ಆರ್ಕಿಡ್ಸ್ ಶಾಲೆಗೆ ಈಗ ಕ್ರಿಮಿನಲ್ ಕೇಸ್ ಭೀತಿ
ಬೆಂಗಳೂರು, ಅ.23: ಕರ್ನಾಟಕ ಶಿಕ್ಷಣ ಕಾಯ್ದೆ ಉಲ್ಲಂಘನೆ ಮಾಡಿ ಶಾಲೆ ನಡೆಸುತ್ತಿರುವ ಆರ್ಕಿಡ್ಸ್ ಇಂಟರ್ ನ್ಯಾಷನಲ್ ಶಾಲೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಯುಕ್ತ ಮಹಮ್ಮದ್ ಮೊಹಸೀನ್ ಹೇಳಿದ್ದಾರೆ.
ಶಾಲಾ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ನಂತರ ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಆಯುಕ್ತ ಮೊಹಸೀನ್ ಭೇಟಿ ನೀಡಿದ್ದರು. ಶಾಲೆ ದಾಖಲಾತಿಗಳನ್ನು ಪರಿಶೀಲಿಸಿದ ನಂತರ ಈ ನಿರ್ಧಾರಕ್ಕೆ ಬಂದಿದ್ದಾರೆ. ಆರ್ಕಿಡ್ಸ್ ಆಡಳಿತ ಮಂಡಳಿ ಪ್ರೀ ನರ್ಸರಿ ಶಾಲೆ ನಡೆಸಲು ಅನುಮತಿ ಪಡೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
1 ರಿಂದ 4ನೇ ತರಗತಿ ತನಕ ಕನ್ನಡ ಮಾಧ್ಯಮ ಶಾಲೆ ನಡೆಸಲು ಅನುಮತಿ ನೀಡಲಾಗಿತ್ತು 5 ರಿಂದ 7 ತರಗತಿವರೆಗೂ ನಡೆಸುತ್ತಿದ್ದಾರೆ. ಕನ್ನಡ ಮಾಧ್ಯಮ ತರಗತಿಗೆ ಅನುಮತಿ ಪಡೆದು ಇಂಟರ್ ನ್ಯಾಷನಲ್ ಶಾಲೆ ಹೆಸರಿನಲ್ಲಿ ತರಗತಿ ನಡೆಸುತ್ತಿದ್ದಾರೆ.ಇದಕ್ಕಾಗಿ ರಾಜ್ಯ ಸರ್ಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದುಕೊಂಡಿಲ್ಲ.ಹೀಗಾಗಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿ ಶಾಲೆ ವಿರುದ್ಧ ಸಮೀಪದ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಮೊಹಸೀನ್ ಹೇಳಿದ್ದಾರೆ. [ಅತ್ಯಾಚಾರ ಮಾಡಿದವನು ಗುಂಡಣ್ಣ?]
ಇದರ ಜೊತೆಗೆ ವಿವಾದಿತ ಆರ್ಕಿಡ್ಸ್ ಶಾಲೆಯ ಎಚ್ ಎಂಟಿ ಕಾಲೋನಿ, ಜಾಲಹಳ್ಳಿ ಶಾಖೆ ಅಲ್ಲದೆ, ನಾಗರಬಾವಿ, ಮೈಸೂರು ರಸ್ತೆ, ಸರ್ಜಾಪುರ ರಸ್ತೆ, ಬಿಟಿಎಂ ಲೇಔಟ್, ಹೊರಮಾವು, ಜೆಪಿನಗರ, ಮಾರತ್ ಹಳ್ಳಿ ಶಾಖೆಗಳಿಗೆ ನೀಡಲಾಗಿರುವ ಮಾನ್ಯತೆ ಪತ್ರ ಹಾಗೂ ಅನುಮತಿಗಳನ್ನು ಪರಿಶೀಲಿಸಲಾಗುವುದು ಎಂದು ಆಯುಕ್ತ ಮೊಹಸೀನ್ ಹೇಳಿದ್ದಾರೆ.

ಪೋಷಕರ ಸಭೆ : ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್ಎಂಟಿ ಬಡಾವಣೆ ಬಳಿ ಇರುವ ಆರ್ಕಿಡ್ಸ್ ಶಾಲೆಯಲ್ಲಿ ಗುರುವಾರ ಆಡಳಿತ ಮಂಡಳಿ ಜೊತೆ ಪೋಷಕರ ಸಭೆ ನಡೆಸಲಾಯಿತು. ಪೊಲೀಸರು ನೀಡಿರುವ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಂತೆ ಆಡಳಿತ ಮಂಡಳಿಗೆ ಪೋಷಕರು ಒತ್ತಾಯಿಸಿದರು. ಶನಿವಾರ ಮತ್ತೊಮ್ಮೆ ಸಭೆ ನಡೆಸಲಾಗುತ್ತದೆ.
ತನಿಖೆ ಪ್ರಗತಿಯಲ್ಲಿದೆ: ಶಾಲೆಯ ಸಿಇಒ ಡಿಕೋಸ್ತಾ, ಹೈದರಾಬಾದ್ ಮೂಲದ ಶಾಲಾ ಮಾಲೀಕರಿಗೆ ಪೊಲೀಸರು ಸಮನ್ಸ್ ನೀಡಿದ್ದು ಇಬ್ಬರನ್ನು ಗುರುವಾರ ವಿಚಾರಣೆ ಮಾಡುವ ಸಾಧ್ಯತೆಯಿದೆ.[ಎಂಎನ್ ರೆಡ್ಡಿ ಹೇಳಿದ್ದೇನು?]
ಶಾಲಾ ಮಂಡಳಿ ಸ್ಪಷ್ಟನೆ: ಶಾಲೆಯಲ್ಲಿ ಸಾಕಷ್ಟು ಭದ್ರತೆ ಒದಗಿಸಲಾಗುತ್ತದೆ. ಇನ್ಮುಂದೆ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗುವುದು. ವಿಬ್ ಗಯಾರ್ ಶಾಲೆ ಘಟನೆ ನಂತರ ಪೊಲೀಸರು ನೀಡಿರುವ ಮಾರ್ಗ ಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳನ್ನೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಮುಖ್ಯಸ್ಥ ವೆಂಕಟ ನಾರಾಯಣ ಭರವಸೆ ನೀಡಿದ್ದಾರೆ.
ಶಾಲಾ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಪೂರ್ಣ ವರದಿ ನೀಡಲು ಶನಿವಾರ ತನಕ ಕಾಲಾವಕಾಶ ಬೇಕು ಎಂದು ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. ಘಟನೆಗೆ ಸಂಬಂಧಿಸಿದಂತೆ ಈಗಾಗಲೆ ಶಾಲೆಯ ಬೋಧಕೇತರ ಸಿಬ್ಬಂದಿ ಗುಂಡಣ್ಣ ಎಂಬುವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಎಲ್ಲವೂ ಸರಿಯಾಗಿದೆ ಎನಿಸಿದರೆ ಮಾತ್ರ ಸೋಮವಾರದಿಂದ ಎಂದಿನಂತೆ ಶಾಲೆಗೆ ಮಕ್ಕಳನ್ನು ಕಳಿಸುತ್ತೇವೆ ಎಂದು ಪೋಷಕರು ಖಡಕ್ ಆಗಿ ಹೇಳಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications