ನೋಟ್ ಬ್ಯಾನ್ ನಂತರ, ಕರ್ನಾಟಕದಲ್ಲಿ 600 ಕೋಟಿ ರು ವಶ
ಇಲ್ಲಿ ತನಕ ದೇಶದಾದ್ಯಂತ ನಡೆದ ಐಟಿ ದಾಳಿಗಳಿಂದ ಸರಿ ಸುಮಾರು 3,000 ಕೋಟಿ ರು ಗೂ ಅಧಿಕ ಮೌಲ್ಯದ ಅಕ್ರಮ ಅಸ್ತಿ ಜಪ್ತಿ ಮಾಡಲಾಗಿದೆ.ಈ ಪೈಕಿ ಶೇ 20ರಷ್ಟು ಕರ್ನಾಟಕದಿಂದಲೇ ಜಪ್ತಿಯಾಗಿದೆ.
ಬೆಂಗಳೂರು, ಡಿಸೆಂಬರ್ 16: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 8ರಂದು 500 ಹಾಗೂ 1,000 ರು ಮುಖಬೆಲೆ ನೋಟುಗಳನ್ನು ನಿಷೇಧಿಸಿದ ಬಳಿಕ ದೇಶದಾದ್ಯಂತ ಐಟಿ ದಾಳಿ ಹೆಚ್ಚಾಗಿದ್ದು ತಿಳಿದಿರಬಹುದು. ಇಲ್ಲಿ ತನಕ ದೇಶದಾದ್ಯಂತ ನಡೆದ ಐಟಿ ದಾಳಿಗಳಿಂದ ಸರಿ ಸುಮಾರು 3,000 ಕೋಟಿ ರು ಗೂ ಅಧಿಕ ಮೌಲ್ಯದ ಅಕ್ರಮ ಅಸ್ತಿ ಜಪ್ತಿ ಮಾಡಲಾಗಿದೆ.
ಈ ಪೈಕಿ ಶೇ 20ರಷ್ಟು ಕರ್ನಾಟಕದಿಂದಲೇ ಜಪ್ತಿ ಮಾಡಲಾಗಿದ್ದು, 48 ಪ್ರಕರಣಗಳ ಪೈಕಿ 23 ಪ್ರಕರಣಗಳು ಕರ್ನಾಟಕದ ವಿವಿಧ ಇಲಾಖೆಗಳ ಅಕ್ರಮಗಳ ವಿರುದ್ಧ ದಾಖಲಾಗಿದೆ. ಕರ್ನಾಟಕದಿಂದ ಸರಿ ಸುಮಾರು 600 ಕೋಟಿ ರು ಗೂ ಅಧಿಕ ಅಕ್ರಮ ಹಣ ವಶ ಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಮೊತ್ತದ ಪೈಕಿ 2,000 ರುಪಾಯಿ ಹೊಸ ನೋಟುಗಳೇ ಅಧಿಕವಾಗಿವೆ. 29.86 ಕೋಟಿ ಜಪ್ತಿಯಾದ ಮೊತ್ತ ಮೊತ್ತದಲ್ಲಿ 20.22 ಕೋಟಿ ರು 2000 ಮುಖಬೆಲೆಯದ್ದಾಗಿದೆ. 41.6 ಕಿಲೋಗ್ರಾಮ್ ಚಿನ್ನದ ಗಟ್ಟಿ ಹಾಗೂ 14 ಕೆಜಿ ಆಭರಣಗಳು ಜಪ್ತಿಯಾಗಿವೆ.
ದೊಡ್ಡ ಮೌಲ್ಯದ ವ್ಯವಹಾರ: ದೊಡ್ಡ ಮೌಲ್ಯದ ವ್ಯವಹಾರ ಮಾಡುವ ನಗರಗಳ ಪೈಕಿ ಕರ್ನಾಟಕದ ರಾಜಧಾನಿ ಬೆಂಗಳೂರು ಅಗ್ರಸ್ಥಾನದಲ್ಲಿದೆ. 2010ರಿಂದ 2016ರ ತನಕ 2,47,002 ಮೌಲ್ಯದ ವ್ಯವಹಾರ ನಡೆದಿದ್ದು, ನವೆಂಬರ್ 8ರ ನಂತರ ವ್ಯವಹಾರಗಳೆಲ್ಲವೂ ಅಕ್ರಮ ಹಾದಿ ಹಿಡಿದಿವೆ.
ಕರ್ನಾಟಕ ಹಾಗೂ ಗೋವಾ ವಲಯದ ಆದಾಯ ತೆರಿಗೆ ಇಲಾಖೆ ನಿರ್ದೇಶಕರ ಪ್ರಕಾರ 1,000 ಕೋಟಿ ರು ಅವ್ಯವಹಾರ ನಡೆದಿದ್ದು, ಬ್ಯಾಂಕರ್ಸ್, ಸರ್ಕಾರಿ ಅಧಿಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಅವ್ಯವಹಾರದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾಗಿದ್ದಾರೆ. ಒಟ್ಟಾರೆ ನವೆಂಬರ್ 8ರಿಂದ ಇಲ್ಲಿ ತನಕ 36 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications