕಿಚ್ಚು ತೀವ್ರಗೊಂಡಿದೆ. ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸೆಕ್ಷನ್ 144 ಅನ್ವಯ ನಿ‍‍‍ಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ಈ ಕುರಿತು ಸೋಮವಾರ ಸಂಜೆ ಆದೇಶ ಹೊರಡಿಸಿದರು. ತಕ್ಷಣದಿಂದ ಜಾರಿಗೆ ಬರುವಂತೆ 17 ಗಂಟೆಗಳ ಅವಧಿಗೆ ಸಿಆರ್‌ಪಿಸಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.[ಚಿತ್ರಗಳು : ಹಿಂಸಾಚಾರಕ್ಕೆ ತಿರುಗಿದ ಕಾವೇರಿ ಪ್ರತಿಭಟನೆ]

Cauvery dispute : Section 144 CrPC imposed in Bengaluru

ಬೆಂಗಳೂರಿನ ಮೈಸೂರು ರಸ್ತೆ, ಸುಂಕದಕಟ್ಟೆ, ನಾಯಂಡಹಳ್ಳಿ, ವಿಜಯನಗರ, ಹಂಪಿ ನಗರ, ಮಾಗಡಿ ರಸ್ತೆ, ಪೀಣ್ಯ ಮುಂತಾದ ಸ್ಥಳಗಳಲ್ಲಿ ತಮಿಳುನಾಡಿಗೆ ಸೇರಿದ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಹಿನ್ನಲೆಯಲ್ಲಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.[ಬೆಂಗಳೂರಿನಲ್ಲಿರುವ ತಮಿಳರ ಪ್ರದೇಶಕ್ಕೆ ಬಿಗಿ ಭದ್ರತೆ]

15 ಸಾವಿರ ಪೊಲೀಸ್, 3 ಸಾವಿರ ಗೃಹ ರಕ್ಷಕ ದಳ, 270 ಚೀತಾ ವಾಹನಗಳನ್ನು ಬೆಂಗಳೂರಿನಲ್ಲಿ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಪ್ರತಿಭಟನೆಯಲ್ಲಿ ತೊಡಗಿದ್ದ 200ಕ್ಕೂ ಅಧಿಕ ಜನರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

English summary
Bengaluru police commissioner has imposed section 144 of the CrPC in Bengaluru city from 17 hours today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X