ಸಿಸಿಬಿ ಪೊಲೀಸರ ಮುಂದೆ ಕಾಶಪ್ಪನವರ್ ಹೇಳಿದ್ದೇನು?
ಬೆಂಗಳೂರು, ಜು. 8 : ಪೊಲೀಸ್ ಪೇದೆಗಳ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಸೋಮವಾರ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಅತ್ತ ಸೆಷನ್ ನ್ಯಾಯಾಲಯ ಶಾಸಕರ ನಿರೀಕ್ಷಣಾ ಜಾಮೀನಿನ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದ ಹಿನ್ನಲೆಯಲ್ಲಿ ಶಾಸಕರು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕೇಂದ್ರ ಕಚೇರಿಗೆ ಆಗಮಿಸಿದ್ದರು. ಸಿಸಿಬಿ ಎಸಿಪಿ ರವಿಕುಮಾರ್ ನೇತೃತ್ವದ ತಂಡ ಸುಮಾರು ನಾಲ್ಕುವರೆ ತಾಸು ಶಾಸಕರ ವಿಚಾರಣೆ ನಡೆಸಿ, ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿದರು.

ಗಲಾಟೆ ನಡೆದ ದಿನ ನನ್ನ ಹುಟ್ಟುಹಬ್ಬವಿತ್ತು. ಆದ್ದರಿಂದ, ಕುಟುಂಬದ ಸದಸ್ಯರೊಂದಿಗೆ ಸ್ಕೈಬಾರ್ ಗೆ ಹೋಗಿದ್ದೆವು. ಬಾರ್ ನ ಮತ್ತೂಂದು ಟೇಬಲ್ ನಲ್ಲಿ ಸೋಮಶೇಖರಗೌಡ ಇದ್ದರು. ಸೋಮಶೇಖರ ಗೌಡ ರೌಡಿಶೀಟರ್ ಎಂಬುದು ನನಗೆ ಗೊತ್ತಿಲ್ಲ. ಅವರ ಪರಿಚಯವೂ ಇಲ್ಲ. ಆ ಸಂದರ್ಭದಲ್ಲಿ ನಡೆದ ಗಲಾಟೆಗೂ ನನಗೂ ಸಂಬಂಧವಿಲ್ಲ ಎಂದು ಶಾಸಕರು ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. [ಕೂಡಲ ಸಂಗಮನ ಆಣೆ ತಪ್ಪೇ ಮಾಡಿಲ್ಲ]
70 ಪ್ರಶ್ನೆಗಳು : ಸುಮಾರು ನಾಲ್ಕುವರೆ ತಾಸಿನ ವಿಚಾರಣೆ ಸಂದರ್ಭದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ 70 ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ತಿಳಿದುಬಂದಿದೆ. ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿದ ಶಾಸಕರು, ತಮ್ಮದೇನು ತಪ್ಪಿಲ್ಲ, ಪೊಲೀಸರ ಮೇಲೆ ತಾವು ಹಲ್ಲೆ ಮಾಡಿಲ್ಲ ಎಂದು ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ. [ಸೋಮೇಗೌಡ ಯಾರು?]
ನ್ಯಾಯ ಸಿಗುವ ಭರವಸೆ ಇದೆ : ಸಿಸಿಬಿ ಪೊಲೀಸರ ವಿಚಾರಣೆ ನಂತರ ವಿಧಾನಸೌಧಕ್ಕೆ ಆಗಮಿಸಿದ ಕಾಶಪ್ಪನರ್ ಮಾಧ್ಯಮಗಳೊಂದಿಗೆ ಮಾತನಾಡಿದರು. "ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಬಂದಿತ್ತು. ಆ ಕಾರಣದಿಂದ ಹಾಜರಾಗಿದ್ದೇನೆ. ತನಿಖಾಧಿಕಾರಿಗಳ ತಂಡ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ. ನನಗೆ ನ್ಯಾಯ ಸಿಗುವ ಭರವಸೆ ಇದೆ" ಎಂದು ಹೇಳಿದರು.
ಜಾಮೀನು ಅರ್ಜಿ ಇಂದು ವಿಚಾರಣೆ : ಸೋಮವಾರ ವಿಜಯಾನಂದ ಕಾಶಪ್ಪನವರ್ ಅವರ ನಿರೀಕ್ಷಣಾ ಜಾಮೀನಿನ ವಿಚಾರಣೆಯನ್ನು ಕೈಗೆತ್ತಿಕೊಂಡ ಸೆಷನ್ ನ್ಯಾಯಾಲಯ, ಆರೋಪಿ ಪರ ವಕೀಲರ ವಾದ ಕೇಳಿದ ಬಳಿಕ ಸರ್ಕಾರಿ ಅಭಿಯೋಜಕರ ವಾದ ಮಂಡನೆಗಾಗಿ ಮಂಗಳವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications