ದಿಟ್ಟ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ನಿಧನಕ್ಕೆ ಕಂಬನಿ ಮಿಡಿದ HDK
Recommended Video
ಬೆಂಗಳೂರು, ಡಿಸೆಂಬರ್ 29: ಎಚ್ 1 ಎನ್ 1ಖಾಯಿಲೆಗೆ ತುತ್ತಾಗಿ ಶುಕ್ರವಾರ ನಿಧನರಾದ ನಿಷ್ಠಾವಂತ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಅವರ ಅಗಲಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
"ಅತ್ಯುತ್ತಮ ಅಧಿಕಾರಿಯಾಗಿದ್ದ ಅವರು ನೇರ ನಡೆನುಡಿಗಳಿಂದ ಜನಪ್ರಿಯರಾಗಿದ್ದರು. ಅವರ ಅಕಾಲಿಕ ನಿಧನ ತೀವ್ರ ಆಘಾತ ಉಂಟು ಮಾಡಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬದವರಿಗೆ ಈ ಆಘಾತ ಸಹಿಸುವ ಶಕ್ತಿ ನೀಡಲಿ" ಎಂದು ಎಚ್ ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ವಿಧಿವಶ
ಹೈದರಾಬಾದ್ನ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಮಧುಕರ ಶೆಟ್ಟಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮೂರು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆಪರೇಷನ್ ಬಳಿಕ ರಕ್ತಸ್ರಾವ, ಮಧುಕರ್ ಶೆಟ್ಟಿ ಆರೋಗ್ಯ ಸ್ಥಿತಿ ಗಂಭೀರ
ಚಿಕ್ಕಮಗಳೂರು ಎಸ್ಪಿಯಾಗಿ ಕೆಲಸ ಮಾಡಿದ್ದ ಮಧುಕರ ಶೆಟ್ಟಿ ಅವರು ಬೆಂಗಳೂರು ಲೋಕಾಯುಕ್ತ ಎಸ್ಪಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.