ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೃಷ್ಣಾದಲ್ಲಿ ಮುಖ್ಯಮಂತ್ರಿ ಭೇಟಿಗೆ ಸಾರ್ವಜನಿಕರಿಗೆ ಅವಕಾಶ!

By Nayana
|
Google Oneindia Kannada News

Recommended Video

ಇನ್ಮುಂದೆ ಗೃಹ ಕಚೇರಿ ಕೃಷ್ಣಾದಲ್ಲಿ ಜನರಿಗಾಗಿ ಸಿಗಲಿದ್ದಾರೆ ಎಚ್ ಡಿ ಕುಮಾರಸ್ವಾಮಿ | Oneindia Kannada

ಬೆಂಗಳೂರು, ಮೇ 24: ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿರುವ ದಿನಗಳಲ್ಲಿ ಪ್ರತಿದಿನ ಬೆಳಗ್ಗೆ 10ರಿಂದ 11 ಗಂಟೆಯವರೆಗೆ ಸಾರ್ವಜನಿಕರು, ಗಣ್ಯರ ಭೇಟಿಗೆ ಲಭ್ಯವಿರಲಿದ್ದಾರೆ.

ಅವರ ಜೆಪಿನಗರದ ಖಾಸಗಿ ನಿವಾಸದಲ್ಲಿ ಜನದಟ್ಟಣೆಯಿಂದ ಬಡಾವಣೆಯ ಇತರೆ ನಿವಾಸಿಗಳಿಗೆ ಅಡಚಣೆಯಾಗುವುದರಿಂದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಇಚ್ಛಿಸುವವರು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗುವಂತೆ ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದ 25ನೇ ಮುಖ್ಯಮಂತ್ರಿಯಾದ ಎಚ್ ಡಿ ಕುಮಾರಸ್ವಾಮಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾದ ಎಚ್ ಡಿ ಕುಮಾರಸ್ವಾಮಿ

ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಮೇ 23ರಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಾಗೆಯೇ ಜಿ. ಪರಮೇಶ್ವರ್ ಅವರು ಉಪಮುಖಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

CM HD Kumaraswamy available for public in Krishna

ಈ ಹಿಂದೆ ಎಚ್‌ಡಿ ಕುಮಾರಸ್ವಾಮಿಯವರು 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ, ಜನತಾ ದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರು, ಜತೆಗೆ ಗ್ರಾಮ ವಾಸ್ತವ್ಯವನ್ನು ಹೂಡುತ್ತಿದ್ದು, ಜನರೊಂದಿಗೆ ಬೆರೆಯುತ್ತಿದ್ದರು. ಇದೀಗ ಸಾರ್ವಜನಿಕರಿಗಾಗಿ ಬೆಳಗ್ಗೆ 10ರಿಂದ 11 ಗಂಟೆಯವರೆಗೆ ಕಾಲಾವಕಾಶವನ್ನು ಒದಗಿಸಿಕೊಟ್ಟಿದ್ದಾರೆ.

English summary
Chief Minister H.D. Kumaraswamy will be available for public at his home office Krishna everyday from 10 am to 11 am whenever he is in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X