ಚಿನ್ನಸ್ವಾಮಿ ಕ್ರೀಡಾಂಗಣ ಬಾಂಬ್ ಸ್ಫೋಟ ಪ್ರಕರಣ: ಆರೋಪಿಗಳ ತಪ್ಪೊಪ್ಪಿಗೆ
ಬೆಂಗಳೂರು, ಜುಲೈ 4: 2010ರ ಐಪಿಎಲ್ ಪಂದ್ಯಾವಳಿ ವೇಳೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳು ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ.
ಬಿಹಾರದ ದರ್ಬಾಂಗದ ಗೌಹರ್ ಅಜೀಜಿ ಕೋಮನಿ, ಮಧುಬನಿಯ ಕಮಲ್ ಹಸನ್ ಹಾಗೂ ನವದೆಹಲಿಯ ಮಹಮದ್ ತಾರೀಕ್ ಅಂಜು ಎಹ್ಸಾನ್ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್ಐಎ ವಿಶೇಷ ನ್ಯಾಯಾಲಯದ ಮುಂದೆ ಬುಧವಾರ ತಪ್ಪೊಪ್ಪಿಗೆ ಅಫಿಡವಿಟ್ ಸಲ್ಲಿಸಿದರು.
ತಪ್ಪೊಪ್ಪಿಗೆ ಹೇಳಿಕೆ ನೀಡುವಂತೆ ಯಾರಾದರೂ ಒತ್ತಡ ಹೇರಿದ್ದಾರೆಯೇ ಎಂದು ಪ್ರಶ್ನಿಸಿದ ಎನ್ಐಎ ನ್ಯಾಯಾಲಯದ ನ್ಯಾಯಾಧೀಶರು, ಆದೇಶವನ್ನು ಜುಲೈ 9ಕ್ಕೆ ನಿಗದಿಪಡಿಸಿದರು.

ಅಂದು ಸರ್ಕಾರ ಹಾಗೂ ಆರೋಪಿಗಳ ಪರ ವಕೀಲರು ವಾದ ಮಂಡಿಸಲಿದ್ದಾರೆ.
ಜಿಹಾದ್ ಹೆಸರಿನಲ್ಲಿ ಬಾಂಬ್ ಸ್ಫೋಟಕ್ಕೆ ಸಹಕರಿಸುವಂತೆ ಕೆಲವರು ತಮ್ಮನ್ನು ಪ್ರಚೋದಿಸಿದರು. ಎಸಗಿರುವ ಅಪರಾಧದ ಬಗ್ಗೆ ಪಶ್ಚಾತ್ತಾಪ ಉಂಟಾಗಿದೆ. ತಪ್ಪೊಪ್ಪಿಗೆ ಹೇಳಿಕೆ ನೀಡುತ್ತಿದ್ದು, ಶಿಕ್ಷೆ ಪ್ರಮಾಣ ಕಡಿಮೆ ಮಾಡಿ ಎಂದು ಆರೋಪಿಗಳು ಮನವಿ ಮಾಡಿದರು.
2010ರ ಆಗಸ್ಟ್ 27ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಸಂಜೆ ಪಂದ್ಯ ನಡೆದಿತ್ತು. ಪಂದ್ಯದ ಆರಂಭಕ್ಕೆ ಕೆಲವೇ ನಿಮಿಷಗಳ ಮೊದಲು ಕ್ರೀಡಾಂಗಣದ ಹೊರಭಾಗದಲ್ಲಿ ಲಘು ಪ್ರಮಾಣದ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಹರ್ ಅಜೀಜಿ ಕೋಮನಿ, ಕಮಲ್ ಹಸನ್, ಮೊಹಮ್ಮದ್ ಕಫೀಲ್ ಅಖ್ತರ್ ಹಾಗೂ ನವದೆಹಲಿಯ ಮಹಮದ್ ತಾರೀಕ್ ಅಂಜುಮ್ ಎಹ್ಸಾನ್ ಅವರನ್ನು ಬಂಧಿಸಲಾಗಿತ್ತು.
ಶಿಕ್ಷೆಯಲ್ಲಿ ವಿನಾಯಿತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಮಂಗಳವಾರ ತಿರಸ್ಕರಿಸಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications