ಬೆಂಗಳೂರಿನಲ್ಲಿ ಬುಧವಾರ ಏನೇನಾಯ್ತು?
ಬೆಂಗಳೂರು, ಸೆಪ್ಟೆಂಬರ್ 14 : ನಗರದ 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ತೆರವುಗೊಳಿಸಲಾಗಿದೆ. ಆದರೆ, ನಗರದಾದ್ಯಂತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಬೆಂಗಳೂರು
ನಗರ
ಪೊಲೀಸ್
ಆಯುಕ್ತ
ಎನ್.ಎಸ್.ಮೇಘರಿಕ್
ಅವರು
ಈ
ಕುರಿತು
ಬುಧವಾರ
ಆದೇಶ
ಹೊರಡಿಸಿದರು.
ಸೋಮವಾರ
ನಗರದಲ್ಲಿ
ಗಲಭೆ
ನಡೆದ
ಬಳಿಕ
16
ಪೊಲೀಸ್
ಠಾಣಾ
ವ್ಯಾಪ್ತಿಯಲ್ಲಿ
ಕರ್ಫ್ಯೂ
ಜಾರಿಗೊಳಿಸಲಾಗಿತ್ತು.
* ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾಂಗ್ರೆಸ್ ಶಾಸಕರ ಸಭೆ ನಡೆಸುತ್ತಿದ್ದಾರೆ. ನಗರದಲ್ಲಿನ ಗಲಭೆ, ಬಿಬಿಎಂಪಿಯಲ್ಲಿನ ಮೈತ್ರಿ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.
* ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸೋಮವಾರ ಗಲಭೆ ನಡೆದ ಲಗ್ಗೆರೆ, ಹೆಗ್ಗನಹಳ್ಳಿ, ಟಿಂಬರ್ ಯಾರ್ಡ್ ಲೇಔಟ್, ನಾಯಂಡಹಳ್ಳಿ ಮುಂತಾದ ಸ್ಥಳಗಳಿಗೆ ಭೇಟಿ ನೀಡಿದ್ದದಾರೆ.
* ಕಾವೇರಿ ಜಲಾನಯನ ಪ್ರದೇಶಗಳ ವ್ಯಾಪ್ತಿಯ ಶಾಸಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಲಿದ್ದಾರೆ. ಕೋರ್ಟ್ ಆದೇಶ ಪಾಲನೆ, ರೈತರ ಹೋರಾಟ ಮುಂತಾದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.
ಹಿಂದಿನ ಸುದ್ದಿ : ಬೆಂಗಳೂರಿನ ಜನಜೀವನ ಸಹಜ ಸ್ಥಿತಿಗೆ ಬಂದಿದೆ. ಸೋಮವಾರದ ಗಲಭೆ ಬಳಿಕ ಮಂಗಳವಾರ ಸ್ವಯಂ ಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಬುಧವಾರ ಜನಜೀವನ ಸಹಜ ಸ್ಥಿತಿಗೆ ಬಂದಿದೆ. ಆದರೆ, ನಿಷೇಧಾಜ್ಞೆ ಜಾರಿಯಲ್ಲಿದೆ.[In Pics : ಕನ್ನಡಿಗರ ಆಕ್ರೋಶಕ್ಕೆ ಸುಟ್ಟು ಭಸ್ಮವಾದ ಬಸ್ಸು, ಲಾರಿ]
ಬುಧವಾರ
ಬೆಳಗ್ಗೆ
ಬಿಎಂಟಿಸಿ
ಬಸ್,
ಆಟೋ,
ಕ್ಯಾಬ್,
ನಮ್ಮ
ಮೆಟ್ರೋ
ಸಂಚಾರ
ನಡೆಸುತ್ತಿವೆ.
ಪೆಟ್ರೋಲ್
ಬಂಕ್,
ಹೋಟೆಲ್
ತೆರೆದಿವೆ.
ಇಂದು
ಶಾಲಾ-ಕಾಲೇಜುಗಳಿಗೆ
ರಜೆ
ಇಲ್ಲ.
ಸೋಮವಾರ
ಸಂಜೆ
ಹೆಚ್ಚಿನ
ಗಲಾಟೆ
ನಡೆದ
16
ಪೊಲೀಸ್
ಠಾಣಾ
ವ್ಯಾಪ್ತಿಯಲ್ಲಿ
ಕರ್ಪ್ಯೂ
ಮುಂದುವರೆಸಲಾಗಿದೆ.[ಕಾವೇರಿ
ಕಿಚ್ಚು
:
ಸಿದ್ದರಾಮಯ್ಯ
ಪತ್ರಿಕಾಗೋಷ್ಠಿ
ವಿವರ]
ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೆಕ್ಷನ್ 144ರ ಪ್ರಕಾರ ನಿಷೇಧಾಜ್ಞೆ ಜಾರಿಯಲ್ಲಿದೆ.[ಕಾವೇರಿ ಕಿಚ್ಚು : ಬೆಂಗಳೂರಲ್ಲಿ 312 ಮಂದಿ ಬಂಧನ]
ನಗರದ ಸೂಕ್ಷ್ಮ ಪ್ರದೇಶಗಳಲ್ಲಿ 15,000 ಸಾವಿರ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.