ಸರ್ಕಾರಕ್ಕೆ 15 ದಿನಗಳ ಗಡುವು ನೀಡಿ ಪ್ರತಿಭಟನೆ ಹಿಂಪಡೆದ ರೈತರು
ಬೆಂಗಳೂರು, ನವೆಂಬರ್ 19: ಕಬ್ಬು ಬಾಕಿ ಹಣ ಪಾವತಿ, ಬೆಂಬಲ ಬೆಲೆ ನಿಗದಿ, ಸಾಲ ಮನ್ನಾ ಇನ್ನಿತರೆ ವಿಚಾರ ಕುರಿತು ರೈತರು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಷರತ್ತು ಮೇರೆಗೆ ಹಿಂಪಡೆದಿದ್ದಾರೆ. ಸರ್ಕಾರಕ್ಕೆ ಈ ವಿಚಾರ ಕುರಿತು ಒಂದು ನಿರ್ದಿಷ್ಟ ನಿರ್ಧಾರ ಕೈಗೊಳ್ಳಲು 15 ದಿನಗಳ ಗಡುವು ನೀಡು ಪ್ರತಿಭಟನೆ ಹಿಂಪಡೆದಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಇಂದು(ನವೆಂಬರ್ 19) ರೈತರು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು.
ಕಬ್ಬಿಗೆ ನ್ಯಾಯೋಚಿತವಾದ ಬೆಲೆ ನಿಗದಿ ಮಾಡಬೇಕು, ಸಕ್ಕರೆ ಕಾರ್ಖಾನೆಗಳಿಗೆ ಪೂರೈಸಿದ ಕಬ್ಬಿನ ಹಣ ಬಾಕಿ ಪಾವತಿ ಮಾಡಬೇಕು ಹಾಗೂ ಕೂಡಲೇ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.
ಭತ್ತಕ್ಕೆ ಬೆಂಬಲ ಬೆಲೆ:ಕುಮಾರಸ್ವಾಮಿ ಮಹತ್ವದ ಘೋಷಣೆ
ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದಲೂ ರೈತರು ಆಗಮಿಸಲಿದ್ದಾರೆ, ಈ ಹೋರಾಟಕ್ಕೆ ರಾಜ್ಯ ರೈತಸಂಘ , ಹಸಿರು ಸೇನೆ ಬೆಂಬಲ ಸೂಚಿಸಿದೆ. ಹೀಗಾಗಿ 25 ಸಾವಿರಕ್ಕೂ ಹೆಚ್ಚು ರೈತರು ಪಾಲ್ಗೊಂಡಿದ್ದರು.
ರೈತರ ಪ್ರತಿಭಟನೆ, ಸುವರ್ಣ ವಿಧಾನಸೌಧಕ್ಕೆ ಲಾರಿ ನುಗ್ಗಿಸಿದ ರೈತರು!
ಮಂಡ್ಯ ಜಿಲ್ಲೆಯ ನಾಲ್ಕು ಸಕ್ಕರೆ ಕಾರ್ಖಾನೆಗಳಲ್ಲಿ ಈ ಸಾಲಿನಲ್ಲಿ ಸರೆಯುತ್ತಿರುವ ಕಬ್ಬಿನ ಹಣವನ್ನೇ ರೈತರಿಗೆ ಸರಿಯಾಗಿ ಪಾವತಿ ಮಾಡಿಲ್ಲ, ನವೆಂಬರ್ 5ವರೆಗೆ ಸರ್ಕಾರಿ ಸ್ವಾಮ್ಯದ ಮೈಷುಗರ್ ಕಾರ್ಖಾನೆಯು 7.64 ಕೋಟಿ ರೂ, ಭಾರತಿನಗರ ಚಾಮುಂಡೇಶ್ವರಿ ಶುಗರ್ಸ್ 33.81 ಕೋಟಿ ರೂ, ಕೊಪ್ಪದ ಎನ್ಎಸ್ ಎಲ್ ಶುಗರ್ಸ್ 97.06 ಕೋಟಿ ರೂ ಪಾವತಿಸಬೇಕಿದೆ.
ರೈತರ ಪ್ರತಿಭಟನೆ : ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?
ಈ ಸಾಲಿನಲ್ಲಿ ಕೇಂದ್ರ ಸರ್ಕಾರ ಕಬ್ಬಿಗೆ 26613 ರೂ ಎಫ್ಆರ್ಪಿ ನಿಗದಿಪಡಿಸಿದೆ. ಆದರೆ ರಾಜ್ಯ ಸರ್ಕಾರ ಪ್ರೋತ್ಸಾಹ ಧನ ನಿಗದಿಪಡಿಸಿ ಅಂತಿಮ ದರ ಗೊತ್ತುಪಡಿಸಿಲ್ಲ.ಹಾಗಾಗಿ ವಿಧಾನ ಸೌಧ ಮುತ್ತಿಗೆ ಹಾಕಿ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಮನವಿ ಸಲ್ಲಿಸಲಿದ್ದಾರೆ.