#NoBandhInBengaluru, ನೋ ಎಣ್ಣೆ ಪಾರ್ಟಿ: ಪೊಲೀಸ್
ಬೆಂಗಳೂರು, ಸೆ.19: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಮೇಲುಸ್ತುವಾರಿ ಸಮಿತಿ ನಿರ್ಣಯ ಪ್ರಕಟಿಸಿರುವುದು ತಿಳಿದಿರಬಹುದು. ಈ ವಿಷಯವನ್ನು ದುರ್ಬಳಕೆ ಮಾಡಿಕೊಂಡು ಕೆಲ ಕಿಡಿಗೇಡಿಗಳು ಬೆಂಗಳೂರಿನ ಬಂದ್ ಇದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಬೆಂಗಳೂರು ನಗರ ಪೊಲೀಸರು #NoBandhInBengaluru ಎಂದು ಟ್ವೀಟ್ ಮಾಡಿದ್ದಾರೆ
ಸಿಎಂ ಅವರ ಅಧಿಕೃತ ನಿವಾಸದಲ್ಲಿ ಸೋಮವಾರ ಸಂಜೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್, ನಗರ ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ಸೇರಿದಂತೆ ಹಿರಿಯ ಅಧಿಕಾರಿಗಳು ತುರ್ತು ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಾಪಾಡುವಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಸೂಚನೆ ನೀಡಿದರು. [ಕಾವೇರಿ ಕೊಳ್ಳದಲ್ಲಿ ಭುಗಿಲೆದ್ದ ಆಕ್ರೋಶ, ಹೆದ್ದಾರಿ ಬಂದ್]
ಅದರಂತೆ ಪೊಲೀಸರು ತಮ್ಮ ಅಧಿಕೃತ ಟ್ವಿಟ್ಟರ್ ಐಡಿಯಿಂದ ನಿರಂತರವಾಗಿ ಬೆಂಗಳೂರಿನಲ್ಲಿ ಶಾಂತ ಪರಿಸ್ಥಿತಿ ಇದೆ ಎಂದು ಟ್ವೀಟ್ ಮಾಡುತ್ತಲೇ ಇದ್ದಾರೆ.
#NoBandhInBengaluru ನಗರದಾದ್ಯಂತ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದ್ದು ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಸಾರ್ವಜನಿಕರಲ್ಲಿ ವಿನಂತಿ. @CPBlr
— M.G.N. Kumar (@DcpComdCentre) September 19, 2016
#NoBandhInBengaluru ಬೆಂಗಳೂರು ನಗರ ಶಾಂತಿಯುತವಾಗಿದ್ದು ನಾಗರೀಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಕೋರಿದೆ,ಯಾವುದೇ ತುರ್ತು ಸಂದರ್ಭಗಳಲ್ಲಿ ಡಯಲ್100ಗೆ ಕರೆ ಮಾಡಿ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಬುಧವಾರ(ಸೆ. 21) 1 ಗಂಟೆ ತನಕ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಸೆ, 25 ರ ತನಕ ಸಿಆರ್ ಪಿಸಿ ಸೆಕ್ಷನ್ 144 ಜಾರಿಯಲ್ಲಿರುತ್ತದೆ. [ವದಂತಿಗೆ ಕಿವಿ ಕೊಡಬೇಡಿ, ಸೆ.20ರಂದು ಬೆಂಗಳೂರು ಬಂದ್ ಇಲ್ಲ]
Thank the public for sharing videos/photos of rioters with us. Request you to come forward & share more at 9480801000. Anonymity guaranteed
— BengaluruCityPolice (@BlrCityPolice) September 19, 2016
15 ಸಾವಿರ ಪೊಲೀಸರು, ಸಿವಿಎಲ್, ಸಿಎಆರ್, ಕೆಎಸ್ ಆರ್ ಪಿ, ಸಿಪಿಎಂಎಫ್ ಎಲ್ಲರೂ ನಿಮ್ಮ ರಕ್ಷಣೆಗೆ ಇದ್ದಾರೆ ಎಂದು ನಾಗರಿಕರಿಗೆ ಪೊಲೀಸರು ಅಭಯ ನೀಡಿದ್ದಾರೆ.