ಬೆಂಗಳೂರು ಕೆರೆ ತೊಳೆಯುವುದಕ್ಕೆ ಕೇಂದ್ರದಿಂದ 800 ಕೋಟಿ ರು.
ಬೆಂಗಳೂರು, ಏಪ್ರಿಲ್ 20: ದೇಶಕ್ಕೆ ಮಾದರಿಯಾಗುವಂತಿದ್ದ ಬೆಂಗಳೂರಿನ ಕೆರೆಗಳು ಈಗ ಮಾಲಿನ್ಯಮಯವಾಗಿವೆ. ಕೆರೆಗಳ ಹೂಳೆತ್ತಲು, ಕೆರೆಗಳ ಸೌಂದರ್ಯ ಮರುಕಳಿಸುವಂತೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಬೆಂಗಳೂರು ಕೆರೆಗಳ ಸಂರಕ್ಷಣೆ, ಸ್ವಚ್ಛತೆ, ಅಭಿವೃದ್ಧಿಗಾಗಿ 800 ಕೋಟಿ ರು ಅನುದಾನ ನೀಡಲಾಗುತ್ತಿದೆ ಎಂದು ಸಚಿವ ಪ್ರಕಾಶ್ ಘೋಷಿಸಿದ್ದಾರೆ.[ಬೆಳ್ಳಂದೂರು ಕೆರೆ ಶುದ್ಧಿಗೆ ನಮ್ಮ 'ಬೆಂಗಳೂರು ಫೌಂಡೇಷನ್ ' ಸೂತ್ರ]
ಪರಿಸರ ಸಂರಕ್ಷಣಾ ಕಾಯ್ದೆ ಸೆಕ್ಷನ್ 5 ಹಾಗೂ 18ರ ಅಡಿಯಲ್ಲಿ ಕ್ರಮ ಜರುಗಿಸಲು ಸೂಚಿಸಲಾಗಿದೆ. ಅಮೃತ್ ಯೋಜನೆ ಅಡಿಯಲ್ಲಿ 800 ಕೋಟಿ ರು ಮಂಜೂರು ಮಾಡಲಾಗಿದೆ ಎಂದಿದ್ದಾರೆ.

'ನಾನು ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುತ್ತೇನೆ. ಮೇ ತಿಂಗಳ ಮೊದಲ ವಾರದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಕೆರೆಗಳನ್ನು ಮಾಲಿನ್ಯ ಮುಕ್ತಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಕೆರೆಗಳಿಗೆ ಚರಂಡಿ ನೀರು ಬಿಡುತ್ತಿರುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗುವುದು ಎಂದು ಪ್ರಕಾಶ್ ಹೇಳಿದರು.[ಬೆಂಗಳೂರು ಬೆಳ್ಳಂದೂರು ಕೆರೆ ಬಿಳಿನೊರೆಯ ರಹಸ್ಯ ಲೀಕ್]
ಬೆಳ್ಳಂದೂರು,ವರ್ತೂರು, ಹಲಸೂರು ಕೆರೆ ಮಾಲಿನ್ಯ, ಪರಿಸರ ನಾಶದ ಬಗ್ಗೆ ವರದಿಗಳನ್ನು ಪಡೆಯಲಾಗಿದೆ. ಕೆರೆಗಳ ಸುತ್ತಾ ಮುತ್ತಾ ಪರಿಸರ ವೈವಿಧ್ಯತೆಯನ್ನು ಕಾಪಾಡಲು ಸೂಚಿಸಲಾಗಿದೆ. ಮಾಲಿನ್ಯಕ್ಕೆ ಕಾರಣವಾಗುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಪ್ರಕಾಶ್ ಹೇಳಿದರು.
ಸಚಿವ ಪ್ರಕಾಶ್ ಅವರ ಮಾತುಗಳನ್ನು ವಿಡಿಯೋದಲ್ಲಿ ನೋಡಿ:
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications