ಡಿಕೆ ರವಿ ಕೇಸ್: ಸಿಬಿಐನಿಂದ ಅಧಿಕೃತವಾಗಿ ವಿಚಾರಣೆ ಆರಂಭ
ಬೆಂಗಳೂರು,ಏ.247: ಐಎಎಸ್ ಅಧಿಕಾರಿ ಡಿಕೆ ರವಿ ಡೆತ್ ಕೇಸ್ ಫೈಲ್ ಮತ್ತೆ ಓಪನ್ ಮಾಡಿರುವ ಸಿಬಿಐ ತಂಡ ಅಧಿಕೃತವಾಗಿ ತನಿಖೆ ಆರಂಭಿಸಿದೆ. ಬೆಂಗಳೂರಿನ ಸಿಬಿಐ ಅಧಿಕಾರಿಗಳ ಜೊತೆಗೂಡಿ ಹೆಚ್ಚುವತಿ ಗೃಹ ಕಾರ್ಯದರ್ಶಿಗಳೊಡನೆ ಮಹತ್ವದ ಚರ್ಚೆ ನಡೆಸಿದೆ. ಇದಾದ ಬಳಿಕ ಡಿಕೆ ರವಿ ಆಪ್ತರ ವಿಚಾರಣೆ ಕೈಗೊಳ್ಳುವ ಸೂಚನೆ ಸಿಕ್ಕಿದೆ.
ಸಿಬಿಐ ತಂಡ ಎಫ್ ಐಆರ್ ದಾಖಲಿಸಿಕೊಂಡು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ. ಸಿಬಿಐ ತಂಡದ ಮೊದಲ ಸಮನ್ಸ್ ಯಾರಿಗೆ ಜಾರಿಯಾಗಲಿದೆ. ಯಾವ ಜನಪ್ರತಿನಿಧಿ, ಉದ್ಯಮಿ, ಅಧಿಕಾರಿ ವಿಚಾರಣೆಗೊಳಪಡಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. [ರವಿ ಕಳಿಸಿದ ಕೊನೆ ವಾಟ್ಸಪ್ ಸಂದೇಶದಲ್ಲಿ ಏನಿದೆ?]
ಸಿಬಿಐ ತಂಡ ಮೊದಲಿಗೆ ಡಿಕೆ ರವಿ ಅವರ ಕಾರಿನ ಚಾಲಕನನ್ನು ಪ್ರಶ್ನಿಸಲಿದ್ದು, ನಂತರ ಅವರ ಮಾವ ಹನುಮಂತರಾಯಪ್ಪ ಹಾಗೂ ಇನ್ನಿತರರಿಂದ ಮಾಹಿತಿ ಪಡೆಯಲಿದೆ. ರವಿ ಸಾಯುವುದಕ್ಕೆ ಮುನ್ನ ನಡೆದ ಘಟನಾವಳಿಗಳು ಹಾಗೂ ಸೈಂಟ್ ಜಾನ್ ವುಡ್ಸ್ ಅಪಾರ್ಟ್ಮೆಂಟ್ ಪರಿಶೀಲಿಸಲು ಸಿಬಿಐ ತಂಡ ಮುಂದಾಗಿದೆ. [ರವಿ ಕೇಸ್: ಸಾವು, ಸಿಐಡಿ, ಸಿಬಿಐ ತನಕ ಟೈಮ್ ಲೈನ್]

ಮಾ.23ರಂದು ಕರ್ನಾಟಕ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯಲ್ಲಿದ್ದ ಷರತ್ತುಗಳಿಗೆ ಸಿಬಿಐ ಒಪ್ಪಿರಲಿಲ್ಲ. ಮುಖ್ಯವಾಗಿ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳ್ಳಬೇಕು ಎಂಬ ಷರತ್ತಿಗೆ ಸಿಬಿಐ ಆಕ್ಷೇಪ ವ್ಯಕ್ತಪಡಿಸಿ ಅಧಿಸೂಚನೆ ಹಿಂತಿರುಗಿಸಿತ್ತು. ರವಿ ಕೇಸ್ ಕೈಗೆತ್ತಿಕೊಳ್ಳುವುದೇ ಅನುಮಾನ ಎಂಬ ಪರಿಸ್ಥಿತಿ ನಿರ್ಮಾಣವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.[ರವಿ ಸೂಪರ್ ಟ್ರ್ಯಾಕ್ ರೆಕಾರ್ಡ್]
ಅದರೆ, ಸಿದ್ದರಾಮಯ್ಯ ಸರ್ಕಾರ ತ್ವರಿತಗತಿಯಲ್ಲಿ ನಡೆ ಇಟ್ಟು ಯಾವುದೇ ಷರತ್ತುಗಳಿಲ್ಲದೆ ಮುಕ್ತವಾಗಿ ತನಿಖೆ ನಡೆಸುವಂತೆ ಸಿಬಿಐಗೆ ಮತ್ತೊಮ್ಮೆ ಅಧಿಸೂಚನೆ ಕಳಿಸಿತ್ತು. ಇದಕ್ಕೆ ಕೇಂದ್ರ ಗೃಹಸಚಿವಾಲಯದ ಒಪ್ಪಿಗೆಯೂ ಸಿಕ್ಕಿತ್ತು. ಇದಾದ ಬಳಿಕೆ ಸಿಬಿಐ ತಂಡ ತನ್ನ ತನಿಖೆ ಮುಂದುವರೆಸಿದೆ.
ಈ ನಡುವೆ ಪ್ರಕರಣವನ್ನು ಮತ್ತೊಮ್ಮೆ ಸಿಬಿಐಗೆ ವಹಿಸಿರುವುದನ್ನು ಸ್ವಾಗತಿಸಿದ ರವಿ ಅವರ ಗೆಳತಿ ಐಎಎಸ್ ಅಧಿಕಾರಿ, ಸತ್ಯಕ್ಕೆ ಜಯವಾಗಲಿ ಎಂದು ತಮ್ಮ ಫೇಸ್ ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.
ಸಿಬಿಐನ ಒಂದು ತಂಡ ರವಿ ಅವರ ಮೊಬೈಲ್, ಈಮೇಲ್, ಫೇಸ್ಬುಕ್ ಖಾತೆಗಳನ್ನು ಪರಿಶೀಲಿಸಲಿದೆ. ಈ ಬಗ್ಗೆ ಸೈಬರ್ ಕ್ರೈಂ ವಿಭಾಗದಿಂದ ಮಾಹಿತಿ ಪಡೆದುಕೊಳ್ಳಲಾಗುತ್ತದೆ.ಜೊತೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಲಾದ ಮರಣೋತ್ತರ ಪರೀಕ್ಷೆ ವರದಿ ಹೈದರಾಬಾದ್ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ನಡೆಸಲಾದ ಎಫ್ ಎಸ್ ಎಲ್ ವರದಿಯನ್ನು ಸಿಬಿಐ ತಂಡ ಪಡೆಯಲಿದೆ.
(ಒನ್ ಇಂಡಿಯಾ ಸುದ್ದಿ)
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications