ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿ, ಬಾಗಲಕೋಟೆ ರೈತರ ಜೊತೆ ಇಂದು ಕುಮಾರಸ್ವಾಮಿ ಸಭೆ

|
Google Oneindia Kannada News

Recommended Video

BELAGAVI : ಬೆಳಗಾವಿ, ಬಾಗಲಕೋಟೆ ರೈತರ ಜೊತೆ ಇಂದು ಕುಮಾರಸ್ವಾಮಿ ಸಭೆ | Oneindia Kannada

ಬೆಂಗಳೂರು, ನವೆಂಬರ್ 20: ಕಬ್ಬಿನ ಬಾಕಿ ಹಣ ಪಾವತಿ , ರೈತರ ಸಾಲ ಮನ್ನಾ, ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ರೈತರು ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ ರೈತರ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳವಾರ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಬೆಳಗಾವಿ ಹಾಗೂ ಬಾಗಲಕೋಟೆ ರೈತರು ಪಾಲ್ಗೊಳ್ಳಲಿದ್ದಾರೆ. ಸೋಮವಾರವೇ ಬೆಳಗಾವಿ ಪ್ರವಾಸ ಕೈಗೊಳ್ಳಬೇಕಿತ್ತು ಆದರೆ ಸಚಿವ ಸಂಪುಟ ಸಭೆ ಇದ್ದ ಕಾರಣ ಪ್ರವಾಸವನ್ನು ರದ್ದುಗೊಳಿಸಿದ್ದರು.

ಸರ್ಕಾರಕ್ಕೆ 15 ದಿನಗಳ ಗಡುವು ನೀಡಿ ಪ್ರತಿಭಟನೆ ಹಿಂಪಡೆದ ರೈತರು ಸರ್ಕಾರಕ್ಕೆ 15 ದಿನಗಳ ಗಡುವು ನೀಡಿ ಪ್ರತಿಭಟನೆ ಹಿಂಪಡೆದ ರೈತರು

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸೋಮವಾರ ಸಾವಿರಾರು ರೈತರು ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮಜೆಸ್ಟಿಕ್​ನಿಂದ ಫ್ರೀಡಂ ಪಾರ್ಕ್​ವರೆಗೆ ಪ್ರತಿಭಟನಾ ಮೆರವಣಿಗೆ ಹೊರಟು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಹಾಗೂ ಡಿಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದರು. ಇಲ್ಲವಾದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.

CM’s key meet with cane growers today

ಕಬ್ಬು ಬಾಕಿ ಹಣ ಪಾವತಿಸುವಂತೆ ಕಿಸಾನ್‌ ಘಟಕದಿಂದ 'ಕೈ' ನಾಯಕರಿಗೆ ಪತ್ರ ಕಬ್ಬು ಬಾಕಿ ಹಣ ಪಾವತಿಸುವಂತೆ ಕಿಸಾನ್‌ ಘಟಕದಿಂದ 'ಕೈ' ನಾಯಕರಿಗೆ ಪತ್ರ

ರೈತ ಮಹಿಳೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಿಎಂ ಕುಮಾರಸ್ವಾಮಿ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದರು. ಅನ್ನದಾತರು ಉರಿಬಿಸಿಲಿನಲ್ಲೇ ರಸ್ತೆಯಲ್ಲೇ ಮಲಗಿ ಹೋರಾಟ ನಡೆಸಿದರು, ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ, ಬೇಡಿಕೆ ಈಡೇರಿಸಲು 15 ದಿನಗಳ ಗಡುವು ನೀಡಿ ತಮ್ಮ ಊರುಗಳ ಕಡೆ ನಡೆದರು.

English summary
Chief minister HD Kumarswamy will meet sugarcane growers of North Karnataka at 3pm in Vidhana Soudha on Tuesday. He is likely to announce some relief measures for sugarcane growers. On Sunday, the CM had directed officials to ensure that all sugar factories in Belagavi clear the dues they owe to farmers. But he did not set any deadline.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X