ಬೆಂಗಳೂರಿನ ಮಾನ ತೆಗೆಯುತ್ತಿದೆ ವರ್ತೂರು ಕೆರೆಯ ಈ ವಿಡಿಯೋ
ವರ್ತೂರು ಕೆರೆಯ ನೊರೆ ಮುಖ್ಯಮಂತ್ರಿಯವರನ್ನು ಮುಟ್ಟಲು ಮೇಲೇಳುತ್ತಿದೆ ಎಂದು ವರ್ತೂರು ಕೆರೆಯ ಇಂದಿನ ಸ್ಥಿತಿ ಕಂಡು ನಿರಾಸೆಗೊಂಡವರೊಬ್ಬರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು, ಮೇ 29: ಇಡಿ ರಾಜ್ಯವೂ ಮಳೆಗಾಗಿ ಪರಿತಪಿಸುತ್ತಿದ್ದರೆ, ಯಾಕಾದ್ರೂ ಶುರುವಾಯ್ತೋ ಮಳೆಗಾಲ ಎಂದು ಪರಿತಪಿಸುವ ಒಂದಷ್ಟು ಜನರು ರಾಜಧಾನಿ ಬೆಂಗಳೂರಿನಲ್ಲೇ ಇದ್ದಾರೆ. ಅದಕ್ಕೆ ಕಾರಣ ಅವರ ಮನೆ ವರ್ತೂರು ಮತ್ತು ಬೆಳ್ಳಂದೂರು ಕೆರೆಯ ಭಾಗದಲ್ಲಿರುವುದು!
ನಿಜಕ್ಕೂ ಹೌದು, ಮಳೆಗಾಲ ಶುರುವಾಗುತ್ತಿದ್ದಂತೆಯೇ ಈ ಎರಡು ಕೆರೆಯ ಭಾಗದಲ್ಲಿರುವ ಮನೆಯ ಜನರದು ನರಕದ ಪಾಡು! ಈಗಾಗಲೇ ಉದ್ಯಾನನಗರಿಯಲ್ಲಿ ಕಳೆದೊಂದು ವಾರದಿಂದ ಸುರಿದ ಭಾರೀ ಮಳೆಗೆ ವರ್ತೂರು ಕೆರೆಯಲ್ಲಿ ಮಾಲಿನ್ಯಯುಕ್ತ ನೊರೆ ತುಂಬಿದ್ದು, ರಸ್ತೆಯ ಮೇಲೆಲ್ಲ ಹಾರಿ ದಾರಿಹೋಕರಿಗೂ, ವಾಹನ ಸವಾರರಿಗೂ ಅಸಹ್ಯವನ್ನುಂಟುಮಾಡುತ್ತಿದೆ.[ವರ್ತೂರು ಕೆರೆಯಿಂದ ಹಾರಿ ಬಂತು ನೊರೆ ನೊರೆ]
ವರ್ತೂರು ಕೆರೆಯಲ್ಲಿ ಮುಗಿಲೆತ್ತರಕ್ಕೆ ಹಾರುತ್ತಿರುವ ಮಾಲಿನ್ಯಯುಕ್ತ ನೊರೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಣಗಳಲ್ಲಿ ವೈರಲ್ ಆಗಿ ಬೆಂಗಳೂರಿನ ಮಾನವನ್ನೇ ಹರಾಜುಮಾಡುತ್ತಿದೆ. ಇಷ್ಟಾದರೂ ಪ್ರತೀ ಮಳೆಗಾಲದಲ್ಲೂ ಸರ್ಕಾರ ಮಾತ್ರ ದಿವ್ಯ ನಿರ್ಲಕ್ಷ್ಯ ತೋರುತ್ತಿರುವುದರ ಬಗ್ಗೆ ಬೆಂಗಳೂರಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವ ಸರ್ಕಾರ ಬಂದರೂ, ಬೆಂಗಳೂರಿಗರ ಈ ಸಮಸ್ಯೆ ಮಾತ್ರ ಪರಿಹಾರ ಕಾಣುತ್ತಿಲ್ಲ![ಬೆಳ್ಳಂದೂರು ಪರಿಸರದ ಕಾರ್ಖಾನೆಗಳ ನೀರು, ವಿದ್ಯುತ್ ಕಡಿತಕ್ಕೆ ಆದೇಶ]
ಬೆಳ್ಳಂದೂರು ಕೆರೆಯ ಸ್ವಚ್ಛತಾ ಕಾರ್ಯ ಆರಂಭವಾಗಿದ್ದರೂ ಆ ಕಾಮಗಾರಿ ಸಂಪೂರ್ಣ ಮುಗಿಯುವುದಕ್ಕೆ ವರುಷವೇ ಬೇಕು ಎಂದು ಸರ್ಕಾರವೇ ಹೇಳಿದೆ. ಅದಕ್ಕಾಗಿಯೇ ರಾಷ್ಟ್ರೀಯ ಹಸಿರು ಪ್ರಾಧಿಕಾರದ ಬಳಿ ಕಾಲಾವಕಾಶವನ್ನೂ ಸರ್ಕಾರ ಕೇಳಿತ್ತು. ಇದೀಗ ವರ್ತೂರು ಕೆರೆಯಲ್ಲೂ ನೊರೆ ಏಳುವುದಕ್ಕೆ ಆರಂಭವಾಗಿ ದ್ವಿಚಕ್ರವಾಹನ ಸವಾರರಿಗೆ ದುಸ್ವಪ್ನ ಎನ್ನಿಸಿದೆ.[ಶುರುವಾಗುತ್ತಿದೆ ಬೆಂಗಳೂರು ಕೆರೆ ಉಳಿಸುವ ಅಭಿಯಾನ]
|
ಸಾಂಕ್ರಾಮಿಕ ರೋಗದ ಭಯ
|
ಮುಖ್ಯಮಮಂತ್ರಿಯನ್ನು ಮುಟ್ಟುವುದಕ್ಕೆ ಮೇಲೇಳುತ್ತಿದೆ ನೊರೆ!
|
ಬೆಂಗಳೂರಿನಲ್ಲಿ ರಾಸಾಯನಿಕ ಮಂಜಿನ ಮಳೆ!
ಬೆಂಗಳೂರಿನಲ್ಲಿ ಸುರಿದ ಮಳೆಗೆ ವರ್ತೂರು ಕೆರೆಯಲ್ಲಿ ರಾಸಾಯನಿಕ ಮಂಜಿನ ಮಳೆಯಾಗುತ್ತಿದೆ!
|
ಮಾನ ಹರಾಜು!
ಈ ವಿಡಿಯೋ ನೋಡಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉದ್ಯಾನನಗರಿಯ ಮಾನ ಹರಾಜಾಗದೆ ಇರುತ್ತದೆಯೇ?
|
ಮಳೆಯ ನಂತರದ ಮಂಜು!
ಭಾರಿ ಮಳೆಯ ನಂತರ ಬೆಂಗಳೂರಿನಲ್ಲಿ ಸುರಿದ ಮಂಜು ಎಂದು ವ್ಯಂಗ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವರ್ತೂರು ಕೆರೆಯ ಸ್ಥಿತಿಯನ್ನು ಟೀಕಿಸಲಾಗುತ್ತಿದೆ.
-
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ












Click it and Unblock the Notifications