ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗುಡ್ ನ್ಯೂಸ್: ಮೈಸೂರು ಯದುವಂಶದ ಕುಡಿ ಆಗಮನಕ್ಕೆ ಕ್ಷಣಗಣನೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 6 : ಮೈಸೂರಿನ ಅರಮನೆಯಲ್ಲೀಗ ಸಂಭ್ರಮವೋ ಸಂಭ್ರಮ. ಸುಮಾರು ಆರು ದಶಕಗಳ ಬಳಿಕ ಯದುವಂಶದ ಕುಡಿ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ.

ಮೈಸೂರು ಅರಸರಿಗೆ ಅಲಮೇಲಮ್ಮನ ಶಾಪ ವಿಮೋಚನೆ ಆಗಿದೆಯಾ, ಇಲ್ಲಿದೆ ಉತ್ತರಮೈಸೂರು ಅರಸರಿಗೆ ಅಲಮೇಲಮ್ಮನ ಶಾಪ ವಿಮೋಚನೆ ಆಗಿದೆಯಾ, ಇಲ್ಲಿದೆ ಉತ್ತರ

ಮೈಸೂರಿನ ರಾಜವಂಶಸ್ಥ ಯದುವೀರ್ ಅರಸ್ ಅವರ ಪತ್ನಿ ತ್ರಿಷಿಕಾ ಕುಮಾರಿ ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ತ್ರಿಷಿಕಾ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಇಂದಿರಾನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ರಾತ್ರಿ ಅಥವಾ ಗುರುವಾರ ಹೆರಿಗೆ ಆಗುವು ಸಾಧ್ಯತೆಗಳಿವೆ. ಈ ಮೂಲಕ ಮೈಸೂರು ರಾಜವಂಶಸ್ಥರಿಗೆ ತಟ್ಟಿದೆ ಎನ್ನಲಾಗಿದ್ದ ಅಲಮೇಲಮ್ಮನ ಶಾಪ ವಿಮೋಚನೆಯಾದಂತಾಗಿದೆ.

 Countdown begins for a new member of the Mysuru royal family

ಶ್ರೀರಂಗಪಟ್ಟಣದ ರಾಜನ ಪತ್ನಿ ಅಲಮೇಲಮ್ಮ ಶಾಪದಿಂದಾಗಿ ಒಡೆಯರ್ ವಂಶದ ಅರಸರಿಗೆ ಮಕ್ಕಳು ಆಗುತ್ತಿರಲಿಲ್ಲ ಎಂದು ಜನಪದೀಯ ಕಥೆಯೊಂದು ಇದೆ.

ಆದರೆ, ಆ ಶಾಪದಿಂದ ಮುಕ್ತಿ ದೊರೆತಂತಿದೆ. ಪ್ರಮೋದಾದೇವಿ ಒಡೆಯರ್ ದತ್ತುಪುತ್ರ ಯದುವೀರ ಅವರ ಪತ್ನಿ ತ್ರಿಷಿಕಾಗೆ ಇದೀಗ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಇನ್ನೇನು ಯದುವಂಶದ ಕುಡಿ ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ.

English summary
Countdown begins for a new member of the Mysuru royal family. Scion of the Mysuru royal family Yaduveer's wife Trishika Kumari is admitted to a private hospital in Bengaluru on December 6. Trishika likely to deliver today or tomorrow
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X