ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂತೂ ಇಂತೂ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್: ದಿನೇಶ್ ಘೋಷಣೆ

|
Google Oneindia Kannada News

ಬೆಂಗಳೂರು, ನವೆಂಬರ್ 14: ನವೆಂಬರ್ ತಿಂಗಳ ಅಂತ್ಯದ ಒಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಸಚಿವ ಸಂಪುಟ ವಿಸ್ತರಣೆಗೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಕಾಂಗ್ರೆಸ್ ನಾಯಕರಲ್ಲಿ ಹೊಸ ಉತ್ಸಾಹ ಮೂಡಿದ್ದು,ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಜವಾಹರಲಾಲ್ ನೆಹರು ಜಯಂತಿ ಕಾರ್ಯಕ್ರಮದ ಬಳಿಕ ಕೆಪಿಸಿಸಿ ಅಧ್ಯಕ್ಷರು ಈ ವಿಷಯ ಪ್ರಕಟಿಸಿದ್ದಾರೆ.

ಮತ್ತೆ ಸಂಪುಟ ವಿಸ್ತರಣೆ ಮುಂದಕ್ಕೆ, ಈ ಬಾರಿ ಏನು ಕಾರಣ?ಮತ್ತೆ ಸಂಪುಟ ವಿಸ್ತರಣೆ ಮುಂದಕ್ಕೆ, ಈ ಬಾರಿ ಏನು ಕಾರಣ?

ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಹಾಗೂ ಕಾಂಗ್ರೆಸ್ ಹಿರಿಯ ನಾಯಕರು ವಿದೇಶ ಪ್ರವಾಸದಲ್ಲಿದ್ದಾರೆ ಅವರು ವಾಪಸಾದ ತಕ್ಷಣವೇ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದರು.

Dinesh Gundurao announces cabinet expansion before end of November

ಈ ಮೂಲಕ ಕಾಂಗ್ರೆಸ್ ನಲ್ಲಿ ಮತ್ತೆ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಶಾಸಕರಲ್ಲಿ ಲಾಭಿ ಶುರುವಾಗಲಿದೆ. ಪ್ರಧಾನಿ ಮೋದಿ ಎಲ್ಲರನ್ನೂ ಮುಗಿಸುತ್ತಿದ್ದಾರೆ. ಅವರ ಪಕ್ಷದವರನ್ನೂ ಮುಗಿಸಿದ ಉದಾಹರಣೆ ಇದೆ. ಬಿಜೆಪಿಯಲ್ಲಿ ಉದಾರ ಚಿಂತನೆ ಇಲ್ಲ. ಬಿಜೆಪಿಗೆ ಅಪಪ್ರಚಾರವೇ ಮುಖ್ಯ. ಮಾಧ್ಯಮಗಳಿಗೂ ಸತ್ಯ ತಿಳಿಸಲು ಸಾಧ್ಯವಾಗುತ್ತಿಲ್ಲ.

ಸಂಪುಟ ವಿಸ್ತರಣೆಗೆ ಕಾಂಗ್ರೆಸ್‌ ಮೇಲೆ ಜೆಡಿಎಸ್ ಒತ್ತಡ?ಸಂಪುಟ ವಿಸ್ತರಣೆಗೆ ಕಾಂಗ್ರೆಸ್‌ ಮೇಲೆ ಜೆಡಿಎಸ್ ಒತ್ತಡ?

ದೇಶ ಸಂವಿಧಾನ, ಸಂಸ್ಥೆಗಳನ್ನು ಬುಡಮೇಲು ಮಾಡುವ ಸರ್ವಾಧಿಕಾರ ಆಡಳಿತ ನಡೆಯುತ್ತಿದೆ. ಒಂದೇ ಧರ್ಮ ಇರಬೇಕು, ಒಂದೇ ಭಾಷೆ ಒಬ್ಬನೇ ನಾಯಕ ಇರಬೇಕೆಂಬ ಫ್ಯಾಸಿಸ್ಟ್ ಧೋರಣೆ ವಿರುದ್ಧ ಮುಂದಿನ ಚುನಾವಣೆ ನಡೆಯಲಿದೆ ಎಂದು ಹೇಳಿದರು.

English summary
KPCC president Dinesh Gundurao has said that the state cabinet will be expanded before November end as many leaders will be back who were in foreign trip.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X