ದರೋಡೆ ಮಾಡಿ ಮತ್ತೆ ಪಂಜರ ಸೇರಿದ ಪಾರಿವಾಳ ಮಂಜ
ಬೆಂಗಳೂರು, ಜೂ. 17 : ಆರು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಗೊಂಡಿದ್ದ ಪಾರಿವಾಳ ಮಂಜ ಮತ್ತೆ ಜೈಲು ಸೇರಿದ್ದಾನೆ. ಪಾರಿವಾಳ ಹಿಡಿಯಲು ಹೋಗುತ್ತಿದ್ದೇನೆ ಎಂದು ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಂಜನನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಮಂಜುನಾಥ ಅಲಿಯಾಸ್ ಪಾರಿವಾಳ ಮಂಜನ (32) ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ 4, ಕಬ್ಬನ್ಪಾರ್ಕ್ ಠಾಣೆಯಲ್ಲಿ 3 ಪ್ರಕರಣ ದಾಖಲಾಗಿತ್ತು. ಬಂಧತ ಮಂಜನಿಂದ 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. [ಬೈಕ್ ಕದ್ದು, ಪೊಲೀಸರಿಗೆ ಪತ್ರ ಬರೆದ]

ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ ಮಂಜ ಜೈಲು ಸೇರಿದ್ದ. ಆರು ತಿಂಗಳ ಹಿಂದಷ್ಟೇ ಜೈಲಿನಿಂದ ಹೊರಗೆ ಬಂದಿದ್ದ. ಪುನಃ ಮನೆಗಳಲ್ಲಿ ಕಳ್ಳತನ ಮಾಡಲು ಹೋಗಿ ಸಿಕ್ಕಿಬಿದ್ದು, ಜೈಲು ಸೇರಿದ್ದಾನೆ.
ಹೇಗೆ ಕದಿಯುತ್ತಿದ್ದ ಪಾರಿವಾಳ ಮಂಜ? : 4-5 ಮಹಡಿಗಳ ಮನೆಗಳೇ ಪಾರಿವಾಳ ಮಂಜನ ಟಾರ್ಗೆಟ್. ಮಹಡಿ ಹತ್ತುವ ಮಂಜ ಬೀಗ ಹಾಕಿದ ಮನೆಗಳನ್ನು ನೋಡಿಕೊಂಡು ಕಳ್ಳತನ ಮಾಡುತ್ತಿದ್ದ. ಮಹಡಿ ಹತ್ತುವಾಗ ಯಾರಾದರೂ ಕೇಳಿದರೆ ಪಾರಿವಾಳ ಹಾರಿ ಹೋಗಿದೆ ಅದನ್ನು ತರಲು ಹೋಗುತ್ತಿದ್ದೇನೆ ಎಂದು ಹೇಳುತ್ತಿದ್ದ.
ಒಂದು ವೇಳೆ ಯಾರು ತನ್ನನ್ನು ಗುರುತಿಸದೇ ಇದ್ದರೆ ಬೀಗ ಹಾಕಿರುವ ಮನೆಯನ್ನು ಪತ್ತೆ ಹಚ್ಚಿ ಕಳ್ಳತನ ಮಾಡುತ್ತಿದ್ದ. ಹಲವು ಬಾರಿ ಇದೇ ತಂತ್ರ ಉಪಯೋಗಿಸಿ ಕಳ್ಳತನ ಮಾಡಿರುವ ಮಂಜುನಾಥ ಪಾರಿವಾಳ ಮಂಜನೆಂದೇ ಕುಖ್ಯಾತಿಗಳಿಸಿದ್ದಾನೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications