ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ಪುತ್ರ ಡಾ.ಯತೀಂದ್ರ ಮೇಲೆ ಅವ್ಯವಹಾರದ ತೂಗುಕತ್ತಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ನೂರಾರು ಕೋಟಿ ಬೇನಾಮಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವರ್ತೂರು ಕನಕದಾಸ ಎನ್ನುವವರು ಆದಾಯ ತೆರಿಗೆ ತನಿಖಾ ವಿಭಾಗದಲ್ಲಿ ದೂರು ದಾಖಲಿಸಿದ್ದಾರೆ.

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಮೇ 08: ನೂರಾರು ಕೋಟಿ ಬೇನಾಮಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವರ್ತೂರು ಕನಕದಾಸ ಎನ್ನುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ಆದಾಯ ತೆರಿಗೆ ತನಿಖಾ ವಿಭಾಗದಲ್ಲಿ ದೂರು ದಾಖಲಿಸಿದ್ದಾರೆ.

ಯತೀಂದ್ರ ಒಡೆತನದ ಮ್ಯಾಟ್ರಿಕ್ ಇಮೇಜಿಂಗ್ ಸಲ್ಯೂಶನ್ಸ್ ಕಂಪೆನಿಯ ವಿರುದ್ಧವೂ ದೂರು ದಾಖಲಿಸಿರುವ ಅವರು, ಬೇನಾಮಿ ಆಸ್ತಿ ವ್ಯವಹಾರಗಳ ಕಾಯ್ದೆ ಅಡಿಯಲ್ಲಿ ತನಿಖೆಗೆ ಆಗ್ರಹಿಸಿದ್ದಾರೆ.[ಅಪ್ಪ ಸಿದ್ದು ಅನುಪಸ್ಥಿತಿಯಲ್ಲಿ ಮಗ ಯತೀಂದ್ರರ ದರ್ಬಾರು!]

Dr.Yathindra is in tension now!

ಇಮೇಜಿಂಗ್ ಸಲ್ಯೂಶನ್ಸ್ ಸಂಸ್ಥೆ ವಿಕ್ಟೋರಿಯಾ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಡಯಾಗ್ನೋಸ್ಟಿಕ್ ಘಟಕ ಸ್ಥಾಪಿಸಲು ಟೆಂಡರ್ ಪಡೆದಿರುವ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಭಾವ ಬಳಸಲಾಗಿದೆ ಎಂಬ ಬಗ್ಗೆಯೂ ಈ ಮೊದಲು ವಿವಾದವೆದ್ದಿತ್ತು. ಇದೀಗ ವರ್ತೂರು ಕನಕದಾಸ ಅವರು ಡಾ.ಯತೀಂದ್ರ ಅವರ ಮೇಲೆ ಇನ್ನೊಂದು ದೂರು ನೀಡಿರುವುದು ಯತೀಂದ್ರ ಅವರ ರಾಜಕೀಯ ಜೀವನದ ಮೇಲೆ ಪ್ರಭಾವ ಬೀರಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಇದುವರೆಗೂ ಯಾವುದೇ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸದಿದ್ದ ಡಾ.ಯತೀಂದ್ರ ಮೈಸೂರಿನಲ್ಲಿ ಆಗಾಗ ರಾಜಕೀಯ ಸಭೆಗಳನ್ನು ಏರ್ಪಡಿಸುತ್ತಿರುವ ಬಗ್ಗೆ ಕಾಂಗ್ರೆಸ್ ಪಾಳೆಯದಲ್ಲೇ ಅಸಮಾಧಾನ ಎದ್ದಿತ್ತು. ಈ ವಿವಾದವನ್ನು ತಣ್ಣಗಾಗಿಸುವ ಉದ್ದೇಶದಿಂದ ಡಾ.ಯತೀಂದ್ರ ಅವರನ್ನು ವರುಣಾ ವಿಧಾನಸಭಾ ಕ್ಷೇತ್ರದ ವಸತಿ ಯೋಜನೆಗಳ ಜಾಗೃತಿ ಸಮಿತಿ ಅಧ್ಯಕ್ಷರನ್ನಾಗಿ ಇತ್ತೀಚೆಗಷ್ಟೇ ಸಿದ್ದರಾಮಯ್ಯ ನೇಮಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

English summary
A man, namely Varthur Kanakadas has approached income tax department to inquire Dr. Yathindra, younger son of chief minister Siddaramaiah in relation with multi crore dealing case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X