ಡಿಕೆ ರವಿ ಆತ್ಮಹತ್ಯೆ ಕಾರಣ? ತನಿಖೆಯೇ ಅನುಮಾನ!
ಬೆಂಗಳೂರು, ಅ.18: ಐಎಎಸ್ ಅಧಿಕಾರಿ ಡಿಕೆ ರವಿ ಸಾವಿನ ಪ್ರಕರಣದ ಅಂತಿಮ ವರದಿಯನ್ನು ಸಿಬಿಐ ತಂಡ ದೆಹಲಿ ಕಚೇರಿಗೆ ಕಳಿಸಿದೆ. ಡಿಕೆ ರವಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದು, ಈ ಪ್ರಕರಣದಲ್ಲಿ ಯಾರ ಕೈವಾಡವೂ ಇಲ್ಲ ಎಂದು ಸಿಬಿಐ ಹೇಳಿದೆ. ಅದರೆ, ಆತ್ಮಹತ್ಯೆಯ ಕಾರಣ ಏನು ಎಂಬ ಪ್ರಶ್ನೆಗೆ ಉತ್ತರ ಇನ್ನೂ ಸಿಕ್ಕಿಲ್ಲ. ಈ ಪ್ರಶ್ನೆಗೆ ಉತ್ತರ ಸಿಗುವುದು ಕೂಡಾ ಡೌಟು ಎಂಬ ಸುದ್ದಿ ಬಂದಿದೆ.
ಸಿಬಿಐ ತನಿಖಾ ತಂಡ ಸಿದ್ಧಪಡಿಸಿದ ಅಂತಿಮ ವರದಿಯನ್ನು ಹಿರಿಯ ಅಧಿಕಾರಿಗಳು ಪರಿಶೀಲನೆ ಕಳಿಸಿದೆ. ವರದಿಯನ್ನು ಪರೀಶಿಲಿಸಿದದ ಬಳಿಕ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ಮುಂದುವರೆಸಬೇಕೆ? ಬೇಡವೇ? ಎಂದು ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ. ಅದರೆ, ಈ ಪ್ರಕರಣದ ತನಿಖೆ ಮುಂದುವರೆಸುವುದು ತನಿಖಾ ತಂಡಕ್ಕೆ ಬೇಡದ ವಿಷಯವಾಗಿದೆ.

ಕಾರಣ ತಿಳಿಯುವುದಾದರೂ ಹೇಗೆ?: ಡಿಕೆ ರವಿ ಅವರ ಸಾವಿನ ನೈಜ ಕಾರಣ ಮಣ್ಣಲ್ಲಿ ಮಣ್ಣಾಗಿ ಹೋಗುವುದಕ್ಕೂ ಮುನ್ನ ಸಿಬಿಐ ತಂಡ ನಿಜ ಕಾರಣವನ್ನು ಹುಡುಕಿ ಜನತೆ ಮುಂದಿಡಬಹುದಾಗಿದೆ. ಅದರೆ, ಈ ಬಗ್ಗೆ ಕರ್ನಾಟಕ ಸರ್ಕಾರ ಅಥವಾ ಕೋರ್ಟ್ ನಿರ್ದೇಶಿಸಬಹುದಾಗಿದೆ. [ಡಿಕೆ ರವಿಯದು ಆತ್ಮಹತ್ಯೆ]
ಡಿಕೆ ರವಿ ಅವರು ವೈಯಕ್ತಿಕ ಮತ್ತು ಹಣಕಾಸು ಕಾರಣಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವಿಚಾರದಲ್ಲಿ ಡಿಕೆ ರವಿ ಅವರನ್ನು ಅವರ ಸ್ನೇಹಿತರಿಂದ ಮೋಸ ಹೋಗಿದ್ದರು ಎಂದು ಸಿಬಿಐ ತನ್ನ ವರದಿಯಲ್ಲಿ ಹೇಳಿದೆ. ಅದರೆ, ಈ ಬಗ್ಗೆ ಕೂಲಂಕುಷ ತನಿಖೆ ನಡೆಸಿಲ್ಲ. ಸಾವು ಸಂಭವಿಸಿದ್ದು ಹೇಗೆ? ಎಂಬುದಷ್ಟೇ ಈವರೆಗಿನ ತನಿಖೆಯ ಉದ್ದೇಶವಾಗಿತ್ತು. ಅದನ್ನು ಸಿಬಿಐ ಈಗಾಗಲೇ ಸ್ಪಷ್ಟಪಡಿಸಿದೆ. [ಡಿಕೆ ರವಿ ಪ್ರಕರಣದ ಟೈಮ್ ಲೈನ್]
ಈ ಮುಂಚೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ನೀಡಿದ ಮರಣೋತ್ತರ ಪರೀಕ್ಷೆ ವರದಿ, ಹೈದರಾಬಾದಿನ ಸಿಎಫ್ ಎಲ್ ವರದಿ, ಸಿಐಡಿ ಮಧ್ಯಂತರ ವರದಿಯಲ್ಲೂ ಉಸಿರುಗಟ್ಟಿ ರವಿ ಅವರು ಸಾವನ್ನಪ್ಪಿದ್ದಾರೆ ಎಂದು ದಾಖಲಾಗಿದೆ. ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆ ನಂತರದ ವರದಿಯೂ ಡಿಕೆ ರವಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಸ್ಪಷ್ಟಪಡಿಸಿದೆ. [ಡಿಕೆ ರವಿ ಆತ್ಮಹತ್ಯೆ ಹಿಂದೆ ಕ್ರಿಮಿನಲ್ ಸಂಚಿಲ್ಲ: ಸಿಬಿಐ]
ಅದರೆ, ರವಿ ಆತ್ಮಹತ್ಯೆಗೆ ನಿಜವಾದ ಕಾರಣವಾದ ಅಂಶದ ಬಗ್ಗೆ ತಿಳಿಯಬೇಕಾದರೆ ಕರ್ನಾಟಕ ಸರ್ಕಾರ ಮತ್ತೊಮ್ಮೆ ಸಿಬಿಐ ಕೇಂದ್ರ ಕಚೇರಿಗೆ ಮನವಿ ಸಲ್ಲಿಸಬೇಕಾಗುತ್ತದೆ. ಅಥವಾ ಸಿಬಿಐ ಈಗಿನ ವರದಿಯನ್ನು ಕೋರ್ಟೀಗೆ ಸಲ್ಲಿಸಿದ ಮೇಲೆ ಕೋರ್ಟ್ ಏನಾದರೂ ಹೆಚ್ಚಿನ ತನಿಖೆ ಅಗತ್ಯ ಎಂದು ನಿರ್ದೇಶಿಸಿದರೆ ಮಾತ್ರ ಡಿಕೆ ರವಿ ಸಾವಿನ ನಿಗೂಢತೆ ಬಯಲಾಗಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications