ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಅವಘಡ ತನಿಖೆಗೆ ಆಯೋಗ: ಪಿಐಎಲ್ ತಿರಸ್ಕರಿಸಿದ ಹೈಕೋರ್ಟ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 14: ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ವರದಿ ಹಾಗೂ ಶಿಫಾರಸ್ಸು ಸಲ್ಲಿಸುವ ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ವರದಿ ಹಾಗೂ ಶಿಫಾರಸ್ಸು ಸಲ್ಲಿಸುವ ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಬೇಕೆಂದು ಕೋರಿ ಕೊಡಗು ಜಿಲ್ಲೆಯ ಜೆ,ಎಸ್. ವಿರೂಪಾಕ್ಷ ಅವರು ಪಿಐಎಲ್ ಹಾಕಿದ್ದರು. ಮಳೆಯಿಂದಾಗಿ ಕೊಡಗು ಜಿಲ್ಲೆಯ 32ಕ್ಕೂ ಹೆಚ್ಚು ಗ್ರಾಮಗಳಲ್ಲಿನ ಮನೆಗಳು, ಭೂಮಿ, ರಸ್ತೆಗಳು ಕೊಚ್ಚಿಕೊಂಡು ಹೋಗಿವೆ.

ಕೊಡಗು : ನಿರಾಶ್ರಿತರ ತಾತ್ಕಾಲಿಕ ಶೆಡ್ ಹೀಗಿದೆ ನೋಡಿ ಕೊಡಗು : ನಿರಾಶ್ರಿತರ ತಾತ್ಕಾಲಿಕ ಶೆಡ್ ಹೀಗಿದೆ ನೋಡಿ

ಹೀಗಾಗಿ, ಕೊಡಗು ಜಿಲ್ಲೆಯ‌ ನೆರೆ ಪರಸ್ಥಿತಿ ಸಂಪೂರ್ಣವಾಗಿ ಅಧ್ಯಯನ ಮಾಡಿ ವರದಿ ಹಾಗೂ ಶಿಫಾರಸು ಸಲ್ಲಿಸಲು ನ್ಯಾಯಾಂ ತನಿಖಾ ಆಯೋಗವನ್ನು ರಚಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ. ಮುಖ್ಯ ನ್ಯಾಯಮೂರ್ತಿ ದಿನೇಶ ಮಹೇಶ್ವರಿ ನೇತೇತ್ವದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿದೆ. ಪ್ರವಾಹಕ್ಕೆ ಕಾರಣವಾದ ಅಂಶ ಮತ್ತು ಪರಿಹಾರ ಕ್ರಮಗಳು ಕುರಿತಂತೆ ನ್ಯಾಯಾಂಗ ರಚಿಸುವಂತೆ ಹೈಕೋರ್ಟ್ ಗೆ ಕೋರಿದ್ದರು.

Commission for Kodagu: HC rejects PIL

ಚಿತ್ರಗಳು : ಕೊಡಗಿನಲ್ಲಿ ಕೇಂದ್ರ ಅಧ್ಯಯನ ತಂಡದಿಂದ ನಷ್ಟ ಅಂದಾಜು ಚಿತ್ರಗಳು : ಕೊಡಗಿನಲ್ಲಿ ಕೇಂದ್ರ ಅಧ್ಯಯನ ತಂಡದಿಂದ ನಷ್ಟ ಅಂದಾಜು

ಕೊಡಗಿನಲ್ಲಿ ಮುಂಗಾರು ಮಳೆ ತೀವ್ರತೆ ಹೆಚ್ಚಳವಾಗಿ ಪ್ರವಾಹ ಸೃಷ್ಟಿಯಾಗಿದ್ದು, ಲಕ್ಷಾಂತರ ಕುಟುಂಬಗಳು ಬೀದಿಪಾಲಾಗಿದ್ದವು, ಸಾವಿರಾರು ಎಕರೆ ಜಮೀನು ಪ್ರವಾಹಕ್ಕೆ ತುತ್ತಾಗಿತ್ತು.

English summary
Karnataka high court had rejected a public interest litigation appeal seeking judicial enquiry commission on Kodagu flood tragedy on Friday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X