ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

#NoBandhInBengaluru, ನೋ ಎಣ್ಣೆ ಪಾರ್ಟಿ: ಪೊಲೀಸ್

By Mahesh
|
Google Oneindia Kannada News

ಬೆಂಗಳೂರು, ಸೆ.19: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಮೇಲುಸ್ತುವಾರಿ ಸಮಿತಿ ನಿರ್ಣಯ ಪ್ರಕಟಿಸಿರುವುದು ತಿಳಿದಿರಬಹುದು. ಈ ವಿಷಯವನ್ನು ದುರ್ಬಳಕೆ ಮಾಡಿಕೊಂಡು ಕೆಲ ಕಿಡಿಗೇಡಿಗಳು ಬೆಂಗಳೂರಿನ ಬಂದ್ ಇದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಬೆಂಗಳೂರು ನಗರ ಪೊಲೀಸರು #NoBandhInBengaluru ಎಂದು ಟ್ವೀಟ್ ಮಾಡಿದ್ದಾರೆ

ಸಿಎಂ ಅವರ ಅಧಿಕೃತ ನಿವಾಸದಲ್ಲಿ ಸೋಮವಾರ ಸಂಜೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್, ನಗರ ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ಸೇರಿದಂತೆ ಹಿರಿಯ ಅಧಿಕಾರಿಗಳು ತುರ್ತು ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಾಪಾಡುವಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಸೂಚನೆ ನೀಡಿದರು. [ಕಾವೇರಿ ಕೊಳ್ಳದಲ್ಲಿ ಭುಗಿಲೆದ್ದ ಆಕ್ರೋಶ, ಹೆದ್ದಾರಿ ಬಂದ್]

Bengaluru city police commissioner orders closure of all liquor outlets

ಅದರಂತೆ ಪೊಲೀಸರು ತಮ್ಮ ಅಧಿಕೃತ ಟ್ವಿಟ್ಟರ್ ಐಡಿಯಿಂದ ನಿರಂತರವಾಗಿ ಬೆಂಗಳೂರಿನಲ್ಲಿ ಶಾಂತ ಪರಿಸ್ಥಿತಿ ಇದೆ ಎಂದು ಟ್ವೀಟ್ ಮಾಡುತ್ತಲೇ ಇದ್ದಾರೆ.

#NoBandhInBengaluru ಬೆಂಗಳೂರು ನಗರ ಶಾಂತಿಯುತವಾಗಿದ್ದು ನಾಗರೀಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಕೋರಿದೆ,ಯಾವುದೇ ತುರ್ತು ಸಂದರ್ಭಗಳಲ್ಲಿ ಡಯಲ್100ಗೆ ಕರೆ ಮಾಡಿ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಬುಧವಾರ(ಸೆ. 21) 1 ಗಂಟೆ ತನಕ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಸೆ, 25 ರ ತನಕ ಸಿಆರ್ ಪಿಸಿ ಸೆಕ್ಷನ್ 144 ಜಾರಿಯಲ್ಲಿರುತ್ತದೆ. [ವದಂತಿಗೆ ಕಿವಿ ಕೊಡಬೇಡಿ, ಸೆ.20ರಂದು ಬೆಂಗಳೂರು ಬಂದ್ ಇಲ್ಲ]

15 ಸಾವಿರ ಪೊಲೀಸರು, ಸಿವಿಎಲ್, ಸಿಎಆರ್, ಕೆಎಸ್ ಆರ್ ಪಿ, ಸಿಪಿಎಂಎಫ್ ಎಲ್ಲರೂ ನಿಮ್ಮ ರಕ್ಷಣೆಗೆ ಇದ್ದಾರೆ ಎಂದು ನಾಗರಿಕರಿಗೆ ಪೊಲೀಸರು ಅಭಯ ನೀಡಿದ್ದಾರೆ.

English summary
Bengaluru city police commissioner orders closure of all liquor outlets from 6 AM on 20th September to 1 AM 21st September as a preventive measure following the Cauvery waters supervisory committee order.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X