ಬೆಂಗಳೂರು -ಚೆನ್ನೈ ಹೈಸ್ಪೀಡ್ ರೈಲು ಯೋಜನೆಗೆ ಚೀನಾ ಅಡ್ಡಗಾಲು
ಬೆಂಗಳೂರು, ಅಕ್ಟೋಬರ್ 16: ದಕ್ಷಿಣ ಭಾರತದ ಪ್ರಮುಖ ನಗರಗಳಾದ ಚೆನ್ನೈ-ಬೆಂಗಳೂರು-ಮೈಸೂರು ನಡುವೆ ತ್ವರಿತಗತಿಯಲ್ಲಿ ಸಂಪರ್ಕ ಸಾಧಿಸುವ ಭಾರತದ ಯೋಜನೆಗೆ ಚೀನಾ ಅಡ್ಡಗಾಲು ಹಾಕಿದೆ.
ಡೋಕ್ಲಂ ಗಡಿ ಬಿಕ್ಕಟ್ಟಿನ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚೀನಾಕ್ಕೆ ಮುಖಭಂಗವಾಗಿದೆ. ಈ ಹಿನ್ನಲೆಯಲ್ಲಿ ಚೀನಾದ ಸರ್ಕಾರಿ ಸ್ವಾಮ್ಯದ China Railway Eryuan Engineering Group Co Ltd (ಸಿಆರ್ಇಇಸಿ) ಕಂಪನಿ, ಹೈಸ್ಪೀಡ್ ರೈಲು ಯೋಜನೆ ಕೈಗೆತ್ತಿಕೊಳ್ಳಲು ಹಿಂದೇಟು ಹಾಕಿರುವ ಸುದ್ದಿ ಬಂದಿದೆ.

ಚೀನಾ, ಜರ್ಮನಿ, ಜಪಾನ್ ಸೇರಿ ಹಲವು ರಾಷ್ಟ್ರಗಳ ಕಂಪನಿಗಳು ಹೈಸ್ಪೀಡ್ ರೈಲು ಯೋಜನೆ ಬಗ್ಗೆ ಆಸಕ್ತಿ ತೋರಿ ಎರಡು ವರ್ಷಗಳು ಕಳೆದಿವೆ. ಅಹಮದಾಬಾದ್- ಮುಂಬೈ ಹೈಸ್ಪೀಡ್ ರೈಲು ಯೋಜನೆ, ಬುಲೆಟ್ ರೈಲು ಕೂಡಾ ಜಪಾನ್ ಕಂಪನಿ ಪಾಲಾಗಿದೆ.
ಆದರೆ, 2016ರಲ್ಲಿ ಅಧ್ಯಯನ ವರದಿ ಸಲ್ಲಿಸಿದ ಚೀನಾ ಕಂಪನಿಯು 510 ಕಿ.ಮೀ. ಉದ್ದದ ಕಾರಿಡಾರ್ ಯೋಜನೆ ಸಿದ್ಧಪಡಿಸಿತ್ತು. ಈ ಯೋಜನೆ ಸಾಕಾರಗೊಂಡರೆ, ಸುಮಾರು 150 ಕಿ.ಮೀ. (ಉದಾ: ಮೈಸೂರು- ಬೆಂಗಳೂರು) ದೂರವನ್ನು ಅಂದಾಜು 30 ನಿಮಿಷಗಳಲ್ಲಿ ಕ್ರಮಿಸಬಹುದು ಎಂದು ವರದಿಯನ್ನು ಭಾರತೀಯ ರೈಲ್ವೆಗೆ ನೀಡಲಾಗಿತ್ತು.
ಇದೇ ರೀತಿ ಸುಮಾರು 360 ಕಿ.ಮೀ.(ಬೆಂಗಳೂರು- ಚೆನ್ನೈ) ಪಯಣಕ್ಕೆ 60 ನಿಮಿಷ ಸಾಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರು-ಚೆನ್ನೈ-ಮೈಸೂರು ಕಾರಿಡಾರ್ ಅಲ್ಲದೆ ಇನ್ನೂ 9 ಹೈಸ್ಪೀಡ್ ರೈಲು ಯೋಜನೆಗೆ ಸಚಿವಾಲಯ ಸಿದ್ಧತೆ ನಡೆಸಿದೆ. ಹಾಲಿ 80 ಕಿ.ಮೀ ಪ್ರತಿ ಗಂಟೆ ವೇಗದಲ್ಲಿ ಚಲಿಸುವ ರೈಲುಗಳು 160 ಕಿ.ಮೀ ಪ್ರತಿ ಗಂಟೆ ವೇಗಕ್ಕೆ ಬದಲಾಗಲಿವೆ.
-
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ












Click it and Unblock the Notifications